ಮತದಾನ ಸಂವಿಧಾನ ನೀಡಿದ ಹಕ್ಕು


Team Udayavani, Apr 15, 2018, 5:56 PM IST

bell.jpg

ಹೊಸಪೇಟೆ: ಮತದಾನ ಮಾಡುವುದು ಸಂವಿಧಾನ ನೀಡಿದ ಹಕ್ಕು. ಅದನ್ನು ಚಲಾಯಿಸಬೇಕು ಮತ್ತು ಬೇರೆಯವರು
ಚಲಾಯಿಸಲು ಮನವಿ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಗಾರ್ಗಿ ಜೈನ್‌ ಕರೆ ನೀಡಿದರು. ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಅಂಬೇಡ್ಕರ್‌ ವೃತ್ತದಲ್ಲಿ ವಿಕಾಸ ಯುವಕ ಮಂಡಳ ಶನಿವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿಗಾಗಿ “ಮತದಾನ ಸಂಕಲ್ಪ’ ಸಹಿ ಅಭಿಯಾನಕ್ಕೆ ‘ನಾನು ಮತ ಹಾಕುತೇನೆ ಮತ್ತು ಮತ ಹಾಕಲು ಮನವಿ ಮಾಡುತ್ತೇನೆ ಎಂದು ಬರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅತ್ಯಂತ ಪ್ರಮುಖ ಪಾತ್ರವಹಿಸಲಿದೆ. ಉತ್ತಮ ದೇಶ ನಿರ್ಮಾಣದಲ್ಲಿ ತಮ್ಮ ಹೊಣೆಗಾರಿಕೆಯನ್ನು ನಿರ್ವಹಿಸಲು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಬೇಕು. ಆ ಮೂಲಕ ದೇಶದ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು ಎಂದರು.

ಮಂಡಳದ ಅಧ್ಯಕ್ಷ ಗೋಸಲ ಬಸವರಾಜ್‌ ಮಾತನಾಡಿ, ಮತದಾನ ನಮ್ಮ ಹಕ್ಕು. ಅದನ್ನು ಚಲಾಯಿಸುವಂತೆ ಸರ್ಕಾರದ ಹೊರತಾಗಿ ಪ್ರತಿಯೊಬ್ಬರು ಮತದಾರರನ್ನು ಜಾಗೃತಿಗೊಳಿಸಬೇಕಾಗಿದೆ. ಮಂಡಳ ಈ ನಿಟ್ಟನಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್‌ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದಂತೆ ಕಾರ್ಯಕ್ರಮ ರೂಪಿಸಿದ್ದೇವೆ. ಪ್ರತಿಯೊಬ್ಬರು ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಮಾಡುವುದು ನಮ್ಮ ಆಶಯವಾಗಿದೆ ಎಂದರು.

ತಹಶೀಲ್ದಾರ್‌ ಗಂಗಪ್ಪ , ಡಿವೈಎಸ್‌ಪಿ ರವಿಕುಮಾರ್‌, ಪೌರಾಯುಕ್ತ ರಮೇಶ್‌ ಹೊಸಪೇಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ .ಡಿ.ಜೋಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಭಾಕರ್‌, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗುರುಪ್ರಸಾದ್‌, ಮಾಜಿ ನಗರಸಭಾ ಸದಸ್ಯ ಪೂಜಾರಿ ದುರಗಪ್ಪ, ಮಂಡಳದ ಹಿರಿಯ ಸದಸ್ಯ ಗುರುರಾಜ್‌ ದೇಶಪಾಂಡೆ, ಕೆ.ಸಂಗ್ರಾಮ್‌, ಶ್ರೀನಿವಾಸ, ಬಂಡೆ ಸಂತೋಷಕುಮಾರ್‌ ಎಂ.ಡಿ. ನಾಗರಾಜ್‌, ಡಿ. ಪ್ರಶಾಂತ, ರಿಯಾಜ್‌, ಚಂದ್ರಶೇಖರ, ಪಿ.ಯಲ್ಲೇಶ್‌, ವೀರಭದ್ರ, ಬಿ.ಪ್ರಶಾಂತ, ಅನಂತ ಜೋಶಿ ಇದ್ದರು. 

ಉತ್ಸಾಹ: ಅಂಬೇಡ್ಕರ್‌ ಜಯಂತಿಯಲ್ಲಿ ಮತದಾನದ ಬಗ್ಗೆ ಅರಿವು ಮುಡಿಸುವ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಅನೇಕ ಹರ್ಷ ವ್ಯಕ್ತಪಡಿಸುತ್ತಾ ಸಂವಿಧಾನ ಶಿಲ್ಪಿಯ ಮುಂದೆ ಸಂಕಲ್ಪ ಮಾಡುವ ಮೂಲಕ ಈ ಬಾರಿ ವಿಜಯನಗರ ಕ್ಷೇತ್ರದಲ್ಲಿ ಹೆಚ್ಚು ಮತದಾನವಾಗುವಂತೆ ಮಾಡಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಸರ್ಕಾರದ ಹೊರತಾಗಿ ಸಂಘಟನೆಗಳು ಸ್ಪಯಂ ಸ್ಫೂರ್ತಿಯಿಂದ ಇಂತಹ ಜಾಗೃತಿ ಕಾರ್ಯಕ್ರಮ ಮಾಡುವ ಮೂಲಕ ಸರ್ಕಾರದ ಆಶಯಗಳನ್ನು ಸಾರ್ಥಕಗೊಳಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು. 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.