ವಿದ್ಯಾರ್ಥಿ ಬದುಕಿನ ತಪಸ್ಸನ್ನು ಗೆಲ್ಲಿ: ಪಾಟೀಲ
Team Udayavani, Mar 14, 2019, 10:13 AM IST
ಹಾರೂಗೇರಿ: ವಿದ್ಯಾರ್ಥಿ ಬದುಕು ಒಂದು ತಪಸ್ಸು. ಏಕಾಗ್ರತೆಯಿಂದ ಅಧ್ಯಯನ ಮಾಡಿ ಆ ತಪಸ್ಸನ್ನು ಗೆಲ್ಲುವುದೇ ವಿದ್ಯಾರ್ಥಿಯ ಸಾಧನೆಯಾಗಬೇಕೆಂದು ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಈರನಗೌಡ ಪಾಟೀಲ ಹೇಳಿದರು.
ಸ್ಥಳೀಯ ಶ್ರೀ ಸಿದ್ಧೇಶ್ವರ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ದಿ ಎಕ್ಸಲೆಂಟ್ ಶಾಲೆಯಲ್ಲಿ ಮಂಗಳವಾರ ಸಂಜೆ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸಹಾಯಧನ ವಿತರಣಾ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಸ್ಪರ್ಧಿಸಲು ವಿದ್ಯಾರ್ಥಿಗಳು ಸನ್ನದ್ಧರಾಗಿರಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಶ್ರೀ ಪ್ರದೀಪಘಂಟಿ ಮಹಾರಾಜರು ಆಶೀರ್ವಚನ ನೀಡಿ, ವಿದ್ಯಾರ್ಥಿಗಳಲ್ಲಿ ಗೆಲ್ಲುವ ಹಂಬಲವಿರಬೇಕು. ಕಠಿಣ ಪರಿಶ್ರಮ, ಸತತ ಅಧ್ಯಯನ ಮತ್ತು ಚಿತ್ತಶುದ್ಧಿಯಿಂದ ಅಸಾಧ್ಯವಾದುದನ್ನು ಸಾಧಿಸಲು ಸಾಧ್ಯ ಎಂದರು. ಅಬಕಾರಿ ಎಸ್ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ದತ್ತಗುರು ಅಥಣಿ ಮತ್ತು ಖೇಲೋ ಇಂಡಿಯಾ ಯುಥ್ ಗೇಮ್ನಲ್ಲಿ ಚಿನ್ನದ ಪದಕ ಪಡೆದ ದಾನೇಶ್ವರಿ ಠಕ್ಕಣ್ಣವರ ಅವರನ್ನು ಸಂಸ್ಥೆ ವತಿಯಿಂದ ಸತ್ಕರಿಸಿ, ಗೌರವಿಸಲಾಯಿತು. ಈ ವೇಳೆ ಎಕ್ಸಲೆಂಟ್ ಟ್ಯಾಲೆಂಟ್ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ 40 ವಿದ್ಯಾರ್ಥಿಗಳಿಗೆ ಸಹಾಯಧನ ಮತ್ತು ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.
ಸಂಸ್ಥೆ ಅಧ್ಯಕ್ಷ ಬಿ.ಜಿ. ಕಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗೋಪಾಲ ಪೂಜೇರಿ ಸಮಾರಂಭ ಉದ್ಘಾಟಿಸಿದರು. ಪ್ರಾಚಾರ್ಯ ಮದುಸೂಧನ ಬೀಳಗಿ, ಟಿ.ಎಸ್.ವಂಟಗೂಡಿ, ಮುಖ್ಯಾಧ್ಯಾಪಕಿ ಕವಿತಾ ಕಶೆಟ್ಟಿ, ಭುಜಬಲಿ ಹರವಿ, ಉದಯ ಆಲಗೂರ ಸೇರಿದಮತೆ ಇತರರು ಇದ್ದರು. ಸಂಸ್ಥೆ ಕಾರ್ಯದರ್ಶಿ ಎಲ್.ಬಿ.ಕಶೆಟ್ಟಿ ಸ್ವಾಗತಿಸಿದರು. ಅಮಿತ್ ಸನದಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್