ಗ್ರಾಹಕರಿಗೆ ಇನ್ನೂ ತಟ್ಟಿಲ್ಲ ಕರಭಾರ


Team Udayavani, Jul 4, 2017, 11:12 AM IST

ANkana-1.jpg

ಬಳ್ಳಾರಿ: ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾಗಿ ಮೂರು ದಿನ
ಕಳೆದಿದ್ದು, ಜನಜೀವನದ ಅವಿಭಾಜ್ಯ ಅಂಗಗಳಾದ ಹೋಟೆಲ್‌, ಪೆಟ್ರೋಲ್‌ -ಡೀಸೆಲ್‌ ಹಾಗೂ ಮೊಬೈಲ್‌ ಶಾಪ್‌
ಗಳಲ್ಲಿ ಬೆಲೆ ಹೆಚ್ಚಳವಾಗದೇ ಗ್ರಾಹಕರು ನಿರಾಳವಾಗಿದ್ದಾರೆ.

ನಗರದ ಹೋಟೆಲ್‌ಗ‌ಳಲ್ಲಿ ಎಂದಿನಂತೆ ವ್ಯಾಪಾರ ನಡೆದಿದ್ದು, ಯಾವುದೇ ಎಸಿ ರಹಿತ ಹೋಟೆಲ್‌ಗ‌ಳಲ್ಲಿ ದಿನ ನಿತ್ಯದ
ಉಪಾಹಾರ, ಕಾಫಿ, ಟೀ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದ ಕೇಂದ್ರ ಭಾಗದಲ್ಲಿರುವ ಹೋಟೆಲ್‌ ಮಯೂರಾದಲ್ಲಿ
ಯಾವುದೇ ತಿಂಡಿ-ತಿನಿಸುಗಳ ಬೆಲೆಯಲ್ಲಿ ಹೆಚ್ಚಳವಾಗದೇ ಇರುವುದು ಗ್ರಾಹಕರಲ್ಲಿ ಒಂದಿಷ್ಟು ಅಚ್ಚರಿ ತಂದಿದ್ದಂತೂ ನಿಜವಾಗಿತ್ತು. ಜಿಎಸ್‌ಟಿ ಕುರಿತು ಮಾತನಾಡಿದ ಹೋಟೆಲ್‌ ಮಾಲೀಕ ಮಧುಸೂದನ್‌, ಹೋಟೆಲ್‌ ಉದ್ಯಮದ ಮೇಲೆ ಜಿಎಸ್‌ಟಿ ಪರಿಣಾಮ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವಾರ್ಷಿಕ 75 ಲಕ್ಷ ರೂ. ಗಳಿಗಿಂತಲೂ ಹೆಚ್ಚು ವಹಿವಾಟು
ಮಾಡುವ ಹೋಟೆಲ್‌ಗ‌ಳಿಗೆ ಶೇ.12ರಷ್ಟು ಜಿಎಸ್‌ಟಿ ವಿ ಧಿಸಲಾಗುತ್ತಿದೆ. ಎಸಿ ಇರುವ ಹೋಟೆಲ್‌ಗ‌ಳಿಗೆ ತೆರಿಗೆ ಶೇ.18ರಷ್ಟಾಗಲಿದೆ ಎಂದು ತಿಳಿಸಿದರು.

ಉತ್ತಮ ಹೋಟೆಲ್‌ಗ‌ಳು ಖರೀದಿಸುವ ಅಕ್ಕಿ, ಬೇಳೆ ಮುಂತಾದ ದಿನಸಿಗಳಿಗೆ ಜಿಎಸ್‌ಟಿಯಲ್ಲಿ ವಿನಾಯ್ತಿ ನೀಡಲಾಗಿದೆ. ಆದರೆ, ಹೋಟೆಲ್ಲಿನ ವಾರ್ಷಿಕ ವಹಿವಾಟು ಹೆಚ್ಚಿದ್ದಲ್ಲಿ ಜಿಎಸ್‌ಟಿ ಹೊರೆಯೂ ಹೆಚ್ಚಾಗಲಿದೆ. ಉತ್ತಮ ಹೋಟೆಲ್‌ಗ‌ಳಲ್ಲಿ ಒಮ್ಮೊಮ್ಮೆ ತಯಾರಿಸಿದ ಆಹಾರ ಮಾರಾಟವಾಗದೇ ಪೋಲಾಗಬಹುದು ಇದು ಹೋಟೆಲ್‌ ಮಾಲೀಕರಿಗೆ ಹೊರೆಯಾಗಲಿದೆ. ಆದರೆ, ರಸ್ತೆ ಬದಿಯ ಹೋಟೆಲ್‌ ಗಳಿಗೆ ಈ ಸಮಸ್ಯೆ ಇರುವುದಿಲ್ಲ. ಒಂದು ವೇಳೆ 75 ಲಕ್ಷ ರೂಗಳಿಗೂ ಅಧಿ ಕ ವಹಿವಾಟು ನಡೆಸುವ ಹೋಟೆಲ್‌ಗ‌ಳಿಗೆ ಜಿಎಸ್‌ಟಿ ದರದಲ್ಲಿ ಸಡಿಲಿಕೆ ಆಗದಿದ್ದಲ್ಲಿ
ಅನಿವಾರ್ಯವಾಗಿ ತಿಂಡಿ-ತಿನಿಸುಗಳ ಬೆಲೆಯೂ ಹೆಚ್ಚಾಗಲಿದೆ. ಕೇಂದ್ರ ಸರ್ಕಾರ ಹೋಟೆಲ್‌ ಉದ್ಯಮಕ್ಕೆ ಜಿಎಸ್‌ಟಿ
ವಿ ಧಿಸುವ ಕುರಿತಂತೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಅಷ್ಟರಲ್ಲಿ ಈ ಹಿಂದೆ ಇದ್ದ ಶೇ.4ರ ವ್ಯಾಟ್‌ಗೆ ಶೇ.1
ಜಿಎಸ್‌ಟಿ ಸೇರಿಸಿ ಹೋಟೆಲ್‌ ಉದ್ಯಮಕ್ಕೆ ಶೇ.5ರಷ್ಟು ಜಿಎಸ್‌ಟಿ ವಿ ಧಿಸಿದರೆ ಶೇ.1ರ ತೆರಿಗೆ ಹೆಚ್ಚಳ ಸರಿದೂಗಿಸಬಹುದು. ಉಳಿದಂತೆ ವಸತಿ ಗೃಹದ ಬಾಡಿಗೆ 1000 ರೂ. ಗಿಂತಲೂ ಕಡಿಮೆ ಇದ್ದರೆ ಯಾವುದೇ
ತೆರಿಗೆ ಇಲ್ಲ. ಆದರೆ, ಬಾಡಿಗೆ 1000 ರೂ. ಮೀರಿದರೆ ಶೇ. 12ರಷ್ಟು ಜಿಎಸ್‌ಟಿಯನ್ನು ಗ್ರಾಹಕರು ಪಾವತಿಸಬೇಕು ಎಂದು ಅವರು ತಿಳಿಸಿದರು.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ: ಜಿಎಸ್‌ಟಿ ಜಾರಿಯಾದ ನಂತರ ಪೆಟ್ರೋಲ್‌ ಹಾಗೂ ಡೀಸೆ‌ಲ್‌ಗ‌ಳ ಬೆಲೆಯಲ್ಲಿ ಇಳಿಕೆಯಾಗಿದೆ. ನಗರದ ಭಾರತ್‌ ಪೆಟ್ರೋಲಿಯಂ ಉತ್ಪನ್ನಗಳ ವಿತರಕರಾದ ಕೇಶವರೆಡ್ಡಿ ಪೆಟ್ರೋಲ್‌ ಬಂಕ್‌ನಲ್ಲಿ ಜೂನ್‌ 30ರಂದು ಸಾಮಾನ್ಯ ಪೆಟ್ರೋಲ್‌ಗೆ 69.02 ರೂ ಬೆಲೆ ಇತ್ತು. ಜು. 3ರಂದು ಈ ಬೆಲೆ 65.63ಕ್ಕೆ ಇಳಿದಿತ್ತು. ಹೈಸ್ಪೀಡ್‌ ಪೆಟ್ರೋಲ್‌ ಬೆಲೆ ಜೂ. 30ರಂದು 71.84 ರೂ ಇತ್ತು, ಜು. 3ರಂದು ಈ ಬೆಲೆ 68.33 ರೂ.ಗಳಿಗೆ ಇಳಿದಿತ್ತು. ಜೂ.30ರಂದು ಡೀಸೆಲ್‌ ಬೆಲೆ 58.30 ರೂಗಳಷ್ಟಿತ್ತು. ಜು.3ರಂದು ಡೀಸೆಲ್‌ ಬೆಲೆ 55.61 ರೂ.ಗಳಿಗೆ ಇಳಿದಿತ್ತು. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆ ಆಗಿದ್ದರಿಂದ ಗ್ರಾಹಕರು ಕೊಂಚ ಖುಷಿಯಲ್ಲಿದ್ದರು.

ಮೊಬೈಲ್‌ ಬೆಲೆಗಳಲ್ಲಿ ವ್ಯತ್ಯಾಸವಿಲ್ಲ;
ಜಿಎಸ್‌ಟಿ ಜಾರಿಯಾದಾಗಿನಿಂದ ಆಧುನಿಕ ಜೀವನದ ಅವಿಭಾಜ್ಯ ಅಂಗವಾಗಿರುವ ಮೊಬೈಲ್‌ ಬೆಲೆಯಲ್ಲಿ ಬದಲಾವಣೆಗಳಾಗಿಲ್ಲ. ನಗರದ ಎಸ್‌ಜಿಕೆ ಮೊಬೈಲ್‌ ಶಾಫಿಯಲ್ಲಿ ವಿವೋ, ಒಪೊ ಬ್ರಾಂಡ್‌ಗಳ ಸ್ಮಾರ್ಟ್ ಫೋನ್ಗಳನ್ನು 500 ರೂ. ರಿಯಾಯ್ತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿದ ಅಂಗಡಿ
ಮಾಲೀಕ ಎಚ್‌.ಕೆ.ಬಸವರೆಡ್ಡಿ, ಆ್ಯಪಲ್‌ ಕಂಪನಿಯ ಮೊಬೈಲ್‌ ಫೋನ್‌ಗಳಿಗೆ ಶೇ. 3.5ರಿಂದ ಶೇ. 4ರವರೆಗೆ ರಿಯಾಯ್ತಿ ಘೋಷಿಸಲಾಗಿದೆ. ಆದರೆ, ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಬದಲಾವಣೆಗಳಾಗಿಲ್ಲ. ಆದರೆ, ಜಿಎಸ್‌ಟಿ ಜಾರಿಯಾಗುವ ಮುನ್ನ ನಮ್ಮ ಗ್ರಾಹಕರಿಗೆ ನಮ್ಮ ಲಾಭಾಂಶದಲ್ಲಿ ಕಡಿಮೆ ಮಾಡಿ 500 ರೂಗಳ ವರೆಗೆ ರಿಯಾಯ್ತಿ ನೀಡುತ್ತಿದ್ದೇವೆ. ಆದರೆ, ಮೊಬೈಲ್‌ ಕರೆನ್ಸಿ ರಿಚಾರ್ಜ್‌ ದರಗಳಲ್ಲಿ ಬದಲಾವಣೆಗಳಾಗದಿದ್ದರೂ
ಕರೆಗಳ ದರದಲ್ಲಿ ಕೊಂಚ ಹೆಚ್ಚಳವಾಗಿದೆ ಎಂದರು. 

ಜಿಎಸ್‌ಟಿ ತೆರಿಗೆ ಪದ್ಧತಿ ಉತ್ತಮವಾಗಿದೆ. ಮುಂಚಿನಂತೆ ತೆರಿಗೆ ವರದಿ ಸಲ್ಲಿಕೆಯಲ್ಲಿದ್ದಂತ ಗೋಜಲುಗಳು ಇಲ್ಲವಾಗಿವೆ.
ಇದೊಂದು ಸರಳೀಕೃತ ತೆರಿಗೆ ಪದ್ಧತಿಯಾಗಿದ್ದು ಹೋಟೆಲ್‌ ಉಪಾಹಾರಗಳು ಗ್ರಾಹಕರಿಗೆ ಹೊರೆಯಾಗದಿರಲು ಈಗ ವಿಧಿಸಿರುವ ಶೇ. 12ರ ಜಿಎಸ್‌ಟಿ ಶೇ.5ಕ್ಕೆ ಇಳಿಕೆಯಾಗಬೇಕು.  ಎಚ್‌.ಎಸ್‌.ಮಧುಸೂದನ್‌, ಮಾಲೀಕರು, ಮಯೂರಾ
ಹೋಟೆಲ್‌

ಎಂ.ಮುರಳಿಕೃಷ್ಣ
 

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.