ವಾಹನಕ್ಕೆ ಆಪತ್ತು ಎದುರಾದರೆ ಈ ಬಟನ್‌ ಒತ್ತಿ


Team Udayavani, Jan 19, 2019, 10:35 AM IST

19-january-16.jpg

ಬೆಳಗಾವಿ: ನೀವು ಪ್ರಯಾಣಿಸುವ ವಾಹನಕ್ಕೆ ಆಪತ್ತು ಎದುರಾದರೆ, ಪ್ರಯಾಣಿಕರು ಸಂಕಷ್ಟದಲ್ಲಿದ್ದರೆ ಈ ಬಟನ್‌ ಒತ್ತಿದರೆ ಸಾಕು ನೀವು ಇರುವ ಜಾಗಕ್ಕೆ ಪೊಲೀಸರು ಬಂದು ನಿಮ್ಮನ್ನು ರಕ್ಷಣೆಗೆ ನಿಲ್ಲುವ ಮಹತ್ವದ ತಂತ್ರಜ್ಞಾನವನ್ನು ಕೇಂದ್ರ ಸರಕಾರ ಸಿದ್ಧಪಡಿಸಿದ್ದು, ಇನ್ನು ಮುಂದೆ ಇದನ್ನು ಸಾರ್ವಜನಿಕ ಸೇವಾ ವಾಹನಗಳು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ನಿಮ್ಮ ವಾಹನ ಇರುವ ಜಾಗ ಗುರುತಿಸುವ ಜಿಪಿಎಸ್‌ ತಂತ್ರಜ್ಞಾನ ಕೂಡ ಸಿದ್ಧಪಡಿಸಲಾಗಿದೆ. ಲೋಕೇಶನ್‌ ಟ್ರ್ಯಾಕಿಂಗ್‌ ಡಿವೈಸ್‌ ಹಾಗೂ ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಸಲು ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಸೂಚನೆ ನೀಡಿದೆ. ಜ. 1ರಿಂದ ದೇಶಾದ್ಯಂತ ಎಲ್ಲ ಸಾರ್ವಜನಿಕ ಸೇವಾ ವಾಹನಗಳಿಗೆ ಈ ತಂತ್ರಜ್ಞಾನ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ.ಬಟನ್‌ ಒತ್ತಿ ರಕ್ಷಣೆ ಪಡೆಯಿರಿ: ವಾಹನದಲ್ಲಿ ಪ್ರಯಾಣಿಸುವಾಗ ಯಾವುದಾದರೂ ಆಪತ್ತು ಎದುರಾದಾಗ, ಗನ್‌ ತೋರಿಸಿ ದರೋಡೆ ಮಾಡಲು ಬಂದಾಗ, ವಾಹನ ನಿಲ್ಲಿಸಿ ವಂಚಿಸಲು ಬಂದಾಗ ವಾಹನದಲ್ಲಿ ಇರುವವರಿಗೆ ಏನೂ ತೋಚುವುದಿಲ್ಲ. ಪೊಲೀಸರಿಗೆ ಕರೆ ಮಾಡಿ ಮಾಹಿತಿ ಹೇಳಲೂ ಆಗುವುದಿಲ್ಲ. ಭಯಭೀತಗೊಂಡಾಗ ವಾಹನದಲ್ಲಿ ಅಳವಡಿಸಿದ ಪ್ಯಾನಿಕ್‌ ಬಟನ್‌ ಒತ್ತಿದರೆ ಸಾಕು ಅದು ನೇರವಾಗಿ ಪೊಲೀಸರಿಗೆ ಹಾಗೂ ಆ ಸ್ಥಳದಲ್ಲಿ ಪೆಟ್ರೋಲಿಂಗ್‌ನಲ್ಲಿರುವ ಪೊಲೀಸರಿಗೆ ಮಾಹಿತಿ ರವಾನೆ ಆಗುತ್ತದೆ.

ಬರ್ತಾರೆ ಪೊಲೀಸ್ರು: ಅಪಾಯ ಬಂದೆರಗಿದಾಗ ಪ್ಯಾನಿಕ್‌ ಬಟನ್‌ ಒತ್ತಿದ ಕೂಡಲೇ ವಾಹನದ ನೋಂದಣಿ ಸಂಖ್ಯೆ, ವಾಹನ ಇರುವ ಲೋಕೇಶನ್‌ ಬಗ್ಗೆ ಸಮೀಪದ ಬಿಎಸ್‌ಎನ್‌ಎಲ್‌ ಕಚೇರಿಗೆ ಸಂದೇಶ ತಲುಪಿ ಅಲ್ಲಿಂದ ನೇರವಾಗಿ ಕಂಟ್ರೋಲ್‌ ರೂಮ್‌ಗೆ ಮಾಹಿತಿ ರವಾನೆ ಆಗುತ್ತದೆ. ಆ ವಾಹನ ಇರುವ ಸುತ್ತಲೂ ಗಸ್ತಿನಲ್ಲಿರುವ ಪೊಲೀಸರಿಗೂ ಇದರ ಮಾಹಿತಿ ತಲುಪುತ್ತದೆ. ಆಗ ಕೂಡಲೇ ಕ್ಷಣಾರ್ಧದಲ್ಲಿಯೇ ಸ್ಥಳಕ್ಕೆ ಪೊಲೀಸರು ಹಾಜರಾಗುತ್ತಾರೆ. ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನ ಎಲ್ಲಿ ಹೋಗುತ್ತಿದೆ, ಯಾವ ಸ್ಥಳದಲ್ಲಿ ನಿಂತಿದೆ, ಎಷ್ಟು ಸಮಯದವರೆಗೆ ವಾಹನ ನಿಂತುಕೊಂಡಿದೆ ಎಂಬುದರ ನಿಖರ ಹಾಗೂ ಸಂಪೂರ್ಣ ಮಾಹಿತಿ ಜಿಪಿಎಸ್‌ ಮೂಲಕ ಗೊತ್ತಾಗುತ್ತದೆ. ಒಂದು ವೇಳೆ ವಾಹನ ಕಳುವಾದರೂ ಅದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದು ಬರುತ್ತದೆ.

ಮೊಬೈಲ್‌ಗ‌ೂ ಸಿಗುತ್ತೆ ಮಾಹಿತಿ: ವೆಹಿಕಲ್‌ ಟ್ರ್ಯಾಕಿಂಗ್‌ ಹಾಗೂ ಮಾನಿಟರಿಂಗ್‌ ವ್ಯವಸ್ಥೆಯ ಯಂತ್ರವನ್ನು ತಮ್ಮ ವಾಹನಗಳಿಗೆ ಅಳವಡಿಸಿಕೊಂಡಾಗ ಈ ಮೂಲಕವೇ ಎಲ್ಲ ಮಾಹಿತಿ ತಮ್ಮ ಮೊಬೈಲ್‌ಗ‌ೂ ರವಾನೆ ಆಗುತ್ತದೆ. ಯಂತ್ರದಲ್ಲಿ ಸಿಮ್‌ ಅಥವಾ ಚಿಪ್‌ ಅಳವಡಿಸಲಾಗುತ್ತಿದ್ದು, ಈ ಮೂಲಕವೇ ಸಂಪೂರ್ಣ ಮಾಹಿತಿ ಹೋಗುತ್ತದೆ. ವಾಹನದ ಮಾಲೀಕರು ಕುಳಿತಲ್ಲಿಯೇ ತಮ್ಮ ವಾಹನದ ಅಪ್‌ಡೆಟ್ಸ್‌ಗಳನ್ನು ಮೊಬೈಲ್‌ ಆ್ಯಪ್‌ ಅಥವಾ ಕಂಪ್ಯೂಟರ್‌ನಲ್ಲಿ ಪಡೆಯಬಹುದಾಗಿದೆ.

ಪ್ರಾದೇಶಿಕ ಸಾರಿಗೆ ಕಚೇರಿಗೆ ಹೊಸ ವಾಹನಗಳು ನೋಂದಣಿ ಮಾಡಿಸಿಕೊಳ್ಳಲು ಬಂದಾಗ ಜಿಪಿಎಸ್‌ ಹಾಗೂ ಪ್ಯಾನಿಕ್‌ ಬಟನ್‌ಗಳನ್ನು ಅಳವಡಿಸಬೇಕು ಎಂದು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಸೂಚಿಸಿದೆ. ಸದ್ಯ ನೋಂದಣಿ ಮಾಡಿಸಿಕೊಳ್ಳುವ ವಾಹನಗಳು ಮಾತ್ರ ಇದರ ವ್ಯಾಪ್ತಿಯಲ್ಲಿ ಬರುತ್ತವೆ. ಹಳೆಯ ವಾಹನಗಳಿಗೆ ಏ. 2019ರಿಂದ ರಾಜ್ಯ ಸರ್ಕಾರ ಈ ತಂತ್ರಜ್ಞಾನ ಕಡ್ಡಾಯಗೊಳಿಸುವ ಸಾಧ್ಯತೆ ಇದೆ.

ಯಾವ ವಾಹನಕ್ಕೆ ಕಡ್ಡಾಯ?
ವಾಹನಗಳ ಲೋಕೇಶನ್‌ ಗೊತ್ತು ಮಾಡುವ ಜಿಪಿಎಸ್‌ ತಂತ್ರಜ್ಞಾನ ಹಾಗೂ ಪ್ಯಾನಿಕ್‌ ಬಟನ್‌ ಸಾರ್ವಜನಿಕ ಸೇವಾ ವಾಹನಗಳಿಗೆ ಕಡ್ಡಾಯಗೊಳಿಸಲಾಗಿದೆ. ಮೋಟರ್‌ ಕ್ಯಾಬ್‌, ಮ್ಯಾಕ್ಸಿ ಕ್ಯಾಬ್‌, ಕಾಂಟ್ರ್ಯಾಕ್ಟ್ ಕ್ಯಾರೇಜ್‌ ಹಾಗೂ ಸ್ಟೇಜ್‌ ಕ್ಯಾರೇಜ್‌ಗಳಲ್ಲಿ ಇದನ್ನು ಅಳವಡಿಸಲೇಬೇಕು. ಈ ನಿಯಮ ಬೈೆಕ್‌, ಆಟೋ ರಿಕ್ಷಾ, ತ್ರಿಚಕ್ರ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನಿರ್ದೇಶನ ನೀಡಿದೆ.

ಎಲ್ಲ ಸಾರ್ವಜನಿಕ ಸೇವಾ ವಾಹನಗಳಲ್ಲಿ ಲೋಕೇಶನ್‌ ಟ್ರ್ಯಾಕಿಂಗ್‌ ಡಿವೈಸ್‌(ಜಿಪಿಎಸ್‌) ಹಾಗೂ ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಹೀಗಾಗಿ ಸಾರ್ವಜನಿಕರ ಹಾಗೂ ಪ್ರಯಾಣಿಕರ ಹಿತ ದೃಷ್ಟಿಯಿಂದ ಈ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ವಾಹನ ಮಾಲೀಕರು ಹಾಗೂ ಚಾಲಕರು ಜಿಪಿಎಸ್‌ ಹಾಗೂ ಪ್ಯಾನಿಕ್‌ ಬಟನ್‌ ಅಳವಡಿಸಿಕೊಂಡು ಪ್ರಯಾಣಿಕರಿಗೆ ರಕ್ಷಣಾತ್ಮಕ ಸೇವೆ ನೀಡಬೇಕು.
•ಶಿವಾನಂದ ಮಗದುಮ್‌,
 ಉಪ ಸಾರಿಗೆ ಆಯುಕ್ತರು

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.