ದಿವ್ಯ ನಿರ್ಲಕ್ಷ್ಯ: ಪಾಳು ಬಿದ್ದ ಉದ್ಯಾನವನ!


Team Udayavani, May 20, 2018, 5:10 PM IST

bell-1.jpg

ಬಳ್ಳಾರಿ: ಇಲ್ಲಿನ ಹೊರವಲಯದ ಕುವೆಂಪು ನಗರ ಬಳಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ತ್ರಿಕೋಣಾಕಾರದಲ್ಲಿ ನಿರ್ಮಿಸಲಾಗಿರುವ ಉದ್ಯಾನವನ ಹಲವು ವರ್ಷಗಳಿಂದ ಅಧ್ವಾನಕ್ಕೆ ದಾರಿ ಮಾಡಿಕೊಟ್ಟಿದೆ. ಬಳ್ಳಾರಿ ಜಾಲಿಯಿಂದ ತುಂಬಿಕೊಂಡಿರುವ ಈ ಉದ್ಯಾನವನ ಸಾರ್ವಜನಿಕರಿಗೆ ಬಳಕೆಯಾಗದೆ ಮೂಲ ಉದ್ದೇಶದಿಂದ ವಂಚಿತವಾಗಿದ್ದು, ಇದಕ್ಕಾಗಿ ವೆಚ್ಚ ಮಾಡಲಾಗಿದ್ದ ಲಕ್ಷಾಂತರ ರೂ. ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ. ದಿನೇ ದಿನೇ ವಿಸ್ತಾರಗೊಳ್ಳುತ್ತಿರುವ ನಗರ, ಪಟ್ಟಣ ಪ್ರದೇಶಗಳಲ್ಲಿ ಉದ್ಯಾನವನಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚುತ್ತಿದೆ.

ಉದ್ಯಾನವನಗಳ ನಿರ್ಮಾಣದಿಂದ ನಗರದ ಸೌಂದರ್ಯ ಹೆಚ್ಚುವುದರ ಜತೆಗೆ ಸ್ಥಳೀಯ ನಿವಾಸಿಗಳ ಆರೋಗ್ಯ ವೃದ್ಧಿಗೆ ಪ್ರತಿದಿನ ಬೆಳಗಿನ ಜಾವ ಮತ್ತು ಸಂಜೆ ಹೊತ್ತಲ್ಲಿ ವಾಯು ವಿಹಾರಕ್ಕೆ ಅನುಕೂಲವಾಗಲಿದೆ. ಇದಕ್ಕಾಗಿ ಇಲ್ಲಿನ ಹೊರ ವಲಯದ ಕುವೆಂಪು ನಗರ ಬಳಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ 2014-2015ನೇ ಸಾಲಿನಲ್ಲಿ
8.5 ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಪಡಿಸಲಾಗಿತ್ತಾದರೂ, ನಂತರ ನಿರ್ವಹಣೆ ಕೊರತೆಯಿಂದಾಗಿ ಇಡೀ ಉದ್ಯಾನವನದಲ್ಲಿ ಬಳ್ಳಾರಿ ಜಾಲೆ ಬೆಳೆದು ನಿಂತಿದ್ದು, ಸಾರ್ವಜನಿಕರ ಬಳಕೆಗೆ ನಿರುಪಯುಕ್ತವಾಗಿದೆ. ಉದ್ಯಾನವನ ನಿರ್ಮಾಣದಿಂದ ಸ್ಥಳೀಯ ಜಯನಗರ, ಕಂಟೋನ್ಮೆಂಟ್‌, ಪಕ್ಕದ ಕುವೆಂಪುನಗರ 1ನೇ ಅಡ್ಡರಸ್ತೆ ನಿವಾಸಿಗಳಿಗೆ ವಾಯು ವಿಹಾರಕ್ಕೆ ಅನುಕೂಲವಾಗಲಿದೆ. ಆದರೆ, ನಿರ್ಮಾಣ ವಾದಾಗಿನಿಂದಲೂ ನಿರ್ವಹಣೆ ಮಾತ್ರ ಶೂನ್ಯವಾಗಿದೆ. ಉದ್ಯಾನವನದಲ್ಲಿ ಪಾದಾಚಾರಿ ರಸ್ತೆಯನ್ನು ನಿರ್ಮಿಸಲಾಗಿದೆ. ಹತ್ತಾರು ರೆಡಿಮೇಡ್‌ ಕಾಂಕ್ರೀಟ್‌ ಆಸನಗಳನ್ನು ಹಾಕಲಾಗಿದೆ.

ಜಾರುಬಂಡೆ, ತೂಗೂಯ್ನಾಲೆ ಸೇರಿದಂತೆ ಚಿಣ್ಣರ ಆಟಿಕೆಯ ಅತ್ಯಾಧುನಿಕೆ ಯಂತ್ರೋಪಕರಣದ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಆದರೆ ಬಳಕೆಯಿಲ್ಲದೇ ಅವುಗಳೆಲ್ಲವೂ ತುಕ್ಕು ಹಿಡಿದಿವೆ. ಹಾಗಾಗಿ, ಪ್ರಾಧಿಕಾರದ ಲಕ್ಷಾಂತರ
ರೂ. ಅನುದಾನವು ವೃಥಾ ಪೋಲಾಗಿದ್ದು, ಬುಡಾ ಲೆಕ್ಕದಲ್ಲಿರುವ ಉದ್ಯಾನವನ ಸಾರ್ವಜನಿಕರ ಬಳಕೆಯಲ್ಲಿಲ್ಲ.
 
ಈ ಮೊದಲು ಉದ್ಯಾನದ ನಿರ್ವಹಣೆ ಜವಾಬ್ದಾರಿಯನ್ನು ಕುವೆಂಪು ನಗರ ನಿವಾಸಿಗಳ ಅಸೋಸಿಯೇಷನ್‌
ವಹಿಸಿಕೊಂಡಿತ್ತು. ಅದರ ಸಂಪೂರ್ಣ ಜವಾಬ್ದಾರಿಯನ್ನು ಪ್ರಾಧಿಕಾರವು ಅಸೋಸಿಯೇಷನ್‌ಗೆ ವಹಿಸಿ ಕೈಚೆಲ್ಲಿ
ಕುಳಿತಿದ್ದರ ಪರಿಣಾಮ ಉದ್ಯಾನವನ ಇಂದು ಅಧೋಗತಿಗೆ ತಲುಪಲು ಕಾರಣವಾಗಿದೆ ಎಂಬುದು ಸಾರ್ವಜನಿಕರ
ಆರೋಪವಾಗಿದ್ದು, ಇನ್ನಾದರೂ ಸಂಬಂಧಪಟ್ಟ ನಗರಾಭಿವೃದ್ಧಿ ಪ್ರಾಧಿಕಾರವು ಉದ್ಯಾನವನವನ್ನು
ಸಮರ್ಪಕವಾಗಿ ನಿರ್ವಹಣೆ ಕೈಗೊಂಡು ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕೆಂಬುದು ಸ್ಥಳೀಯ
ನಿವಾಸಿಗಳು ಅಂಬೋಣ.

ಈ ಕುರಿತು ಪ್ರಾಧಿಕಾರದವರನ್ನು ಸಂಪರ್ಕಿಸಿದಾಗ ಉದ್ಯಾನವನ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಕೋರಿ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ, ಅದಕ್ಕೆ ಇನ್ನು ಎಷ್ಟು ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.