ಎಕ್ಸಿಸ್ ಬ್ಯಾಂಕ್ ವಾರಂಟ್ ಪ್ರಕರಣ ಹಿಂದಕ್ಕೆ
Team Udayavani, Feb 8, 2019, 11:29 AM IST
ರಾಮದುರ್ಗ: ಎಕ್ಸಿಸ್ ಬ್ಯಾಂಕಿನಲ್ಲಿ ಟ್ರ್ಯಾಕ್ಟರ್ ಸಾಲ ಪಡೆದುಕೊಂಡಿದ್ದ ತಾಲೂಕಿನ ಚಂದರಗಿಯ ರೈತರೊಬ್ಬರಿಗೆ ಫೆ. 2ರಂದು ಬಂಧನ ವಾರಂಟ್ ನೀಡಲಾಗಿದ್ದು, ಯಾವುದೇ ಕಾರಣಕ್ಕೂ ರೈತರನ್ನು ಬಂಧಿಸುವ ಕಾರ್ಯಕ್ಕೆ ಕೈ ಹಾಕುವುದಿಲ್ಲ. ಪ್ರಕರಣವನ್ನು ಹಿಂಪಡೆಯುವುದಾಗಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಲಿಖೀತ ಪತ್ರ ನೀಡುವ ಮೂಲಕ ರೈತರ ಬಂಧನ ಆತಂಕ ದೂರವಾದಂತಾಗಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ರೈತ ಸಂಘದ ನೇತೃತ್ವದಲ್ಲಿ ರೈತ ಮುಖಂಡರು ಬೆಳಗಾವಿ ಎಕ್ಸಿಸ್ ಬ್ಯಾಂಕಿನ ಎದುರು ಧರಣಿ ನಡೆಸಿದ್ದರು. ಆ ಸಂದರ್ಭದಲ್ಲಿ ಬ್ಯಾಂಕಿನ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಧರಣಿ ನಿರತ ರೈತರೊಂದಿಗೆ ಚರ್ಚಿಸಿ ತಾವು ಇಂತಹ ಯಾವುದೇ ನೋಟಿಸ್, ಅರೆಸ್ಟ್ ವಾರಂಟ್ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಹೇಳಿ ಯಾವುದೇ ಕಾರಣಕ್ಕೆ ರೈತರನ್ನು ಬಂಧಿಸುವ ಕೆಲಸಕ್ಕೆ ಹೋಗುವುದಿಲ್ಲ ಎಂದು ಪತ್ರದ ಮೂಲಕ ಸ್ಪಷ್ಟಪಡಿಸಿದ್ದಾರೆ. ಋಣಮುಕ್ತ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ರೈತ ಮುಖಂಡರು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ವಸ್ತು ಸ್ಥಿತಿಯನ್ನು ವಿವರಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ, ಈ ರೀತಿ ಯಾವುದೇ ತರಹದ ತೊಂದರೆ ಕೊಡದಂತೆ ಈಗಾಗಲೇ ಎಲ್ಲ ಬ್ಯಾಂಕುಗಳಿಗೆ ಸೂಚಿಸಲಾಗಿದೆ. ಈಗ ಮತ್ತೆ ಈ ಕುರಿತು ಬ್ಯಾಂಕುಗಳಿಗೆ ಸೂಚಿಸಲಾಗುವುದು. ಅಲ್ಲದೇ ಇದನ್ನು ಸರಕಾರದ ಗಮನಕ್ಕೂ ತರಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ ನಂತರ ರೈತರು ನಿರಾಳರಾಗಿದ್ದಾರೆ. ಘಟನೆ ವಿವರ: 2005ರಲ್ಲಿ ಬೆಳಗಾವಿ ಎಕ್ಸಿಸ್ ಬ್ಯಾಂಕಿನಿಂದ ಟ್ರ್ಯಾಕ್ಟರ್ ಸಾಲ ಪಡೆದುಕೊಂಡಿದ್ದ ಚಂದರಗಿಯ ರೈತ ದೊಡ್ಡಸಂಗಪ್ಪ ವೀರಪ್ಪ ಅಡಗಿಮನಿಗೆ ಕೋಲ್ಕತಾ ನ್ಯಾಯಾಲಯದಿಂದ ಫೆ. 2ರಂದು ಅರೆಸ್ಟ್ ವಾರೆಂಟ್ ಬಂದಿತ್ತು.ಟ್ರ್ಯಾಕ್ಟರ್ ಸಾಲವನ್ನು ಅಲ್ಪ ಪ್ರಮಾಣದಲ್ಲಿ ಮರುಪಾವತಿ ಮಾಡಿದ್ದ ರೈತ ನಂತರದ ದಿನಗಳಲ್ಲಿ ಬರಗಾಲ ಆವರಿಸಿದ್ದರಿಂದ ಸಾಲದ ಕಂತು ತುಂಬಲಾಗಿರಲಿಲ್ಲ. 2007ರಲ್ಲಿ ಬ್ಯಾಂಕಿನವರು ಟ್ರ್ಯಾಕ್ಟರ್ ಜಪ್ತು ಮಾಡಿಕೊಂಡು 2008ರಲ್ಲಿ ಹರಾಜು ನಡೆಸಿ 2.20 ಲಕ್ಷ ಸಾಲ ತುಂಬಿಕೊಂಡಿದ್ದರು. ಇನ್ನ್ನುಳಿದ 4.80 ಲಕ್ಷ ಮೊತ್ತಕ್ಕೆ ರೈತರ ಭೂಮಿಯ ಮೇಲೆ ಭೋಜಾ ಹೇರಿದ್ದರು. ಸಾಲ ಪಡೆದುಕೊಳ್ಳುವ ಸಂದರ್ಭದಲ್ಲಿ ರೈತ ದೊಡ್ಡಸಂಗಪ್ಪ ನೀಡಿದ್ದ ಖಾಲಿ ಚೆಕ್ ಅನ್ನು ಆಧಾರವಾಗಿಟ್ಟುಕೊಂಡು ಫೆ. 2ರಂದು ಕೋಲ್ಕತಾ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದರಿಂದ ಆತಂಕಗೊಂಡ ರೈತ ರೈತ ಸಂಘದ ಮೊರೆ ಹೋಗಿದ್ದ.
ಕೃಷಿ ಚಟುವಟಿಕೆಗಾಗಿ ಎಕ್ಸಿಸ್ ಬ್ಯಾಂಕ್ನಿಂದ ಸಾಲ ಪಡೆದು ಟ್ರ್ಯಾಕ್ಟರ್ ಖರೀದಿಸಲಾಗಿತ್ತು. ಸಕಾಲಕ್ಕೆ ಮಳೆ ಬಾರದೇ ಬೆಳೆ ಕೈಕೊಟ್ಟಿದ್ದರಿಂದ ಸಾಲ ಕಟ್ಟಲಾಗಿರಲಿಲ್ಲ. 2007ರಲ್ಲಿ ಬ್ಯಾಂಕಿನವರು ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿ ಹರಾಜು ನಡೆಸಿದ್ದಾರೆ. ಈಗ ಸಾಲ ತುಂಬಿ ಅಂದರೆ ಎಲ್ಲಿಂದ ತುಂಬಲಿ. ಈಗ ಏಕಾಏಕಿ ಅರೆಸ್ಟ್ ವಾರೆಂಟ್ ಬಂದಿದ್ದು, ನಮಗೆ ಆತಂಕವಾಗಿದೆ.
•ದೊಡ್ಡಸಂಗಪ್ಪ ಅಡಗಿಮನಿ, ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು