ನೀರಿನ ಬವಣೆ ಮುಕ್ತಕ್ಕೆ ಕೆರೆ ನಿರ್ಮಾಣ


Team Udayavani, Jun 18, 2018, 5:15 PM IST

ballery-4.jpg

ಬಳ್ಳಾರಿ: ದಿನೇದಿನೆ ಬೆಳೆಯುತ್ತಿರುವ ಗಣಿನಗರಿ ಬಳ್ಳಾರಿಯಲ್ಲಿ ಜನಸಂಖ್ಯೆಯೂ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಸಮರ್ಪಕ ಕುಡಿವ ನೀರು ಪೂರೈಸುವ ಸಲುವಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ ಯೋಜನೆಯಡಿ ತಾಲೂಕಿನ ಮೋಕಾ ಕೆರೆ ಬಳಿ 800 ಮಿಲಿಯನ್‌ ಲೀಟರ್‌ ಸಾಮರ್ಥ್ಯದ ಮತ್ತೂಂದು ಕೆರೆ ತಲೆ ನಿರ್ಮಾಣಕ್ಕೆ ಮುಂದಾಗುತ್ತಿದ್ದು, ಈಗಾಗಲೇ ಕಾಮಗಾರಿ ಚಾಲನೆ ಪಡೆದುಕೊಂಡಿದೆ.

ಬಳ್ಳಾರಿ ನಗರದಲ್ಲಿ ಅಂದಾಜು 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿದೆ. ಇಷ್ಟು ಜನರಿಗೆ ಕುಡಿವ ನೀರು ಪೂರೈಸುವ ಸಲುವಾಗಿ ಈಗಾಗಲೇ ಅಲ್ಲೀಪುರ ಮತ್ತು ಮೋಕಾ ಹೋಬಳಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಎರಡು ಕೆರೆಗಳಿವೆ.

ಅಲ್ಲೀಪುರ ಕೆರೆಯಿಂದ ಬಳ್ಳಾರಿ ನಗರದ ಭಾಗಶಾ ಪ್ರದೇಶಕ್ಕೆ ಆರು ತಿಂಗಳು ಎಚ್‌ಎಲ್‌ಸಿ ಕಾಲುವೆಯಿಂದ ಉಳಿದ
ಆರು ತಿಂಗಳು ಅಲ್ಲೀಪುರ ಕೆರೆಯಲ್ಲಿ ಸಂಗ್ರಹಿಸಿದ್ದ ನೀರನ್ನು ಪೂರೈಸಲಾಗುತ್ತದೆ. ಅದೇ ರೀತಿ ಮೋಕಾ ಬಳಿಯ ಎಲ್‌ಎಲ್‌ಸಿ ಕಾಲುವೆ ನಂತರ ಕೆರೆಯಿಂದ ನೀರನ್ನು ಪೂರೈಸಲಾಗುತ್ತದೆ.

 ಆದರೂ ಸಹ ಬಳ್ಳಾರಿ ನಗರ ಪ್ರತಿವರ್ಷ ಬೇಸಿಗೆಯಲ್ಲಿ  ಕುಡಿಯುವ ನೀರಿನ ಬವಣೆಯಿಂದ ಮುಕ್ತಗೊಂಡಿಲ್ಲ ಸದ್ಯ ನಗರದ 35 ವಾರ್ಡ್‌ಗಳಿಗೆ 8-10 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತದೆ. ಅಲ್ಲದೇ, ಈ ಕುಡಿಯುವ
ನೀರಿನ ಸಮಸ್ಯೆಯಿಂದ ಮುಕ್ತಗೊಳ್ಳಲು ಹಾಗೂ ದಿನದ 24 ಗಂಟೆಯೂ ನೀರು ಪೂರೈಸಲು ಕರ್ನಾಟಕ ನಗರ
ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಅಮೃತ ಯೋಜನೆಯಡಿ 800 ಎಂಎಲ್‌ ನೀರು
ಸಂಗ್ರಹ ಸಾಮರ್ಥ್ಯವುಳ್ಳ ಮತ್ತೂಂದು ಕೆರೆ ನಿರ್ಮಿಸಲು ಮುಂದಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಅಮೃತ ಯೋಜನೆಯಡಿ ಸುಮಾರು 25 ಕೋಟಿ ರೂ.ಗೂ ಅಧಿಕ
ಅನುದಾನದಲ್ಲಿ ಸುಮಾರು 60ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಕೆರೆ ನಿರ್ಮಿಸಲಾಗುತ್ತಿದೆ. ಕಳೆದ 2016 ಮೇ 13 ರಂದು ಚಾಲನೆ ಪಡೆದುಕೊಂಡಿದ್ದ ಕೆರೆ ನಿರ್ಮಾಣ ಕಾರ್ಯ, 2019ಕ್ಕೆಪೂರ್ಣಗೊಳ್ಳುವ ಸಾಧ್ಯತೆಯಿದೆ. 

ಪ್ರಸಕ್ತ ಕೆರೆ ನಿರ್ಮಾಣ ಪ್ರದೇಶದಲ್ಲಿ ಮಣ್ಣು ಎತ್ತುವ ಮತ್ತು ಬಂಡ್‌ ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಕೆರೆ
ನಿರ್ಮಾಣ ಪ್ರದೇಶದಲ್ಲಿ ಮಣ್ಣನ್ನು ತೆಗೆದು, ಫಲವತ್ತತೆಯುಳ್ಳ ಮಣ್ಣು ಹಾಕುವ ಸಲುವಾಗಿ ಸಾವಿರಾರು ಟನ್‌ ಮರಳನ್ನು ಸಂಗ್ರಹಿಸಲಾಗಿದೆ.

ತಾಲೂಕಿನ ಮೋಕಾ ಹೋಬಳಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಈಗಾಗಲೇ 1200 ಎಂಎಲ್‌ ಸಾಮರ್ಥ್ಯವುಳ್ಳ
ಕೆರೆಯಿದೆ. ತಾಲೂಕಿನ ಕೆಲ ಗ್ರಾಮಗಳು ಸೇರಿ ನಗರದ ಕೆಲ ವಾರ್ಡ್‌ಗಳಿಗೆ ಈ ಕೆರೆಯಿಂದ ಕುಡಿಯುವ ನೀರನ್ನು
ಪೂರೈಸಲಾಗುತ್ತಿದೆ. ಆದರೂ, ಪ್ರತಿವರ್ಷ ಬೇಸಿಗೆಯಲ್ಲಿ ತಪ್ಪದ ಕುಡಿಯುವ ನೀರಿನ ಹಾಹಾಕಾರದಿಂದ ಮುಕ್ತಗೊಳ್ಳುವ ಸಲುವಾಗಿ 800 ಎಂಎಲ್‌ ಸಾಮರ್ಥ್ಯದ ಕುಡಿವ ನೀರಿನ ಕೆರೆ ನಿರ್ಮಿಸಲಾಗುತ್ತಿದೆ.

ನೂತನವಾಗಿ ನಿರ್ಮಿಸಲಾಗಿರುವ ಕೆರೆಯಿಂದ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಗಾಂಧಿನಗರ,
ಬಸವೇಶ್ವರ ನಗರ, ಹೌಸಿಂಗ್‌ ಬೋರ್ಡ್‌, ನೆಹರೂ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳಿಗೆ ನೀರು
ಸರಬರಾಜು ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಕೆರೆಗಳನ್ನು ನಿರ್ಮಿಸಿದರೂ, ನಗರ ಪ್ರದೇಶಗಳಿಗೆ ನೀರು ಪೂರೈಸುವ ವ್ಯವಸ್ಥೆ ಸಮರ್ಪಕವಾಗಿ ನಡೆಯಬೇಕು.

ಆಗ ಮಾತ್ರ ಕೆರೆಗಳ ನಿರ್ಮಾಣ ಉದ್ದೇಶ ಈಡೇರಿದಂತಾಗಲಿದೆ. ಅಂದಾಜು 8 ಕೋಟಿ ರೂ. ವೆಚ್ಚದಲ್ಲಿ ಕೆರೆಗೆ ನೀರು ತುಂಬಿಸುವ ಅತ್ಯಾಧುನಿಕ ಯಂತ್ರೋಪಕರಣ ಖರೀದಿಸಲಾಗಿದೆ. ಏಕಕಾಲದಲ್ಲಿ ಮೂರು ಕೆರೆಗಳಿಗೆ ನೀರು
ತುಂಬಿಸಬಹುದಾಗಿದ್ದು, ಕೇವಲ ಮೂರು ತಿಂಗಳಲ್ಲಿ ಮೂರು ಕೆರೆಗಳಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹಿಸುವ
ಸಾಮರ್ಥ್ಯವನ್ನು ಈ ಯಂತ್ರಗಳು ಹೊಂದಿವೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ

ಬಳ್ಳಾರಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಸಲುವಾಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ 800 ಎಂಎಲ್‌ ನೀರು ಸಂಗ್ರಹ ಸಾಮರ್ಥ್ಯದ ಕೆರೆ ನಿರ್ಮಿಸಲಾಗುತ್ತಿದೆ.
ಈಗಾಗಲೇ ಕಾಮಗಾರಿ ಚಾಲನೆ ಪಡೆದುಕೊಂಡಿದೆ.
 ಜೆ. ವೀರನಗೌಡ ಕಾರ್ಯಪಾಲಕ ಅಭಿಯಂತರರು

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.