ರೈತರ ಸಾಲ ಮನ್ನಾಕ್ಕೆಒತ್ತಾಯ
Team Udayavani, Jun 21, 2018, 10:21 AM IST
ಬಳ್ಳಾರಿ: 2009ಕ್ಕೂ ಹಿಂದಿನ ಬೆಳೆ ಸಾಲವನ್ನೂ ಪರಿಗಣಿಸಿ ಮನ್ನಾ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ 2009 ಏಪ್ರಿಲ್ 1ರಿಂದ 2019 ಡಿಸೆಂಬರ್ 31ರವರೆಗಿನ ಅವಧಿಯಲ್ಲಿ ರೈತರು ಪಡೆದಿದ್ದ ಬೆಳೆ ಸಾಲವನ್ನು ಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಆದರೆ, 2008ರಲ್ಲಿ ಯುಪಿಎ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಿದ್ದರೂ, ವಿಧಿಸಿದ್ದ ಷರತ್ತುಗಳಿಂದ ಸಾವಿರಾರು ರೈತರು ಸಾಲ ಮನ್ನಾದಿಂದ ವಂಚಿತರಾಗಿದ್ದರು. ಹೀಗಾಗಿ ಸಾಲಮನ್ನಾವನ್ನು 2009ಕ್ಕೂ ಹಿಂದಿನ ವರ್ಷಗಳಿಗೆ ಅನ್ವಯವಾಗುವಂತೆ ಕ್ರಮ ಕೈಗೊಳ್ಳಬೇಕು.
2017 ಡಿಸೆಂಬರ್ 31ಕ್ಕೆ ನಿಗದಿಪಡಿಸಿರುವ ಸಾಲಮನ್ನಾದವಾಯಿದೆಯನ್ನು ಸಹ ಮಾರ್ಪಾಡು ಮಾಡಿ 2018 ಮೇ.31ರ ವರೆಗೆ ವಿಸ್ತರಿಸಬೇಕು. ಸಣ್ಣ, ಮಧ್ಯಮ, ದೊಡ್ಡ ರೈತ ಎಂಬ ತಾರತಮ್ಯ ಮಾಡದೆ ಎಲ್ಲ ವರ್ಗದ ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ಅದಕ್ಕೆ ಇಂತಿಷ್ಟು ಲಕ್ಷಗಳೆಂದು ಮಿತಿ ಹಾಕಬಾರದು ಎಂದುಪ್ರತಿಭಟನಾಕಾರರು ಆಗ್ರಹಿಸಿದರು.
ಬ್ಯಾಂಕುಗಳಿಂದ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು. ಕೃಷಿ ಉದ್ದೇಶಕ್ಕಾಗಿ ರೈತ ಕುಟುಂಬದವರು ಆಭರಣಗಳ ಮೇಲೆ ಪಡೆದಿರುವ ಸಾಲ, ಕೃಷಿ ಅಭಿವೃದ್ಧಿಗಾಗಿ ಮಧ್ಯಮ, ದೀರ್ಘಾವಧಿ ಸಾಲ, ಪಶುಪಾಲನೆ ಮಾಡಲು, ಪಾಲಿಕೆ, ನಗರಸಭೆ ವ್ಯಾಪ್ತಿಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿ ಪಡೆಯಲಾಗಿದ್ದ ಕೃಷಿ ಸಾಲ ಮನ್ನಾ ವ್ಯಾಪ್ತಿಗೆ ತರಬೇಕು ಎಂದುಒತ್ತಾಯಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಬೇಕು. ಒಂದು ವೇಳೆ ಸಾಲಮನ್ನಾ ಮಾಡುವುದಾಗಿ ನಿಯಮಗಳನ್ನು ರೂಪಿಸಿ ಸಾಲ ಮನ್ನಾದಲ್ಲಿ ವ್ಯತ್ಯಾಸ ಕಂಡು ಬಂದರೆ ಉಗ್ರ ಸ್ವರೂಪ ಹೋರಾಟ ಹಮ್ಮಿಕೊಳ್ಳಲಾಗುವುದು.
ಈಗಾಗಲೇ ರಾಜ್ಯದ 175 ರೈತ ಸಂಘಟನೆಗಳ ಒಕ್ಕೂಟದಿಂದ ಗ್ರಾಮ ಬಂದ್ ಚಳವಳಿಯನ್ನು ಮಾಡಲಾಗಿದೆ.
ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾಲು, ತರಕಾರಿ ಸ್ಥಗಿತಗೊಳಿಸಲಾಗಿದೆ.
ಇದರಿಂದ ನಗರ ಜೀವನದ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಸಹ ಗ್ರಾಮಬಂದ್ ಚಳವಳಿ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ.ಗೋಣಿಬಸಪ್ಪ, ರಾಜ್ಯ ಕಾರ್ಯಾಧ್ಯಕ್ಷ ಎ.ವೀರಸಂಗಯ್ಯ, ಎಂ.ಎಲ್.ಕೆ.ನಾಯಡು, ಕೃಷ್ಣಪ್ಪ, ದೇವರಮನಿ ಮಹೇಶ್, ವಿರೂಪಾಕ್ಷಪ್ಪ, ಜೆ.ನಾಗರಾಜ್, ವಿ.ನಾಗರಾಜ್, ಬಿ.ಸಿದ್ದನಗೌಡ, ಬಿ.ಉಜ್ಜಿನಯ್ಯ, ಎಸ್ .ಬಾಷಾಸಾಬ್, ಕೆ.ಡಿ.ನಾಯ್ಕ, ರಾಘವೇಂದ್ರ ರೆಡ್ಡಿ, ಮಲ್ಲಿಕಾರ್ಜುನ ಸೇರಿದಂತೆ ಹಲವಾರು ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ