ಪ್ರತ್ಯೇಕ ಮತಗಟ್ಟೆ ನೀಡದಿದ್ರೆ ಮತದಾನ ಬಹಿಷ್ಕಾರ ಎಚ್ಚರಿಕೆ


Team Udayavani, Apr 14, 2018, 4:40 PM IST

bell.jpg

ಕೂಡ್ಲಿಗಿ: ಪ್ರತ್ಯೇಕ ಮತಗಟ್ಟೆ ನೀಡಬೇಕು. ಇಲ್ಲವಾದರೆ ಮತದಾನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿ ತಾಲೂಕಿನ ಸಾಣಿಹಳ್ಳಿ ಗ್ರಾಮಸ್ಥರು ಶುಕ್ರವಾರ ತಹಶೀಲ್ದಾರ್‌ ಟಿ.ಸುರೇಶ್‌ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಹಿರೇಹೆಗ್ಗಾಳ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾಣಿಹಳ್ಳಿಯಲ್ಲಿ ಬರಿ ಪರಿಶಿಷ್ಟ ಜಾತಿಗೆ ಸೇರಿದ
125ಕ್ಕೂ ಹೆಚ್ಚು ಮನೆಗಳಿದ್ದು, 350ಕ್ಕೂ ಹೆಚ್ಚು ಮತದಾರರಿದ್ದಾರೆ. ಆದರೂ, ಕಳೆದ ಅನೇಕ ವರ್ಷಗಳಿಂದ ಈ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ನೀಡದೆ 3 ಕಿ.ಮೀ.ದೂರ ಇರುವ ಬೊಪ್ಪಲಾಪುರ ಮತಗಟ್ಟೆಗೆ ಸೇರಿಸುವ ಮೂಲಕ ಈ ಗ್ರಾಮದ ಮತದಾರರನ್ನು ನಿರ್ಲಕ್ಷಿಸಲಾಗಿದೆ. ಹೀಗಾಗಿ ಪ್ರತಿ ಚುನಾವಣೆಯಲ್ಲಿ ಶೇ. 20ರಷ್ಟು ಮಾತ್ರ ಇಲ್ಲಿನ ಜನ ಮತ ಚಲಾಯಿಸುತ್ತಿದ್ದು, ಬಹುತೇಕರು ಮತದಾನದಿಂದ ವಂಚಿತರಾಗುತ್ತಿದ್ದಾರೆ ಎಂದು ತಹಶೀಲ್ದಾರ್‌ ಗಮನಕ್ಕೆ ತರಲಾಯಿತು.

ಸಾಣಿಹಳ್ಳಿಯಲ್ಲಿನ ವೃದ್ಧರು, ಬಾಣಂತಿಯರು, ಗರ್ಭಿಣಿಯರು ಹಾಗೂ ವಿಕಲಚೇತನರು ಪ್ರತಿ ಚುನಾವಣೆಗಳಲ್ಲಿ ಬೊಪ್ಪಲಾಪುರ ಗ್ರಾಮಕ್ಕೆ ಹೋಗಿ ಮತ ಚಲಾಯಿಸಲು ಸಾಧ್ಯವಾಗುತ್ತಿಲ್ಲ. ಈ ಎಲ್ಲ ಕಾರಣಗಳಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲೂ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟಿದ್ದೆವು. ವಿಪರ್ಯಾಸ ಎಂದರೆ, ಈ ಬಗ್ಗೆ ಯಾರೂ ಗಮನ ಹರಿಸಿಲ್ಲ. ಅಲ್ಲದೇ ಈ ಬಾರಿಯ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಗುರುತಿಸಿದ್ದು, ಹೊಸದಾಗಿ ಕೆಲವು ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಪೈಕಿ
ಕೇವಲ 220 ಮತದಾರರಿರುವ ಗೋವಿಂದಗಿರಿ ತಾಂಡಾದಲ್ಲಿ ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. ಆದರೆ 350ಕ್ಕೂ ಹೆಚ್ಚು ಮತದಾರರಿರುವ ಸಾಣಿಹಳ್ಳಿ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ಸ್ಥಾಪನೆ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರು ಕಡ್ಡಾಯ ಮತದಾನ ಮಾಡುವ ಅಧಿಕಾರ ಹೊಂದಿದ್ದರೂ, ಕಳೆದ 70 ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಶೇ. 90ರಷ್ಟು ಜನರಿಗೆ ಮತದಾನ ಚಲಾಯಿಸಲು ಸಾಧ್ಯವಾಗದೆ ವಂಚಿತರಾಗುತ್ತಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲೂ ಮತದಾನ ಬಹಿಸ್ಕರಿಸಲು ನಿರ್ಧರಿಸದ್ದೇವೆ. ಇದನ್ನು ಸೂಕ್ಷ್ಮವಾಗಿ ಗಮನಿಸಿ ನಮ್ಮ ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ಸ್ಥಾಪಿಸಬೇಕು. ಇಲ್ಲದಿದ್ದರೆ ಮತದಾನ ಬಹಿಷ್ಕರಿಸಿ ಹೋರಾಟ ಹಮ್ಮಿಕೊಳ್ಳುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. 

ಈ ಸಂದರ್ಭದಲ್ಲಿ ತಾಲೂಕು ಭೋವಿ ಸಂಘದ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ಕೆ.ಶಿವಣ್ಣ, ಶಿವರಾಜ, ಸವಿತಾ, ಶಿವಣ್ಣ, ಸೋಮಣ್ಣ, ಸುರೇಶ, ವೀರೇಶ, ತಿಮ್ಮಪ್ಪ, ತ್ರಿಮೂರ್ತಿ, ಪರಶುರಾಮ, ಗೋವಿಂದಪ್ಪ, ನಾಗರಾಜ, ಹನುಂತಪ್ಪ, ಶರಣಪ್ಪ, ಯಶೋಧ, ಕೊಟ್ರೇಶ್‌, ಲಕ್ಷ್ಮೀ , ಕೊಟ್ರಬಸಪ್ಪ, ರತ್ನಮ್ಮ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.