ಸರ್ಕಾರದ ಸಾಧನೆ ಜನರಿಗೆ ತಲುಪಿಸಿ: ಸತೀಶ್
Team Udayavani, Nov 21, 2017, 7:24 PM IST
ಸಂಡೂರು: ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಈ ನಾಡಿನ ಜನರಿಗೆ ಉಚಿತ ಅನ್ನಭಾಗ್ಯ ಯೋಜನೆ ಜಾರಿಗೆ ತಂದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ. ಆದರೆ ಕಪ್ಪುಹಣ ತರುತ್ತೇವೆ ಎಂದು ನರೇಂದ್ರ ಮೋದಿಯವರು ಇಂದಿಗೂ ಸಹ ಅದನ್ನು ಹೊರ ತಂದಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿತ್ರಿಕಿ ಸತೀಶ್ ಆರೋಪಿಸಿದರು.
ತಾಲೂಕಿನ ಸೋವೆನಹಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನುಡಿದಂತೆ ನಡೆಯಿತು ಕಾಂಗ್ರೆಸ್ ಸರ್ಕಾರ. ಆದರೆ ಮಾತುಕೊಟ್ಟು ಮರೆಯಿತು ಕೇಂದ್ರದ ಬಿಜೆಪಿ ಸರ್ಕಾರ. ನಿತ್ಯ ಒಂದಲ್ಲಾ ಒಂದು ಬೆಲೆ ಏರುತ್ತಿದೆ. ಜಿಎಸ್ಟಿ ಬಡವರಿಗೆ, ಸಣ್ಣ ಉದ್ದಿಮೆದಾರರಿಗೆ ತೊಂದರೆ ಉಂಟು
ಮಾಡಿದೆ. ನೋಟು ಅಮಾನ್ಯದಂತಹ ಅವೈಜ್ಞಾನಿಕ ಕ್ರಮದಿಂದ ಹಲವಾರು ಜನರು ಬೀದಿಗೆ ಬೀಳುವಂತಾಯಿತು ಎಂದು ದೂರಿದರು.
ಕಪ್ಪುಹಣ ವಿದೇಶದಿಂದ ವಾಪಸ್ ತಂದು ದೇಶದ ಪ್ರತಿ ಪ್ರಜೆಯ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಮೋದಿಯವರು ಘೋಷಿಸಿದ್ದರು. ಆದರೆ ಈವರೆಗೂ ಅವರ ಖಾತೆ ನಯಾಪೈಸೆ ಬಿದ್ದಿಲ್ಲ. ಅಲ್ಲದೆ ಈವರೆಗೂ ಕಪ್ಪುಹಣ ಹೊರ ತರಲು ಆಗಲಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ ಸೋಮಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ನಾಗರಾಜ, ತಾಪಂ
ಸದಸ್ಯರಾದ ಹನುಮಂತಪ್ಪ, ಜಿಪಂ ಸದಸ್ಯೆ ನೇತ್ರಾವತಿ ಕರಿಬಸಪ್ಪ, ಗ್ರಾಪಂ ಸದಸ್ಯರು ಇದ್ದರು. ತಾಲೂಕಿನ ಅಗ್ರಹಾರ, ಲಕ್ಕಲಹಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ