ಬಿಸಿಲ ಝಳಕ್ಕೆ ಬಸವಳಿದ ಜನತ
Team Udayavani, Apr 13, 2018, 12:48 PM IST
ಹೊಸಪೇಟೆ: ಬಿಸಿಲು ನಾಡಿನ ಜಿಲ್ಲೆಯೆಂದು ಬಳ್ಳಾರಿ ಪ್ರಖ್ಯಾತಿಯಾಗಿದ್ದು, ಇಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಉಲ್ಬಣಗೊಳ್ಳುತ್ತಿದೆ. ಇದಕ್ಕೆ ಹೊಸಪೇಟೆ ತಾಲೂಕು ಸಹ ಹೊರತಾಗಿಲ್ಲ. ಇದರಿಂದ ಹೊರಬರಲು ತಾಲೂಕಿನ ಜನರು ಪರಿತಪಿಸುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಹೊರಬಾರದ ಜನರು
ದನಿವಾರಿಸಿಕೊಳ್ಳಲು ಪರದಾಡುವಂತಾಗಿದೆ.
ವಿಶ್ವ ವಿಖ್ಯಾತ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯು ಕಳೆದ ಒಂದು ವಾರದಿಂದ ಇಳಿಮುಖವಾಗಿದೆ. ಇದಕ್ಕೆ ಬಿಸಿಲಿನ ಪ್ರಖರತೆಯೇ ಕಾರಣವಾಗಿದೆ. ಹಂಪಿ ಎಂದರೆ ಕಲ್ಲು ಬಂಡೆ ಹಾಗೂ ಗುಡ್ಡಗಳ ಪ್ರದೇಶವಾಗಿದ್ದು, ತಾಲೂಕಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವುದರಿಂದ ಹಂಪಿಯತ್ತ ಪ್ರವಾಸಿಗರು ಮುಖ ಮಾಡುತ್ತಿಲ್ಲ, ಇದರಿಂದ ಹಂಪಿಯ ಪರಿಸರದಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದೆ.
ಈಗಾಗಲೇ ಶಾಲಾ-ಕಾಲೇಜುಗಳು ರಜೆ ಬಿಟ್ಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಈ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಹಂಪಿಗೆ ಆಗಮಿಸುತ್ತಿದ್ದರು. ಆದರೆ ಈ ವರ್ಷ ಅತೀ ಹೆಚ್ಚು ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪ್ರವಾಸಿಗರು ಹಂಪಿಯತ್ತ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.
ಹಂಪಿಯಲ್ಲಿ ವಾಸವಾಗಿದ್ದ ನಿವಾಸಿಗಳನ್ನು ಈಗಾಗಲೇ ತೆರವು ಮಾಡಿರುವುದರಿಂದ ಹಂಪಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಇಲ್ಲವಾಗಿದೆ. ವಿದೇಶಿ ಪ್ರವಾಸಿಗರು ತಂಗಲು ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಹೊಸಪೇಟೆ ನಗರದ ತುಂಗಾಭದ್ರಾ ಜಲಾಶಯವು ಕೂಡ ಈಗಾಗಲೇ ಬರಿದಾಗಿದ್ದು, ಈ ಭಾಗಕ್ಕೂ ಪ್ರವಾಸಿಗರು ಆಗಮಿಸುತ್ತಿಲ್ಲ. ಹಂಪಿಯ ಪರಿಸರದ ಕಲ್ಲು ಬಂಡೆಗಳು ಬಿಸಿಲಿನ ಝಳಕ್ಕೆ ಕಾದ ಕಬ್ಬಿಣದ ಕಡಲೆಯಂತಾಗಿವೆ. ಇದರ ಝಳವು ಕೂಡ ಮತ್ತಷ್ಟು ಜನತೆಯನ್ನು ಆತಂಕಕ್ಕೆ ದೂಡಿವೆ.
ವಿಶ್ವವಿಖ್ಯಾತ ಹಂಪಿಗೆ ದೇಶ ವಿದೇಶಗಳಿಂದ ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಸ್ನಾನ ಮಾಡಿ ಬಿಸಿಲಿನ ಧಗೆನೀಗಿಸಿಕೊಳ್ಳುತ್ತಿದ್ದರು. ಪ್ರವಾಸಿಗರು ಈ ಬಾರಿ ನದಿಯಲ್ಲಿ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ತಾಪಮಾನದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಬೆಳಗಿನ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿವೆ.
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ಧಗೆಗೆ ಜನಸಾಮಾನ್ಯರು ತತ್ತರಿಸಿದರೆ, ಮಕ್ಕಳು ವೃದ್ಧರ ಮೈಮೇಲೆ ಬೇಸಿಗೆ ಗುಳ್ಳೆಗಳು ಕಾಣಿಸಿಕೊಂಡಿವೆ. ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿಗೂ ಪರದಾಡುವ ಸ್ಥಿತಿ ವರ್ಷಕ್ಕಿಂತ ಪ್ರಸಕ್ತ ವರ್ಷ ಹೆಚ್ಚಾಗಿದೆ. ಇದೇ ಪರಿಸ್ಥಿತಿ
ಮುಂದುವರಿದರೆ ಅಪಾಯ ತಪ್ಪಿದ್ದಲ್ಲ ಎಂಬ ಆತಂಕದಲ್ಲಿ ಹೊಸಪೇಟೆ ಜನತೆ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್