ಜನರ ಬಾಯಿ ರುಚಿ ತಣಿಸಿದ ಆಹಾರ ಮೇಳ


Team Udayavani, Jan 30, 2019, 9:37 AM IST

30-january-17.jpg

ಚಿಕ್ಕೋಡಿ: ಅಲ್ಲಿ ವಿವಿಧ ಬಗೆಯ ತಿಂಡಿ-ತಿನಿಸುಗಳಿದ್ದವು. ಕಂಡಲ್ಲೆಲ್ಲ ಘಮಘಮೀಸುವ ಬಣ್ಣ-ಬಣ್ಣದ ವಿವಿಧ ಪದಾರ್ಥಗಳು ಆಹಾರ ಪ್ರಿಯರನ್ನು ಕೈಬೀಸಿ ಕರೆಯುತ್ತಿದ್ದವು. ಒಂದೆಡೆ ಜನರು ಗುಂಪು-ಗುಂಪಾಗಿ ಬಾಯಿ ಚಪ್ಪರಿಸಿಕೊಂಡು ದಪಾಟಿ, ಚುಡಾ, ಸಮೋಸಾ, ಬೋಂಡಾ ತಿನ್ನುತ್ತಿದ್ದರೆ, ಮತ್ತೂಂದೆಡೆ ಬಜ್ಜಿ, ಪಾನಿಪುರಿ, ಶೇಂಗಾ ಹೋಳಿಗೆ, ಅವಲಕ್ಕಿ ತಿನ್ನಲು ಜನ ಮುಗಿಬಿದ್ದಿದ್ದರು.

ಹೌದು, ಇಂಥ ದೃಶ್ಯಗಳು ಕಂಡು ಬಂದಿದ್ದು ಸಾಯಿ ಮಂದಿರದ 12ನೆಯ ವಾರ್ಷಿಕೋತ್ಸವದ ಎರಡನೆ ದಿನ ಮಂಗಳವಾರ ನಡೆದ ಆಹಾರ ಮೇಳದಲ್ಲಿ.

ನಗರದ ಸಾಯಿ ಮಂದಿರದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಪಕ್ಕದ ಲೋಕೋಪಯೋಗಿ ಇಲಾಖೆ ಗಾರ್ಡನ್‌ದಲ್ಲಿ ನಡೆದ ಆಹಾರ ಮೇಳದಲ್ಲಿ ನಗರದ ಮಹಿಳೆಯರು ತಮ್ಮ ಕೈ ರುಚಿ ತೋರಿಸಿದರು. ಬಗೆ-ಬಗೆಯ ತಿಂಡಿ-ತಿನಿಸುಗಳನ್ನು ಮಾಡಿ ಆಹಾರ ಪ್ರಿಯರ ಬಾಯಲ್ಲಿ ನೀರೂರಿಸಿದರು. ಸುಮಾರು ನೂರಕ್ಕೂ ಹೆಚ್ಚಿನ ಮಹಿಳೆಯರು ಆಹಾರ ಮೇಳದಲ್ಲಿ ಪಾಲ್ಗೊಂಡಿದ್ದರು.

ಆಹಾರ ಮೇಳದಲ್ಲಿ ಮಹಿಳೆಯರು ತಯಾರಿಸಿದ್ದ ಮಿಲ್ಕ್ ಶೇಕ್‌, ಢೋಕಳಾ, ಪ್ರೂಟ್ ಕಸ್ಟರ್ಡ್‌, ಹುಬ್ಬಳ್ಳಿ ಗಿರಮಿಟ್, ಅಂಟಿನ ಉಂಡಿ, ಪಾನಿಪುರಿ, ಗೋಬಿಮಂಚೂರಿ, ಮಸಾಲೆ ದೋಸೆ, ಹಣ್ಣಿನ ಸಲಾಡ್‌, ಜ್ಯೂಸ್‌, ಮಜ್ಜಿಗೆ, ಬಜ್ಜಿ, ಬೋಂಡಾ, ವಡಾ-ಪಾವ್‌, ಚುರುಮುರಿ, ಟೋಷ್ಟ, ಸಜ್ಜಿ ರೋಟ್ಟಿ, ಶೇಂಗಾ ಚಟ್ನಿ ಹೀಗೆ ಹತ್ತು ಹಲವಾರು ಆಹಾರ ಪದಾರ್ಥಗಳನ್ನು ತಯಾರಿಸಿ ನಗರದ ಆಹಾರ ಪ್ರಿಯರ ಬಾಯಿ ರುಚಿ ತಣಿಸಿದರು. ಸಾರ್ವಜನಿಕರು ಕೂಡಾ ಆಹಾರ ಮೇಳದಲ್ಲಿ ಪಾಲ್ಗೊಂಡು ತಿಂಡಿ-ತಿನಿಸುಗಳ ರುಚಿ ನೋಡಿ ಹರ್ಷ ವ್ಯಕ್ತಪಡಿಸಿದರು. ಸಮಾಜ ಕಲ್ಯಾಣಾಧಿಕಾರಿ ಎಸ್‌.ಎಲ್‌.ಸವದಿ ಮತ್ತು ವೈದ್ಯ ಡಾ| ಕವಿತಾ ಪಾಟೀಲ ಆಹಾರ ಮೇಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೀಣಾ ಕವಟಗಿಮಠ, ಎಸ್‌.ಬಿ. ಮುಲ್ಲಾ, ಗೀತಾ ತಳವಾರ ಮುಂತಾದವರು ಇದ್ದರು.

ನಗರದ ಸಾಯಿ ಮಂದಿರದಲ್ಲಿ ಪ್ರತಿ ವರ್ಷ ಮಹಿಳೆಯರಿಗಾಗಿ ಏರ್ಪಡಿಸಿರುವ ಆಹಾರ ಮೇಳದಲ್ಲಿ ರುಚಿ-ರುಚಿಯಾದ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಈ ವರ್ಷ ಗ್ರಾಮೀಣ ಭಾಗದ ಜನರ ಆಕರ್ಷಣಿಯವಾದ ದಪಾಟಿ, ಮೋಸರು ತಯಾರಿಸಲಾಗಿದೆ. ಈ ಆಹಾರ ಮೇಳ ಆಯೋಜನೆ ಮಾಡುವುದರಿಂದ ಬಗೆ-ಬಗೆಯ ತಿಂಡಿ-ತಿನಿಸು ತಯಾರು ಮಾಡುವುದು ಹೇಗೆ? ಎಂಬುದು ಗೊತ್ತಾಗುತ್ತದೆ. ಇದರಲ್ಲಿ ಪಾಲ್ಗೊಂಡಿರುವುದು ನನಗೆ ಖುಷಿ ತಂದಿದೆ.
• ನಂದಾ ಪೂಜಾರಿ,
ಆಹಾರ ಮೇಳದಲ್ಲಿ ಪಾಲ್ಗೊಂಡ ಮಹಿಳೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.