ಯೋಗದಿಂದ ರೋಗ ನಿರೋಧಕ ಶಕ್ತಿ ವೃದ್ಧಿ
Team Udayavani, Jun 22, 2018, 10:51 AM IST
ಬಳ್ಳಾರಿ: ಯೋಗವನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ಎಸ್ಪಿ ಅರುಣ್ ರಂಗರಾಜನ್ ಹೇಳಿದರು.
ನಗರದ ಮುನಿಸಿಪಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನ
ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇವಲ ದೈಹಿಕವಾಗಿ ಸದೃಢವಾಗಿದ್ದರೆ ಒಳ್ಳೆಯ ಆರೋಗ್ಯವಲ್ಲ. ಮನುಷ್ಯ ಮಾನಸಿಕವಾಗಿಯೂ ಮನೋಲ್ಲಾಸದಿಂದ ಇದ್ದಾಗ ಮಾತ್ರ ಮನುಷ್ಯ ಅತ್ಯುತ್ತಮ ಆರೋಗ್ಯ ಸ್ಥಿತಿ ಹೊಂದಿರಲು ಸಾಧ್ಯವಾಗಲಿದೆ. ಹೀಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡು ಸದೃಢರಾಗಬೇಕೆಂದು ಕರೆ ನೀಡಿದರು.
ಪ್ರತಿನಿತ್ಯ ಯೋಗಾಭ್ಯಾಸದಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ. ಯೋಗಾಭ್ಯಾಸವನ್ನು ಜೀವನದಲ್ಲಿ
ಅಳವಡಿಸಿಕೊಂಡಲ್ಲಿ ಆರೋಗ್ಯದ ಬಗ್ಗೆ ನಿರ್ಭಿತಿಯಿಂದ ಜೀವನ ನಡೆಸಲು ಈ ಯೋಗವು ಸಹಕಾರಿಯಾಗಲಿದೆ. ಹೀಗಾಗಿ ಆರೋಗ್ಯ ಪೂರ್ಣ ಬದುಕಿಗೆ ಯೋಗ ಅತ್ಯುತ್ತಮ ಸಾಧನವಾಗಲಿದೆ ಎಂದರು.
ಅಂತಾರಾಷ್ಟ್ರೀಯ ಯೋಗ ದಿನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಬೇಕಾದರೆ ಯೋಗವೊಂದೇ ಬಹುದೊಡ್ಡ ಸಾಧನವಾಗಿದೆ ಎಂದರು.
ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯು ಅತ್ಯಂತ ಲವಲವಿಕೆಯಿಂದ ಇರುತ್ತಾನೆ. ಹೀಗಾಗಿ ಎಲ್ಲರೂ ನಿರಂತರವಾಗಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಸದೃಢ ಆರೋಗ್ಯಕ್ಕೆ ಯೋಗ ಸಾಧನವು ಬಹುಮುಖ್ಯವಾಗಿದೆ ಎಂದರು. ಜಿಪಂ ಅಧ್ಯಕ್ಷೆ ಸಿ.ಭಾರತಿ ಮಾತನಾಡಿದರು.
ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ನಿರ್ಮಲಾಜಿಯವರು ಯೋಗಾಭ್ಯಾಸದ ಕುರಿತು ಉಪನ್ಯಾಸ ನೀಡಿದರು. ನಂತರ ಮೈದಾನದಲ್ಲಿ ಕೆಲಹೊತ್ತು ಯೋಗಾಭ್ಯಾಸ ನಡೆಯಿತು. ಶಿಬಿರದಲ್ಲಿ ಡಿಸಿ, ಎಸ್ಪಿ, ಸಿಇಒ, ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷರು ಮೇಯರ್, ಉಪಮೇಯರ್ ಸೇರಿದಂತೆ ಈಶ್ವರೀಯ ವಿವಿಯ ನೂರಾರು ಯೋಗ ಸಾಧಕರು, ವಿದ್ಯಾರ್ಥಿಗಳೊಂದಿಗೆ ಕುಳಿತು ಯೋಗಾಭ್ಯಾಸದಲ್ಲಿ ತೊಡಗಿದ್ದರು.
ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್.ಬಸರೆಡ್ಡಿ, ಮೇಯರ್ ಆರ್.ಸುಶೀಲಾಬಾಯಿ, ಉಪಮೇಯರ್ ಉಮಾದೇವಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಪಿ.ಶೋಭಾ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಹಮತ್ ಉಲ್ಲಾ, ಡಾ| ಅನಿಲಕುಮಾರ್, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ|
ವಂದನಾ ಗಾಳಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿ ಬಿ.ಕೆ.ನಿರ್ಮಲಾಜಿ, ಜಿಲ್ಲೆಯ ಆಯಾ ತಾಲೂಕಿನ ನೋಡಲ್ ಅಧಿಕಾರಿಗಳಾದ ಡಾ| ವಿಜಯಕುಮಾರ, ಡಾ| ರೂಪಸಿಂಗ್ ರಾಥೋಡ, ಡಾ| ವಿಜಯೇಂದ್ರಚಾರ್, ಡಾ| ಕೊಟ್ರೇಶ, ಡಾ| ಶಶಿಧರ ರಾಮದುರ್ಗ, ಡಾ| ರಾಜೇಶ್ವರಿ, ಡಾ| ಗುರುಬಸವರಾಜ, ಡಾ| ಉಮೇಶ ಕಾಖಂಡಕಿ ಇದ್ದರು.
ಯೋಗ ತರಬೇತುದಾರರಾದ ರಾಜೇಂದ್ರರೆಡ್ಡಿ, ಉಷಾ ಹಾಗೂ ಜಗದೀಶ ಅವರು ನಾನಾ ಭಂಗಿಯ ಯೋಗಾಭ್ಯಾಸ ತಿಳಿಸಿಕೊಟ್ಟರು. ನಂತರ ಮೈದಾನದಲ್ಲಿ ಯೋಗ ಜಾಗೃತಿ ಶಿಬಿರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜಾಥಾವು ಮೈದಾನದಿಂದ ಡಾ| ರಾಜ್ ರಸ್ತೆ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಕೆ.ಸಿ.ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು