ಅಧ್ಯಕ್ಷರ ಮುಂದೆ ಕಣ್ಣೀರಿಟ್ಟ ಮಹಿಳಾ ಕೈದಿಗಳು


Team Udayavani, Jun 13, 2018, 11:52 AM IST

bellary-1.jpg

ಬಳ್ಳಾರಿ: ನಗರದ ಕೇಂದ್ರ ಕಾರಾಗೃಹದ ಮಹಿಳಾ ಕೈದಿಗಳ ವಿಭಾಗಕ್ಕೆ ಮಂಗಳವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ  ನಾಗಲಕ್ಷ್ಮೀಬಾಯಿ ಭೇಟಿ ನೀಡಿ, ಅಲ್ಲಿನ ಮಹಿಳಾ ಕೈದಿಗಳ ಕುಶಲೋಪರಿ ವಿಚಾರಿಸಿದರು.

ಕಾರಾಗೃಹದಲ್ಲಿ ಸಾಲಾಗಿ ನಿಂತಿದ್ದ ಮಹಿಳಾ ಕೈದಿಗಳನ್ನು ಒಬ್ಬೊರನ್ನಾಗಿ ಮಾತನಾಡಿಸಿದ ನಾಗಲಕ್ಷ್ಮೀಬಾಯಿ,
ಮಹಿಳೆಯರು ಜೈಲಿಗೆ ಬರಲು ಕಾರಣವೇನು? ಯಾವ ಪ್ರಕರಣ ಸೇರಿ ಮಕ್ಕಳ ಅಪಹರಣ, ಕೊಲೆ ಇತರೆ
ವಿಷಯಗಳ ಕುರಿತು ವಿಚಾರಿಸಿದರು.

ಈ ವೇಳೆ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಅವರ ಮುಂದೆ ಕಣ್ಣೀರಿಟ್ಟ ಸಹೋದರನ ಪುತ್ರನನ್ನು ಅಪಹರಿಸಿ, ಕೊಲೆಗೈದಿರುವ ಆರೋಪದಡಿ ಬಂಧಿತಳಾಗಿದ್ದ ಕೈದಿ ನಾಗಮ್ಮ, ನನಗೆ ಜೈಲಲ್ಲಿ ಜೀವನ ಮಾಡಲಿಕ್ಕೆ ಆಗುತ್ತಿಲ್ಲ. ಸಾಧ್ಯವಾದಷ್ಟು ಬೇಗ ನನ್ನನ್ನು ಹೊರಗಡೆ ಕಳಿಸಿಕೊಡಿ. ಕೂಲಿ-ನಾಲಿ ಮಾಡಿ ಜೀವನ ಮಾಡುತ್ತೇನೆ. ನನ್ನಪರ
ವಕೀಲರಿಗೆ ಹಣ ಜೋಡಿಸಿ ಸಾಕಾಗಿದೆ.

ನಾನು ನನ್ನ ಸಹೋದರನ ಪುತ್ರನನ್ನು ಅಪಹರಿಸಿ ಬೇರೆಯವರಿಗೆ ನೀಡಿದ್ದೇನೆ ಅಷ್ಟೇ. ಅದನ್ನೇ ದೊಡ್ಡದು ಮಾಡಿ ಕೌಲ್‌ ಬಜಾರ್‌ ಪೊಲೀಸರು ನನ್ನನ್ನು ಲಾಠಿಯಿಂದ ಹೊಡೆದು, ಅಪಹರಣ, ಕೊಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಕಣ್ಣೀರಿಟ್ಟರು. ಮಗು ಅಪಹರಣದ ಆರೋಪದಡಿ ಜೈಲು ಸೇರಿರುವ ಮೂವರು ಮಂಗಳಮುಖೀಯರು, ಮಗುವನ್ನು ದತ್ತು ಪಡೆದಿದ್ದು ನಿಜ. ಆದರೆ, ದತ್ತು ಪಡೆದ ಬಗ್ಗೆ ಯಾವುದೇ ದಾಖಲೆಗಳು ನಮ್ಮ ಬಳಿಯಿರಲಿಲ್ಲ. ಅದಕ್ಕಾಗಿಯೇ ದತ್ತು ಪಡೆದ ಮಗುವನ್ನು ಅಪಹರಿಸಿದ್ದಾರೆಂದು ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ಅಳಲು ತೋಡಿಕೊಂಡರು.

ಇದೇ ವೇಳೆ 18 ವರ್ಷದೊಳಗೆ ಮದುವೆ ಮಾಡಿಕೊಂಡಿದ್ದ ಆರೋಪದಡಿ ಬಂಧಿತರಾದ ಯುವತಿಯನ್ನೂ ವಿಚಾರಿಸಲಾಯಿತು. ನಂತರ ಮಹಿಳಾ ಕೈದಿಗಳು ವಾಸವಿರುವ ಕೊಠಡಿ, ಕಾರಾಗೃಹದ ಅಡುಗೆ ಮನೆ, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಮರಣದಂಡನೆ ವಿಧಿಸುವ ಬ್ರಿಟಿಷರ ಕಾಲದ ನೇಣುಗಂಬ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ವೆಂಕಟರಮಣ, ಆಪ್ತ ಕಾರ್ಯದರ್ಶಿ ಪುರುಷೋತ್ತಮ, ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ| ಪಿ.ರಂಗನಾಥ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾಗೇಶ ಬಿಲ್ವ, ಸಂಚಾರ ನಿಯಂತ್ರಣ ಪೊಲೀಸ್‌ ಠಾಣೆ ಪಿಎಸ್‌ಐ ಚಂದ್ರಹಾಸ, ಜೈಲು ಆಸ್ಪತ್ರೆ ವೈದ್ಯ ಡಾ| ಎಸ್‌.ಆರ್‌.ಗುಪ್ತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ವಾರ್ತಾಧಿಕಾರಿ ಬಿ.ಕೆ.ರಾಮಲಿಂಗಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.