ಈ ಗೋಶಾಲೆ ಆ ದೇವರಿಗೆ ಪ್ರೀತಿ!
Team Udayavani, Aug 17, 2017, 2:14 PM IST
ಕೂಡ್ಲಿಗಿ: ತಾಲೂಕಿನಲ್ಲಿ ಈ ಬಾರಿಯೂ ಮುಂಗಾರು ಕೈಕೊಟ್ಟ ಪರಿಣಾಮ ಮೇವಿನ ಕೊರತೆಯಿಂದಾಗಿ ಜಾನುವಾರುಗಳ ಮೂಕ ವೇದನೆ ಹೇಳತೀರದಾಗಿದೆ. ಗೋಶಾಲೆಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಬರುವ ಜಾನುವಾರುಗಳಿಗೆ ಮೇವು ಒದಗಿಸಲು ಪರದಾಡುವಂತಾಗಿದೆ.
ತಾಲೂಕಿನ ಗಂಡಬೊಮ್ಮನಹಳ್ಳಿ ಗೋಶಾಲೆಗೆ ಬರುವ ಜಾನುವಾರುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅವುಗಳಿಗೆ ಮೇವು ಪೂರೈಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗೋಶಾಲೆಯಲ್ಲಿ ಮೇವಿನ ಕೊರತೆ ಕಂಡು ಬರುತ್ತಿದ್ದು , ಹಸಿ ಮೇವು ಇಲ್ಲದೇ ಜಾನುವಾರುಗಳು ಕಂಗಾಲಾಗಿವೆ. ಹಸಿ ಮೇವು ನೀಡುವ ಮೂಲಕ ಇಲ್ಲಿನ ಗೋಶಾಲೆಯ ಜಾನುವಾರುಗಳು ಚೆನ್ನಾಗಿರುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ಈಗ ಅ ಧಿಕಾರಿಗಳ ಮೇಲಿದೆ. ತಾಲೂಕಿನಲ್ಲಿರುವ ಏಕೈಕ ಗೋಶಾಲೆಯಲ್ಲಿ ಈ ಮೊದಲು ಸುಮಾರು 4300 ಜಾನುವಾರಗಳು ಇದ್ದವು. ಆದರೆ, ಕಳೆದೊಂದು ತಿಂಗಳಿಂದ ಇಲ್ಲಿಯವರೆಗೆ ಈಗ 7400 ಜಾನುವಾರುಗಳು ಗೋಶಾಲೆಗೆ ಬಂದಿವೆ. ಜಾನುವಾರುಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಪ್ರತಿನಿತ್ಯ 30 ಟನ್ ಮೇವು ಪೂರೈಕೆ ಮಾಡಲಾಗುತ್ತದೆ. ಗೋಶಾಲೆಯನ್ನು ತಿಂಗಳ ಕಾಲ ಮುಂದುವರಿಸಿದರೆ 900 ಟನ್ ಮೇವು ಅಗತ್ಯವಿದೆ. ಈಗಾಗಿ ಮೇವು ಪೂರೈಕೆ ಮಾಡುವುದು ಹೇಗೇ ಎಂಬುದು ಅಧಿ ಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ.
ತಾಲೂಕಿನ ಅತಿ ದೊಡ್ಡ ಕೆರೆಯಾದ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ನೀರು ಖಾಲಿಯಾಗಿರುವುದರಿಂದ ಗೋಶಾಲೆಗೆ ಈಗ ಕೊಳವೆಬಾವಿ ಮೂಲಕ ನೀರು ಪೂರೈಸಲಾಗುತ್ತಿದೆ. ಈಗ ಪ್ರಮುಖ ಸಮಸ್ಯೆ ಏನೆಂದರೆ ಗೋವುಗಳನ್ನು ನೋಡಿಕೊಳ್ಳುವವರಿಗೆ ಊಟದ ವ್ಯವಸ್ಥೆ ಕಳೆದೊಂದು ತಿಂಗಳಿಂದ ಸ್ಥಗಿತಗೊಳಿಸಲಾಗಿದೆ. ಮತ್ತು ಕರೆಂಟ್ ವ್ಯವಸ್ಥೆಯಿಲ್ಲದೆ ಕತ್ತಲಲ್ಲಿ ಕಾಲಕಳೆಯುವ ಪರಿಸ್ಥಿತಿ ರೈತರದ್ದಾಗಿದೆ. 10ಕ್ಕೂ ಹೆಚ್ಚು ಶೆಡ್ಗಳನ್ನು ನಿರ್ಮಿಸಿ ನೆರಳಿನ ವ್ಯವಸ್ಥೆ ಮಾಡಿಲಾಗಿದೆಯಾದರೂ ಇನ್ನೂ ಸಾವಿರಾರು ಜಾನುವಾರು ಬಿಸಿಲಿನಲ್ಲಿ ನಿತ್ಯವು ಬಸವಿಳಿಯುತ್ತಿವೆ. ಈ ಸಮಸ್ಯೆಗೆ ಜಾನುವಾರಗಳ ಹೆಚ್ಚಳವೇ ಪ್ರಮುಖ ಕಾರಣವಾಗಿದೆ ಎಂಬುದು ಅಧಿಕಾರಿಗಳ ಉತ್ತರವಾಗಿದೆ.
ಸಂಗ್ರಹ ಕೊರತೆ: ಗೋಶಾಲೆಯಲ್ಲಿನ ಜಾನುವಾರುಗಳ ಮೇವು ಪೂರೈಕೆ ಮಾಡಲು ಹೊಸಪೇಟೆ, ಹಗರಿ ಮತ್ತು ಸಿರುಗುಪ್ಪದಲ್ಲಿ ಮೇವು ಬ್ಯಾಂಕ್ನಲ್ಲಿ ಮೇವು ಸಂಗ್ರಹ ಮಾಡಲಾಗಿತು. ಆದರೆ, ಅಲ್ಲೂ ಸಹ ಮೇವು ಸಾವಿರಾರು ಟನ್ ಮೇವು ಇಲ್ಲಿಗೆ ಪೂರೈಕೆ ಮಾಡಿರುವ ಕಾರಣ ಮೇವಿನ ಸಂಗ್ರಹಗದಲ್ಲಿ ಕೊರತೆಯಾಗಿದೆ. ಹೀಗಾಗಿ ಅಗತ್ಯ ಮೇವು ಪೂರೈಕೆ ಮಾಡಲು ಸಮಸ್ಯೆಯಾಗಿದೆ. ಅಲ್ಲದೆ, ಮೇವು ಪೂರೈಕೆ ಮಾಡುವ ಪ್ರಯತ್ನ ಅಧಿಕಾರಿಗಳು ಮುಂದುವರಿಸಿದ್ದಾರೆ. ಮುಂಗಾರು ಮಳೆ ಆರಂಭದಿಂದ ಇಲ್ಲಿಯವರೆಗೆ ಮಳೆಯಾಗದಿರುವುದರಿಂದ ಜಾನುವಾರಗಳಿಗೆ
ಸ್ಥಳೀಯವಾಗಿ ಮೇವು ಸಿಗುತ್ತಿಲ್ಲ. ಹೀಗಾಗಿ ಗೋಶಾಲೆಯನ್ನು ಸರ್ಕಾರ ಮುಂದುವರಿಸಬೇಕು. ಅಲ್ಲದೇ ಇಲ್ಲಿಯವರೆಗೂ ನಾಲ್ಕೈದು ತಿಂಗಳು ಇಲ್ಲಿನ ಗೋಶಾಲೆಯ ಜಾನುವಾರುಗಳು ಒಣಮೇವು ತಿಂದು ಬಡಕಲಾಗಿವೆ. ಈಗ ನದಿ ದಡ ಇರುವ ಪ್ರದೇಶದ ಕಡೆ ಮಳೆಯಾಗಿರುವ ಕಡೆ ಹಸಿ ಮೇವು ಸಿಗುತ್ತದೆ. ಇಲ್ಲಿನ ಜಾನುವಾರುಗಳಿಗೆ ಹಸಿ ಮೇವು ಪೂರೈಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗಂಡಬೊಮ್ಮನಹಳ್ಳಿ ಗ್ರಾಮದ ರೈತ ಪಾಪಯ್ಯ ಆಗ್ರಹಿಸಿದ್ದಾರೆ.
ಗೋಶಾಲೆಯಲ್ಲಿನ ಜಾನುವಾರುಗಳಿಗೆ ಮೇವು ಕೊರತೆ ಬಾರದಂತೆ ನೋಡಿಕೊಳ್ಳುತ್ತಿದ್ದೇವೆ. ಜಾನುವಾರುಗಳಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಜಾನುವಾರುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಶೆಡ್ ಸಾಲುತ್ತಿಲ್ಲ. ಇನ್ನೂ 5 ಶೆಡ್ ನಿರ್ಮಿಸಲು ಸೂಚಿಸಲಾಗಿದೆ. ಮೇಲಾ ಧಿಕಾರಿಗಳ ಆದೇಶ ಬರುವವರಿಗೂ ಗೋಶಾಲೆ ಮುದುವರಿಸಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ.
ಎಲ್.ಕೃಷ್ಣಮೂರ್ತಿ ತಹಶೀಲ್ದಾರ್, ಕೂಡ್ಲಿಗಿ.
ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಸಮಾರ್ಪಕ ಮೇವು, ನೀರು ಪೂರೈಸಲಾಗಿದೆ. ಪ್ರಸುತ್ತ ನಿತ್ಯ 30 ಟನ್ ಮೇವು ವಿತರಿಸುತ್ತಿದ್ದು, ಸೊಪ್ಪೆ ಮತ್ತು ಭತ್ತದ ಮೇವು ಸಂಗ್ರಹವಿದೆ. ಜಾನುವಾರುಗಳ ನಿತ್ಯ ಆರೋಗ್ಯ ತಪಾಸಣೆ
ಮಾಡಲಾಗುತ್ತಿದ್ದು, ಪಶುವೈದ್ಯ ಕೇಂದ್ರ ತೆರೆಯಲಾಗಿದೆ. ಅಗತ್ಯ ಮೇವು ಮೇವಿನ ಬ್ಯಾಂಕಿನಿಂದ ಬರುತ್ತದೆ. ಸ್ವತ್ಛತೆಗೆ ಒತ್ತು ನೀಡಲಾಗಿದೆ.
ಯಜಮಾನಪ್ಪ, ಕಂದಾಯ ನಿರೀಕ್ಷಕ, ಗೋಶಾಲೆ ಉಸ್ತುವಾರಿ ಅಧಿಕಾರಿ
ಕೆ.ನಾಗರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ