ಸದಸ್ಯರ ಪ್ರಶ್ನೆಗಳಿಗೆ ಚಡಪಡಿಸಿದ ಅಧಿಕಾರಿಗಳು!


Team Udayavani, Jan 11, 2018, 3:17 PM IST

11-34.jpg

ಹೊಸಪೇಟೆ: ನಗರಸಭೆ ಆಸ್ತಿ ರಕ್ಷಣೆ, ಕುಡಿವ ನೀರಿನ ತೆರಿಗೆ ಹೆಚ್ಚಳ, ಆರೋಪ ಪಟ್ಟಿಯಲ್ಲಿರುವ ಸದಸ್ಯರ ಸದಸ್ಯತ್ಯ ರದ್ದತಿ, ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿನ ಕಾರ್ಯಕ್ರಮಗಳಿಗೆ ಹೆಚ್ಚಿನ ದರ ನಿಗದಿ, ಕಟ್ಟಡ ಪರವಾನಗಿ ಮಂಜೂರಾತಿಗೆ ದರ ಪರಿಷ್ಕರಣೆ, ಮೂರು ವರ್ಷದ ಹಳೆ ಬಿಲ್‌ ಗಳಿಗೆ ಮತ್ತು ವಿತರಿಸಲಾದ ಚಕ್‌ಗಳಿಗೂ ಸದಸ್ಯರ ಅನುಮೋದನೆ ಪಡೆಯುವುದು, ಅಜೆಂಡಾದಲ್ಲಿ ವಿಷಯ ತರಲು ಅರ್ಜಿ ನೀಡಿದರೂ ವಿಷಯ ಪರಿಗಣಿಸುತ್ತಿಲ್ಲ… ಹೀಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳುವ ಮೂಲಕ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸಭಾಂಗಣದಲ್ಲಿ ಬುಧವಾರ ಅಧ್ಯಕ್ಷೆ ನಾಗಲಕ್ಷ್ಮಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಅನೇಕ ಪ್ರಶ್ನೆಗಳಿಗೆ ಅಧಿಕಾರಿಗಳ ಮೌನವೇ ಉತ್ತರವಾಗಿತ್ತು. ಅನಂತಶಯನಗುಡಿಯಲ್ಲಿ ನಗರಸಭೆ ಆಸ್ತಿಯಲ್ಲಿದ್ದ ಸಾರ್ವಜನಿಕ ಗ್ರಂಥಾಲಯದ ಸ್ಥಳ 
ಅತಿಕ್ರಮಗೊಂಡಿದೆ. ಆಸ್ತಿ ರಕ್ಷಣೆ ಮಾಡಬೇಕೆಂದು ಅರ್ಜಿ ಸಲ್ಲಿಸಿ ಮೂರು ವರ್ಷವಾದರೂ ಅಧಿಕಾರಿಗಳು ಸ್ಥಳ ಪರಿಶೀಲನೆಗೂ ಮುಂದಾಗಿಲ್ಲ ಎಂದು ಸದಸ್ಯ ಕುಲ್ಲಾಯಪ್ಪ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಇನ್ನುಳಿದ ಸದಸ್ಯರು ಧ್ವನಿಗೂಡಿಸಿ ಸಿಬ್ಬಂದಿಗಳ ವಿರುದ್ಧ ಹರಿಹಾಯ್ದರು.  ನಾಳೆಯೇ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಎಇಇ ಮನ್ಸೂರ್‌ ಅಹ್ಮದ್‌ ಭರವಸೆ ನೀಡಿದರು. 

ನಗರಸಭೆಗೆ ಆದಾಯ ಕುಂಠಿತಗೊಂಡಿದೆ. ಕುಡಿವ ನೀರಿನ ದರ ಹೆಚ್ಚಿಸಬೇಕೆಂದು ಪೌರಾಯುಕ್ತರು ಪ್ರಸ್ತಾಪಿಸುತ್ತಿದ್ದಂತೆ ಸದಸ್ಯ ಕೆ.ಗೌಸ್‌ ಮಾತನಾಡಿ, ಮೊದಲು ಜನರಿಗೆ ಕುಡಿವ ನೀರು ಸರಿಯಾಗಿ ಕೊಡಿ. ನೀರು ಸಿಗದಿದ್ದರೂ ಫಾರಂ-3ಗಾಗಿ ಜನರು ನೀರಿನ ಟ್ಯಾಕ್ಸ್‌ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ ತಿಂಗಳಿಗೆ 200 ರೂ. ದರ ನಿಗದಿಗೊಳಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು. ಧ್ವನಿಗೂಡಿಸಿದ ಸದಸ್ಯರು, ಅನಧಿಕೃತವಾಗಿ ನೀರಿನ ಸಂಪರ್ಕಕ್ಕೆ ಕಡಿವಾಣ ಹಾಕಬೇಕು. ಬಿಲ್‌ ಕಲೆಕ್ಟರ್‌ಗಳ ಗಮನಕ್ಕೆ ಇಲ್ಲದೆ ಅನಧಿಕೃತ ಕನೆಕ್ಷನ್‌ ನಡೆಯುವುದಿಲ್ಲ. ಪೂರ್ಣ ಪ್ರಮಾಣದಲ್ಲಿ ಕರ ವಸೂಲಿ ಮಾಡಿದರೆ ನಗರಸಭೆಗೆ ಆದಾಯದ ಕೊರತೆ ಎದುರಾಗುವುದಿಲ್ಲ ಎಂದರು.

ನಗರದ ಮುನ್ಸಿಫ‌ಲ್‌ ಗ್ರೌಂಡ್‌ನ‌ಲ್ಲಿ ನಡೆಯುವ ವಾಣಿಜ್ಯ ಮೇಳಕ್ಕೆ 5000 ರೂ., ವಸ್ತು ಪ್ರದರ್ಶನಕ್ಕೆ 1000 ರೂ., ಟಿವಿ ಕಾರ್ಯಕ್ರಮಕ್ಕೆ 25000 ರೂ., ರಾಜಕೀಯ ಕಾರ್ಯಕ್ರಮಗಳಿಗೆ 25000 ರೂ. ನಿಗದಿಪಡಿಸಬಹುದು ಎಂದು ಸದಸ್ಯರು ಸಲಹೆ ನೀಡಿದರು.

ನಗರದಲ್ಲಿನ ಕಟ್ಟಡ ಪರವಾನಗಿ ಪಡೆಯುವ ದರ ಅತಿ ಕಡಿಮೆಯಾಗಿದೆ. ವಸತಿಗಾಗಿ ಪ್ರತಿ ಚ.ಅಡಿಗೆ 2 ರೂ.ರ ಬದಲಾಗಿ 4 ರೂ., ಕೈಗಾರಿಕೆಗೆ
2 ರೂ. ಬದಲಾಗಿ 5 ರೂ. ಮತ್ತು ವಾಣಿಜ್ಯಕ್ಕೆ 2 ರೂ. ಬದಲಾಗಿ 6 ರೂ. ನಿಗದಿಗೊಳಿಸಲು ಚರ್ಚೆ ನಡೆಯಿತು. ನಗರಸಭೆ ಉಪಾಧ್ಯಕ್ಷೆ ಸುಮಂಗಳ
ಸೇರಿದಂತೆ ಸದಸ್ಯರು ಇದ್ದರು. 

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.