ಕಬಡ್ಡಿಗೆ ಪ್ರೋತ್ಸಾಹ ಅಗತ್ಯ: ಬಸರಗಿ
Team Udayavani, Feb 13, 2019, 9:54 AM IST
ಅಥಣಿ: ಆಧುನಿಕತೆಯ ಭರಾಟೆಯಲ್ಲಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ ದೇಶಿ ಕ್ರೀಡೆ ಕಬಡ್ಡಿಗೆ ಎಲ್ಲರೂ ಪ್ರೋತ್ಸಾಹ ನೀಡುವುದು ಅತ್ಯವಶ್ಯ ಎಂದು ಅಥಣಿ ವಲಯ ಡಿವೈಎಸ್ಪಿ ಆರ್.ಬಿ. ಬಸರಗಿ ಹೇಳಿದರು.
ಇಲ್ಲಿನ ಶ್ರೀಮಂತ ಭೋಜರಾಜ ಕ್ರೀಡಾಂಗಣದಲ್ಲಿ ಜಾಧವಜಿ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಮೂರು ದಿನಗಳ ರಾಷ್ಟ್ರಮಟ್ಟದ ಆಹ್ವಾನಿತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಕ್ರೀಡಾ ಮನೋಭಾವದೊಂದಿಗೆ ಸ್ಫೂರ್ತಿದಾಯಕ ಆಟವನ್ನಾಡಿ ಕ್ರೀಡೆಯ ವೈಭವ ಹೆಚ್ಚಿಸಬೇಕು. ಪಟ್ಟಣದಲ್ಲಿ ಮೂದಲಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ನಡೆಸುತ್ತಿರುವ ಜೆ.ಇ.ಸಂಸ್ಥೆಯ ಕಾರ್ಯ ಶ್ಲಾಘನೀಯ ಮತ್ತು ಹೆಮ್ಮೆಯ ವಿಷಯ ಎಂದರು.
ಸಂಸ್ಥೆಯ ಕಾರ್ಯಾಧ್ಯಕ್ಷ ಅರವಿಂದ ದೇಶಪಾಂಡೆ ಮಾತನಾಡಿ, ಪ್ರೊ ಕಬಡ್ಡಿ ಪಂದ್ಯಾವಳಿಯಿಂದ ಕಬಡ್ಡಿಗೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಸಿಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಮೂರು ದಿನಗಳ ಪಂದ್ಯಾವಳಿಗಳಿಂದ ಸಂಸ್ಥೆಯ ವಿದ್ಯಾರ್ಥಿಗಳು ಪ್ರೊ| ಕಬಡ್ಡಿವರೆಗೆ ಹೋಗುವಂತಾಗಲಿ ಎಂದರು.
ಪ್ರೋ ಕಬಡ್ಡಿ ಆಟಗಾರ ಕಾಸಿಲಿಂಗ ಅಡಿಕೆ ಮಾತನಾಡಿ, ದೇಶಿ ಕ್ರೀಡೆಯಾದ ಕಬ್ಬಡಿಗೆ ಸಾರ್ವಜನಿಕರೊಂದಿ ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡುವುದು ಅತ್ಯವಶ್ಯವಾಗಿದೆ. ಕಬಡ್ಡಿಯಿಂದ ಮನೋಬಲ ಹೆಚ್ಚಿಸಿಕೊಳ್ಳಬಹುದು ಎಂದರು.
ಪಂದ್ಯಾವಳಿಯ ಸಂಘಟನಾ ಸಮಿತಿ ಅಧ್ಯಕ್ಷ ಆರ್.ಬಿ. ದೇಶಪಾಂಡೆ ಮಾತನಾಡಿ, ಪಟ್ಟಣದ ಜನರಲ್ಲಿ ಕಬಡ್ಡಿ ಪಂದ್ಯಾವಳಿಯ ಕುರಿತು ಹೆಚ್ಚಿನ ಆಸಕ್ತಿ ಬೆಳೆಯಲಿ ಮತ್ತು ವಿದ್ಯಾರ್ಥಿಗಳು ಈ ದೇಶ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ ಎಂಬ ಉದ್ದೇಶಕ್ಕಾಗಿ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದರು. ಡಾ| ರಾಮ.ಕುಲಕರ್ಣಿ, ಶ್ರೀಮಂತ ಉಜ್ವಲಸಿಂಗ ಪವಾರದೇಸಾಯಿ, ಸಿ.ಎಸ್.ಬರಗಾಲಿ, ಡಾ| ಪಿ.ಪಿ. ಮಿರಜಕರ, ಸಿ.ಬಿ. ಪಡನಾಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ