ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲೇ ಕ್ರಿಕೆಟ್ ಆಟ!
Team Udayavani, Feb 2, 2019, 11:35 AM IST
ಬೆಳಗಾವಿ: ನಗರದ ಮಹಾದ್ವಾರ ರಸ್ತೆಯಲ್ಲಿರುವ ಸಂಭಾಜಿ ಮೈದಾನದಲ್ಲಿ ಕ್ರಿಕೆಟ್ ಆಡಲು ಬಾಡಿಗೆ ವಿಧಿಸುತ್ತಿರುವುದನ್ನು ಖಂಡಿಸಿ ಯುವಕರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲೇ ಕ್ರಿಕೆಟ್ ಆಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಸಂಭಾಜಿ ಮೈದಾನದಲ್ಲಿ ನಿತ್ಯ ಕ್ರಿಕೆಟ್ ಆಡುತ್ತಿದ್ದ ಯುವಕರು ಪಾಲಿಕೆಗೆ ಬಂದು ಶುಕ್ರವಾರ ಕ್ರಿಕೆಟ್ ಆಟ ಆಡಿ ಪ್ರತಿಭಟಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಲವಾರು ವರ್ಷಗಳಿಂದ ಆ ಮೈದಾನದಲ್ಲಿ ಕ್ರಿಕೆಟ್ ಆಡುತ್ತ ಬರಲಾಗಿದೆ. ಇಲ್ಲಿಯವರೆಗೆ ಯಾವುದೇ ಶುಲ್ಕ ವಿಧಿಸುತ್ತಿರಲಿಲ್ಲ. ಈ ಭಾಗದ ಯುವಕರಿಗೆ ಒಂದೇ ಮೈದಾನವಾಗಿದ್ದು, ಕ್ರಿಕೆಟ್ ಆಡಲು ಬಂದರೆ ಪಾಲಿಕೆ ಸಿಬ್ಬಂದಿ ದಬಾಯಿಸುತ್ತಿದ್ದಾರೆ ಎಂದು ದೂರಿದರು.
ಪಾಲಿಕೆ ಸದಸ್ಯೆ ವೈಶಾಲಿ ಹುಲಜಿ ಮಾತನಾಡಿ, ಮೈದಾನಗಳಲ್ಲಿಯೇ ಕ್ರಿಕೆಟ್ ಆಡಬೇಕಾಗುತ್ತದೆ. ಬೇರೆ ಕಡೆ ಆಟ ಆಡಲು ಸಾಧ್ಯವೇ. ಈಗ ಪಾಲಿಕೆಯವರು ಆಟ ಆಡಲು ಕಡ್ಡಾಯವಾಗಿ ಶುಲ್ಕ ತುಂಬುವಂತೆ ಹೇಳುತ್ತಿದ್ದಾರೆ. ದಿನಕ್ಕೆ 2500 ರೂ. ಬಾಡಿಗೆ ನೀಡುವಂತೆ ಕೇಳುತ್ತಿದ್ದಾರೆ. ಇಂಥ ನಿಯಮ ಆಟಗಳಿಗೆ ಅನ್ವಯಿಸದಂತೆ ಮಾಡಬೇಕು. ಕ್ರಿಕೆಟ್ ಆಟಕ್ಕೆ ಅನುಮತಿ ಕೇಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳು, ಇತರ ಸಮಾರಂಭಗಳಿಗೆ ಬಾಡಿಗೆ ಕೇಳುವುದು ಸರಿ. ಆದರೆ ಆಟಗಳಿಗೆ ಬಾಡಿಗೆ ಕೇಳಿದರೆ ಮುಂದೆ ಆಟಗಾರರು ಸೃಷ್ಟಿಯಾಗಲು ಸಾಧ್ಯವೇ. ಇಂಥ ನಿಯಮ ಸಡಿಲಿಸಿ ಆಟಗಾರರಿಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು. ಸುನೀಲ ಬಾಳೆಕುಂದ್ರಿ, ಅಭಿಜಿತ ಚವ್ಹಾಣ, ರಾಜು ಭಾತಖಾಂಡೆ, ರವೀಂದ್ರ ಹುಲಜಿ ಸೇರಿದಂತೆ ಇತರರು ಕ್ರಿಕಟ್ ಆಡಿ ಪ್ರತಿಭಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…