ತುಂಗಭದ್ರಾ ಜಲಾಶಯದ ಹೂಳೆತ್ತಿ: ಸುಲೋಚನಮ್ಮ
Team Udayavani, Jul 25, 2017, 12:36 PM IST
ಸಿರುಗುಪ್ಪ: ಕಳೆದ ಮೂರು ವರ್ಷಗಳಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ಸಮರ್ಪಕ
ಮಳೆಯಿಲ್ಲದೇ ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಜಲಾಶಯದಲ್ಲಿ
ತುಂಬಿರುವ ಹೂಳೆತ್ತಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯ ಉಪಾಧ್ಯಕ್ಷೆ ಸುಲೋಚನಮ್ಮ ಹೇಳಿದರು.
ತಾಲೂಕಿನ ಕರೂರು ಗ್ರಾಮದ ಸ.ಮಾ.ಹಿ.ಪ್ರಾ.ಶಾಲೆ ಆವರಣದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಜಿಲ್ಲಾ
ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾವಂತರಾಗೋಣ, ಪ್ರಗತಿ ಹಾದಿಯಲ್ಲಿ ಸಾಗೋಣ ಎನ್ನುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೈಸರ್ಗಿಕವಾಗಿ ಸಿಗುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಪ್ರಜ್ಞೆ ರೈತರಲ್ಲಿ ಮೂಡಬೇಕಾಗಿದೆ. ನೀರಿಲ್ಲದೇ ಹೋದರೆ ಬದುಕುವುದು ಕಷ್ಟವಾಗುತ್ತದೆ. ಕೃಷಿ ಕುಂಠಿತವಾಗುತ್ತದೆ. ನೀರನ್ನು ಹಿತ-ಮಿತವಾಗಿ ಬಳಕೆ ಮಾಡುವುದರಿಂದ ನೀರು ಉಳಿಸುವುದರೊಂದಿಗೆ ಉತ್ತಮ ಬೆಳೆ ಬೆಳೆಯಬಹುದು. ತುಂಗಭದ್ರಾ ಅಚ್ಚುಕಟ್ಟು ರೈತರು ನೀರಿನ ಸದ್ಬಳಕೆಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಕೇವಲ ಭತ್ತ ಬೆಳೆಯದೇ ಬಹುಬೆಳೆ ಅಳವಡಿಸಿಕೊಳ್ಳಬೇಕು ಎಂದರು.
ರೈತ ಆರ್. ನಾಗರೆಡ್ಡಿ ಮಾತನಾಡಿ, ಕೃಷಿಕರ ಮಕ್ಕಳು ತಮ್ಮ ಓದಿನೊಂದಿಗೆ ಕೃಷಿ ಅಳವಡಿಸಿಕೊಳ್ಳಬೇಕು. ರೈತ ಬಿತ್ತಿ ಬೆಳೆಯದಿದ್ದರೆ ಜಗತ್ತಿಗೆ ಅನ್ನ ಸಿಗುವುದಿಲ್ಲ. ಇಂದಿನ ಯುವಕರು ಕೃಷಿಯ ಬಗ್ಗೆ ನಿರ್ಲಕ್ಷ ವಹಿಸಿರುವುದು ಒಕ್ಕಲುತನದ ಮೂಲಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು. ಭಾರತ ಸೇವಾದಳ ಜಿಲ್ಲಾ ಸಂಚಾಲಕ ಟಿ.ಜಿ. ವಿಠಲ, ಸಿರವಾರ ಚಾಗನೂರು ರೈತ ಹೋರಾಟ ಸಮಿತಿಯ ಸಂಚಾಲಕ ಮಲ್ಲಿಕಾರ್ಜುನರೆಡ್ಡಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಆರ್.ಮಾಧವರೆಡ್ಡಿ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಗಡ್ಡಿ, ತಾಲೂಕು ಕಾರ್ಯಾಧ್ಯಕ್ಷ ಅಬ್ದುಲ್ ರೌಫ್, ಕಾರ್ಯದರ್ಶಿ ಮಂಜುನಾಥ
ಆಚಾರಿ, ಜಡೆಪ್ಪ, ಕೆ. ಪ್ರಹ್ಲಾದಾಚಾರಿ, ಡಾ| ಬಸವರಾಜರೆಡ್ಡಿ, ಮುಖ್ಯಗುರು ಭಾಗ್ಯಲಕ್ಷ್ಮೀ, ಶಿಕ್ಷಕ ನಾಗರಾಜ, ಕೃಷಿ ವಿಜ್ಞಾನಿ ವಿಜಯಕುಮಾರಗೌಡ ಮಾತನಾಡಿದರು.
ನಿವೃತ್ತ ಶಿಕ್ಷಕ ನರಸಿಂಗರಾವ್, ಗ್ರಾಪಂ ಸದಸ್ಯ ಡಿ. ಪಾಲಾಕ್ಷರೆಡ್ಡಿ, ಮುಖಂಡ ಕೆಂಚಪ್ಪ, ಸಲ್ಲಾ ತಿಮ್ಮಾರೆಡ್ಡಿ, ಕೆ.ರಾಘವೇಂದ್ರರೆಡ್ಡಿ, ವೀರಾರೆಡ್ಡಿ, ವಿಶ್ವನಾಥರೆಡ್ಡಿ, ಕಣೇಕಲ್ಲಪ್ಪ ಇದ್ದರು. ಗ್ರಾಮದ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ 140 ವಿದ್ಯಾರ್ಥಿಗಳು ಮತ್ತು ಗ್ರಾಮದಲ್ಲಿ ಓದಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 180 ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ