ಸಿರುಗುಪ್ಪದಲ್ಲಿ ಭತ್ತ ಉಳಿಸಿಕೊಳ್ಳಲು ಅನ್ನದಾತರ ಹರಸಾಹಸ!


Team Udayavani, Mar 23, 2018, 11:04 AM IST

bell-3.jpg

ಸಿರುಗುಪ್ಪ: ಅಸರ್ಮಕ ವಿದ್ಯುತ್‌ ಪೂರೈಕೆಯಿಂದ ಬೇಸತ್ತ ರೈತರು ನಾಟಿ ಮಾಡಿದ ಭತ್ತ ಉಳಿಸಿಕೊಳ್ಳಲು ಡೀಸೆಲ್‌  ಮೋಟಾರ್‌ ಗಳಿಂದ ನೀರೆತ್ತಲು ಮೊರೆ ಹೋಗಿದ್ದು, ಈಗ ಡೀಸೆಲ್‌ ಮೋಟಾರ್‌ಗಳಿಗೆ ಭಾರಿ ಬೇಡಿಕೆ ಬಂದಿದೆ.

ತಾಲೂಕಿನ ಎಚ್‌.ಹೊಸಳ್ಳಿ, ಹಾಗಲೂರು, ದರೂರು, ಕರೂರು, ಗೋಸಬಾಳು, ಕೂರಿಗನೂರು, ಬೂದುಗುಪ್ಪ ಮತ್ತು ಮೈಲಾಪುರ ಕ್ಯಾಂಪ್‌ ಭಾಗದ ದೊಡ್ಡ ಹಳ್ಳದ ದಂಡೆಯಲ್ಲಿರುವ ಏತ ನೀರಾವರಿ ಯೋಜನೆಯಿಂದ ಸುಮಾರು ನಾಲ್ಕು ಸಾವಿರ ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ ಭತ್ತದ ಗದ್ದೆಗಳಿಗೆ ನೀರುಣಿಸಲು ಸಮರ್ಪಕ ವಿದ್ಯುತ್‌ ಪೂರೈಕೆ ಇಲ್ಲದೆ ರೈತರು ಪರ್ಯಾಯವಾಗಿ ಹಳ್ಳದಲ್ಲಿನ ನೀರೆತ್ತಲು ಡೀಸೆಲ್‌ ಮೋಟಾರ್‌ಗಳ ಮೂಲಕ ನೀರೆತ್ತುತ್ತಿದ್ದಾರೆ. ಈ ಭಾಗದ ರೈತರು ಬೆಳೆದ ಭತ್ತದ ಗದ್ದೆಗಳಿಗೆ ಸಮರ್ಪಕ ನೀರುಣಿಸಲು ಕಳೆದ 15 ದಿನಗಳಿಂದ ವಿದ್ಯುತ್‌ ಸಮಸ್ಯೆಯಾಗಿದ್ದು, ಭತ್ತದ ಗದ್ದೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ
ನಾಡಿ ಮಾಡಿದ ಭತ್ತವು ಒಣಗುತ್ತಿದ್ದು, ಹೇಗಾದರೂ ಮಾಡಿ ತಾವು ಬೆಳೆದ ಬೆಳೆಯನ್ನು ಉಳಿಸಿಕೊಳ್ಳಬೇಕೆಂದು ರೈತರು ಡೀಸೆಲ್‌ ಮೋಟಾರುಗಳಿಂದ ನೀರೆತ್ತಿ ಬೆಳೆಗೆ ಬಿಡಲು ಮುಂದಾಗಿದ್ದಾರೆ. ಹಳ್ಳವನ್ನು ನಂಬಿ ನಾಟಿ ಮಾಡಿದ್ದ ರೈತರಿಗೆ ಹಳ್ಳದಲ್ಲಿ ನೀರಿದ್ದರೂ ವಿದ್ಯುತ್‌ ಸಮಸ್ಯೆ ಕಾಡುತ್ತಿದ್ದರಿಂದ ಬೆಳೆದ ಭತ್ತದ ಗದ್ದೆಗಳಿಗೆ ನೀರಿಲ್ಲದೆ ಬೆಳೆ ಒಣಗುತ್ತಿರುವುದರಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಭತ್ತದ ಗದ್ದೆಗಳು ತೆನೆ ಬಿಡುವ ಹಂತದಲ್ಲಿದ್ದರೆ, ಇನ್ನೂ ಕೆಲವು ತೆನೆ ಬಿಟ್ಟಿದ್ದು, ನೀರಿಲ್ಲದೆ ಕಾಳು ತುಂಬುತ್ತಿಲ್ಲ. ಆದ್ದರಿಂದ ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. 

ಮೋಟಾರ್‌ಗಳಿಗೆ ಭಾರಿ ಬೇಡಿಕೆ: ರೈತರು ಬೆಳೆ ಉಳಿಸಲು ಡೀಸೆಲ್‌ ಮೋಟಾರ್‌ಗಳಿಗೆ ಮೊರೆ ಹೋಗಿರುವುದರಿಂದ ಡೀಸೆಲ್‌ ಮೋಟಾರ್‌ಗಳಿಗೆ ಭಾರಿ ಬೇಡಿಕೆ ಬಂದಿದೆ. ಡೀಸೆಲ್‌ ಮೋಟಾರ್‌ಗಳಿಗೆ ಒಂದು ದಿನಕ್ಕೆ ಬಾಡಿಗೆ 1 ಸಾವಿರದಿಂದ 2 ಸಾವಿರಕ್ಕೆ ತಲುಪಿದೆ. ಮೋಟಾರ್‌ ಗಳ ಕೊರತೆಯಿಂದ ಕೆಲವರು ಹೊಸ ಮೋಟಾರ್‌ನ್ನೆ ಖರೀದಿಸಿದರೆ, ಇನ್ನೂ ಕೆಲವರು ಟ್ರಾÂಕ್ಟರ್‌ಗಳ ಇಂಜಿನ್‌
ಸಹಾಯದಿಂದ ನೀರೆತ್ತಲು ಮುಂದಾಗಿದ್ದಾರೆ. ಈಗಾಗಲೆ ರೈತರು ತಮ್ಮ ಬೆಳೆಗೆ ಸುಮಾರು 15ರಿಂದ 20 ಸಾವಿರ ರೂ.
ವೆಚ್ಚ ಮಾಡಿದ್ದು, ಭತ್ತದ ಗದ್ದೆಗಳಿಗೆ ಒಂದೆರಡು ಬಾರಿ ನೀರುಣಿಸಿದರೆ ಬೆಳೆಯು ಕೈ ಸೇರುತ್ತದೆ ಹೀಗಾಗಿ ಹಳ್ಳದ ದಂಡೆಯಲ್ಲಿರುವ ರೈತರು ಎಕರೆ ಭೂಮಿಗೆ ನೀರುಣಿಸಲು 500 ರೂ. ಖರ್ಚಾದರೆ, ಹಳ್ಳದಿಂದ ದೂರದ ಗದ್ದೆಗಳಿಗೆ ಪೈಪ್‌ಲೈನ್‌ ಮೂಲಕ ನೀರು ಹರಿಸಲು ಎಕರೆಗೆ 1400 ರೂ.ವರೆಗೆ ವೆಚ್ಚ ಮಾಡಬೇಕಾಗಿದೆ.

ಅಸಮರ್ಪಕ ವಿದ್ಯುತ್‌ ಪೂರೈಕೆಯಿಂದ ನಮ್ಮ ಬೆಳೆ ಉಳಿಸಿಕೊಳ್ಳಲು ಡೀಸೆಲ್‌ ಮೋಟಾರ್‌ಗಳ ಮೊರೆ ಹೋಗಬೇಕಾಗಿದೆ. ಖರ್ಚು ಹೆಚ್ಚಾದರೂ ಅನಿವಾರ್ಯವಾಗಿ ಡೀಸೆಲ್‌ ಮೋಟಾರಿನಿಂದ ನೀರು ಹರಿಸಿ ಬೆಳೆ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ಮಲ್ಲಿಕಾರ್ಜುನ, ಎಚ್‌.ಹೊಸಳ್ಳಿ ಗ್ರಾಮದ ರೈತ.

ಜೆಸ್ಕಾಂ ಇಲಾಖೆಯಿಂದ ನಿಯಮದ ಪ್ರಕಾರ ದಿನಕ್ಕೆ ಏಳು ತಾಸು ವಿದ್ಯುತ್‌ ಪೂರೈಕೆ ಮಾಡುತ್ತಿದ್ದೇವೆ. ಈ ಭಾಗದಲ್ಲಿ ಯಾವುದೇ ಲೋಡ್‌ ಶೆಡ್ಡಿಂಗ್‌ ಮಾಡುತ್ತಿಲ್ಲ.
ವಿಜಯ್‌ಕುಮಾರ್‌,ಜೆಸ್ಕಾಂ ಎಇಇ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.