ಶುದ್ಧ ಕುಡಿವ ನೀರಿನ ಘಟಕಕ್ಕಿಲ್ಲ ದುರಸ್ತಿ ಭಾಗ್ಯ!


Team Udayavani, Mar 30, 2018, 10:45 AM IST

bell-2.jpg

ಬಳ್ಳಾರಿ: ಕುಡಿವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ. ಶುದ್ಧ ಕುಡಿವ ನೀರಿನ ಘಟಕಗಳನ್ನು 24 ಗಂಟೆಯೊಳಗೆ ದುರಸ್ತಿಗೊಳಿಸಬೇಕು ಎಂದು ಮೇಲಧಿಕಾರಿಗಳು ಜಿಪಂ, ತಾಪಂ ಕೆಡಿಪಿ, ಸಾಮಾನ್ಯ ಸಭೆಗಳಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡುವುದೇನೋ ನಿಜ. ಆದರೆ, ತಾಲೂಕಿನ ಚರಕುಂಟೆ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಬಳಕೆಯಾಗದೆ ನನೆಗುದಿಗೆ ಬಿದ್ದಿರುವುದನ್ನು ನೋಡಿದರೆ, ಈ ಮಾತುಗಳು ಕೇವಲ ಸಭೆಗಷ್ಟೇ ಸೀಮಿತ ಎನ್ನಿಸುವುದೂ ಅಷ್ಟೇ ವಾಸ್ತವ….

ಹೌದು…! ಕಳೆದ ವಾರ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಕುಡಿವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ. ದುರಸ್ತಿಗೆ ಬಂದಿರುವ ಶುದ್ಧ ಕುಡಿವ ನೀರಿನ ಘಟಕವನ್ನು 24 ಗಂಟೆಯೊಳಗೆ ರಿಪೇರಿ ಮಾಡಿಸಬೇಕು. ಒಂದು ಲಕ್ಷದೊಳಗಿನ ವೆಚ್ಚವನ್ನು ಮೊದಲು ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಇಲಾಖೆಯಿಂದ ಬಳಸಿ, ಜಿಲ್ಲಾ
ಪಂಚಾಯಿತಿಗೆ ಬಿಲ್‌ ಕಳುಹಿಸಬೇಕು. ಅದಕ್ಕೂ ಹೆಚ್ಚಾಗುವಂತಿದ್ದರೆ, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಖಾರವಾಗಿ ಹೇಳಿದ್ದರು.

ಆದರೆ, ತಾಲೂಕಿನ ಚರಕುಂಟೆ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯೇ ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಲಾಗಿದೆ. ಇದಕ್ಕಾಗಿ ಅಂದಾಜು 8 ರಿಂದ 10 ಲಕ್ಷ ರೂ. ವೆಚ್ಚ ಮಾಡಿ ಅಗತ್ಯ ಯಂತ್ರಗಳನ್ನೂ ಖರೀದಿಸಿ ಅಳವಡಿಸಲಾಗಿದೆ. ಆರಂಭದಲ್ಲಿ ಒಂದೆರಡು ತಿಂಗಳು ಚಾಲನೆ ಪಡೆದುಕೊಂಡಿದ್ದ ಶುದ್ಧ ಕುಡಿವ ನೀರಿನ ಘಟಕ ಬಳಿಕ ಸ್ಥಗಿತಗೊಂಡಿದೆ. ಸ್ಥಗಿತಕ್ಕೆ ಸಮರ್ಪಕ  ಕಾರಣಗೊತ್ತಿಲ್ಲ ವಾದರೂ, ಗ್ರಾಮಸ್ಥರು ಹೇಳುವಂತೆ ನೀರು ಶುದ್ಧಗೊಳಿಸುವ ಯಂತ್ರದಲ್ಲಿ ಅಂದಾಜು 10 ಕೊಡ ನೀರು ಸಂಗ್ರಹವಾದರೆ ಯಂತ್ರ ಸ್ಥಗಿತವಾಗುತ್ತದೆಯಂತೆ. 

ಇದನ್ನು ರಿಪೇರಿ ಮಾಡಿಸಲಾಗದ ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳು, ಘಟಕಕ್ಕೆ ಬೀಗ ಜಡಿದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಭೆಯಲ್ಲಿ ಮೇಲಧಿಕಾರಿಗಳ ಮಾತುಗಳಿಗೆ ತಲೆಯಾಡಿಸುವ ಅಧಿಕಾರಿಗಳು, ಸಭೆಯ ನಂತರ ಗಾಳಿಗೆ ತೂರುತ್ತಾರೆ ಎಂಬುದಕ್ಕೆ ಚರಕುಂಟೆ ಗ್ರಾಮದ ಶುದ್ಧ ಕುಡಿವ ನೀರಿನ ಘಟಕವೇ ತಾಜಾ ಉದಾಹರಣೆಯಾಗಿದೆ.

1500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಕ್ಕೆ ಬೋರ್‌ವೆಲ್‌ಗ‌ಳೇ ಜಲಮೂಲಗಳು. ಈ ಮೊದಲು ಗ್ರಾಮದ ಹೊರ ವಲಯದಲ್ಲಿನ ಅಂತರ್ಜಲ ನೀರನ್ನೇ ಶುದ್ಧೀಕರಿಸಿ ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದ್ದು, ಇದೀಗ ಬತ್ತಿದ ಹಿನ್ನೆಲೆಯಲ್ಲಿ ಅನತಿ ದೂರದಲ್ಲಿರುವ ಎಚ್‌ ಎಲ್‌ಸಿ ಕಾಲುವೆ ಬಳಿ ಬೋರ್‌ವೆಲ್‌ ಕೊರೆಸಿ, ಅಲ್ಲಿಂದ ಕುಡಿಯಲು ಸರಬರಾಜು ಮಾಡಲಾಗುತ್ತಿದೆ. ಈ ಪೈಪ್‌ ಲೈನ್‌ಗೂ ಗ್ರಾಮದ ಅಲ್ಲಲ್ಲಿ ರಂದ್ರಗಳು ಬಿದ್ದಿರುವುದರಿಂದ ಚರಂಡಿ ನೀರು ಸೇರಿ ಕುಡಿವ ನೀರು ಕಲುಷಿತವಾಗುತ್ತಿದ್ದು, ಈ ನೀರನ್ನೇ ಸೇವಿಸುತ್ತಿರುವ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ.

ಗ್ರಾಮದಲ್ಲಿನ ಕುಡಿವ ನೀರಿನ ಸಮಸ್ಯೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಶುದ್ಧ ಕುಡಿವ ನೀರಿನ ಘಟಕವನ್ನು ದುರಸ್ತಿಗೊಳಿಸುವಂತೆಯೂ ಕೋರಿದ್ದರೂ, ಎಚ್ಚೆತ್ತುಕೊಳ್ಳುತ್ತಿಲ್ಲ. ಘಟಕ ಚಾಲನೆಯಲ್ಲಿದಿದ್ದರೆ, ಗ್ರಾಮಸ್ಥರು ಇಂದು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರಲಿಲ್ಲ ಎಂಬುದು ಗ್ರಾಮಸ್ಥರ ಅಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ
ಎಚ್ಚೆತ್ತುಕೊಳ್ಳಬೇಕಾಗಿದೆ.

ತಾಲೂಕಿನ ಚರಕುಂಟೆ ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕದಲ್ಲಿ ಸಣ್ಣ ರಿಪೇರಿ ಇದ್ದು, ಇದೀಗ ಸರಿಪಡಿಸಲಾಗಿದೆ. ಇಂದು ಸಹ ಇಂಜಿನೀಯರ್‌ರನ್ನು ಗ್ರಾಮಕ್ಕೆ ಕಳುಹಿಸಿಕೊಟ್ಟಿದ್ದು, ಪರಿಶೀಲಿಸಿದ್ದಾರೆ. ಶೀಘ್ರದಲ್ಲೇ ಗ್ರಾಮಸ್ಥರಿಗೆ ಘಟಕದಿಂದ ಶುದ್ಧ ಕುಡಿವ ನೀರನ್ನು
ಒದಗಿಸಲಾಗುತ್ತದೆ. 
 ಜಾನಕಿರಾಮ್‌, ಇಒ, ತಾಪಂ, ಬಳ್ಳಾರಿ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.