ರೈಲು ಪ್ರಯಾಣಿಕರಿಗೆ ಉಚಿತ ವೈಫೈ


Team Udayavani, Jul 20, 2018, 3:25 PM IST

bell-1.jpg

ಬಳ್ಳಾರಿ: ರೈಲು ಪ್ರಯಾಣಿಕರೇ…! ರೈಲು ತಡವಾಗಿ ಆಗಮಿಸಲಿದೆ ಎಂದು ನಿಲ್ದಾಣದಲ್ಲೇ ಕೂಡಲು ಬೇಸರವಾಗುತ್ತಿದೆಯೇ…? ತಾವು ಸಂಚರಿಸಬೇಕಾದ ರೈಲು ಇನ್ನು ಎಷ್ಟು ದೂರದಲ್ಲಿದೆ ಎಂಬುದನ್ನು ತಿಳಿಯಲು ಅಂತರ್ಜಾಲದ ಸೌಲಭ್ಯ ಬೇಕೆ…? ಹಾಗಿದ್ದರೆ, ಇನ್ನು ಚಿಂತೆ ಬಿಡಿ. ಪ್ರಯಾಣಿಕರಲ್ಲಿ ಸ್ಮಾರ್ಟ್‌ಫೋನ್‌ ಇದ್ದರೆ ಸಾಕು. ಅದಕ್ಕೆ ನಿಲ್ದಾಣವೇ ವೈಫೈ ಸಂಪರ್ಕ ಕಲ್ಪಿಸಿಕೊಡಲಿದೆ. ಜತೆಗೆ ಸಮಯ ಕಳೆಯಲು ಮನೋರಂಜನೆಯನ್ನೂ ಪಡೆಯಬಹುದಾಗಿದೆ.

ಹೌದು….! ಬಡವರ ವಿಮಾನ ಎಂದು ಕರೆಯುವ ರೈಲು ಪ್ರಯಾಣಿಕರಿಗೆ ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗವು ರೈಲು ಪ್ರಯಾಣಿಕರಿಗಾಗಿ ನೂತನ ವೈಫೈ ಯೋಜನೆಯನ್ನು ಜಾರಿಗೆ ತಂದಿದೆ. ನಿಲ್ದಾಣದಲ್ಲಿ ಸ್ಮಾರ್ಟ್‌ಫೋನ್‌ವುಳ್ಳ ಎಲ್ಲ ಪ್ರಯಾಣಿಕರಿಗೂ ಉಚಿತವಾಗಿ ವೈಫೈ ಸೌಲಭ್ಯ ದೊರೆಯಲಿದೆ. ಇದರಿಂದ ರೈಲಿಗಾಗಿ ನಿಲ್ದಾಣದಲ್ಲಿ ಕಾದು ಕುಳಿತುಕೊಳ್ಳುವ ಪ್ರಯಾಣಿಕರು ವೈಫೈ ಸಂಪರ್ಕ ಪಡೆದು ಮೊಬೈಲ್‌ನಲ್ಲಿ ಮನೋರಂಜನೆ ವೀಕ್ಷಿಸಬಹುದಾಗಿದೆ. ಈ ಮೂಲಕ ನಿಲ್ದಾಣಕ್ಕೆ ರೈಲು ಆಗಮಿಸುವವರೆಗೂ ಸಮಯವನ್ನೂ ಕಳೆಯಬಹುದಾಗಿದೆ.

ಈ ವೈಫೈ ಸಂಪರ್ಕ ಪಡೆಯಲು ತಮ್ಮ ಮೊಬೈಲ್‌ ನಂಬರ್‌ ಒಮ್ಮೆ ಅದರಲ್ಲಿ ಲಾಗಿನ್‌ (ಪಾಸ್‌ ವರ್ಡ್‌) ಆದರೆ ಸಾಕು. ಉಚಿತವಾಗಿ ಅಂತರ್ಜಾಲ ಸೌಲಭ್ಯವನ್ನು ಪಡೆಯಬಹುದಾಗಿದ್ದು, ಉಚಿತವಾಗಿ ಮನೋರಂಜನೆಯನ್ನೂ ಪಡೆಯುವ ಮೂಲಕ ಖುಷಿಯಿಂದಲೇ ರೈಲು ಪ್ರಯಾಣ ಮಾಡಬಹುದಾಗಿದೆ. 

ರೈಲು ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸಿರುವ ದಕ್ಷಿಣ ಪಶ್ಚಿತ ರೈಲ್ವೆ ಇಲಾಖೆಯು ಮೊದಲ ಹಂತದಲ್ಲಿ ಬಳ್ಳಾರಿ, ಹೊಸಪೇಟೆ, ಹುಬ್ಬಳ್ಳಿ, ಬೆಳಗಾವಿ, ಕಲುಬುರ್ಗಿ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ. ನೌಕರರು, ಕಾರ್ಮಿಕರು, ಪ್ರಯಾಣಿಕರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಈ ನಿಲ್ದಾಣಗಳಲ್ಲಿ ಸಂಚರಿಸುತ್ತಾರೆ. ಹೀಗಾಗಿ ಮೊದಲ ಹಂತದಲ್ಲಿ ಈ ಐದು ನಿಲ್ದಾಣಗಳನ್ನು ವೈಫೈ ಸಂಪರ್ಕ ಕಲ್ಪಿಸಲು ಆಯ್ಕೆ ಮಾಡಿಕೊಳ್ಳಲಾಗಿದ್ದು, ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಇನ್ನಷ್ಟು ಹೆಚ್ಚು ಪ್ರಯಾಣಿಕರು ಸಂಚರಿಸುವ ನಿಲ್ದಾಣಗಳಿಗೆ ವಿಸ್ತರಿಸಲಾಗುವುದು ಎನ್ನುತ್ತಾರೆ ರೈಲ್ವೆ ಇಲಾಖೆಯ ಸಿಬ್ಬಂದಿಗಳು.

ಅರ್ಧ ಗಂಟೆ ವೇಗ: ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ದೊರೆಯುವ ವೈಫೈ ಸೌಲಭ್ಯವು ನಿಲ್ದಾಣದಿಂದ 100 ಮೀಟರ್‌ ವ್ಯಾಪ್ತಿಗೆ ಮಾತ್ರ ಸೀಮಿತವಾಗಿರುತ್ತದೆ. ಪ್ರಯಾಣಿಕರ ಮೊಬೈಲ್‌ಗೆ ಒಮ್ಮೆ ಸಂಪರ್ಕವಾದರೆ ಅರ್ಧ ಗಂಟೆ ವೇಗವಾಗಿ ವೈಫೈ ಸೌಲಭ್ಯ ಸಿಗಲಿದೆ. ನಂತರ ನಿಧಾನವಾಗಲಿದೆ. ಪುನಃ ವೇಗ ಪಡೆದುಕೊಳ್ಳಬಹುದು ಎಂದು ಹಾಗೆ ಮುಂದುವರೆದರೂ ಪ್ರಯೋಜನವಿಲ್ಲ. ಒಂದು ದಿನಕ್ಕೆ ಒಬ್ಬರಿಗೆ ಅರ್ಧ ಗಂಟೆ ಮಾತ್ರ ವೈಫೈಯನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದಾಗಿದ್ದು, ಪುನಃ ಬೇಕು ಎಂದರೆ, ಮರುದಿನ ಪುನಃ ನಿಲ್ದಾಣಕ್ಕೆ ಆಗಮಿಸಬೇಕು.

ಏನೇನು ಸೌಲಭ್ಯ ಪಡೆಯಬಹುದು: ನಿಲ್ದಾಣದಲ್ಲಿ ಉಚಿತವಾಗಿ ದೊರೆಯುವ ವೈಫೈ ಸೌಲಭ್ಯದಿಂದ ನಿಲ್ದಾಣದಲ್ಲೇ ತತ್ಕಾಲ್‌ನಲ್ಲಿ ರೈಲುಗಳಲ್ಲಿ ಆಸನಗಳನ್ನು ಮೀಸಲಿರಿಸಬಹುದು. ಈಗಾಗಲೇ ರಿಜರ್ವೇಷನ್‌ ಆಗಿದ್ದ ಆಸನಗಳ ಸಂಖ್ಯೆ ಮತ್ತು ಬೋಗಿಗಳನ್ನು ಖಚಿತವಾಗಿದೆಯೇ ಎಂಬುದನ್ನು ತಿಳಿಯಬಹುದು. ಇದರೊಂದಿಗೆ ರೈಲ್ವೆ ಇಲಾಖೆಯ ಆಪ್‌ವುಳ್ಳ ಪ್ರಯಾಣಿಕರು ತಾವು ಸಂಚರಿಸಬೇಕಾದ ರೈಲು ನಿಲ್ದಾಣದಿಂದ ಎಷ್ಟು ದೂರದಲ್ಲಿದೆ? ಎಷ್ಟು ಗಂಟೆಗೆ ನಿಲ್ದಾಣಕ್ಕೆ ಆಗಮಿಸಲಿದೆ? ಯಾವ ಪ್ಲಾಟ್‌ಫಾರ್ಮ್ನಲ್ಲಿ ಬಂದು ನಿಲ್ಲಲಿದೆ? ಎಂಬುದನ್ನೂ ಆನ್‌ಲೈನ್‌ ನಲ್ಲೇ ತಿಳಿದುಕೊಳ್ಳಬಹುದು. ಈಗಾಗಲೇ ಎಲ್ಲ ಪ್ರಯಾಣಿಕರ ಬಳಿ ಅಂತರ್ಜಾಲ ಸೌಲಭ್ಯವುಳ್ಳ ಸ್ಮಾರ್ಟ್‌ಫೋನ್‌ಗಳಿವೆಯಾದರೂ, ಪ್ರಯಾಣಿಕರ ಅನುಕೂಲಕ್ಕಾಗಿ ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಈ ವೈಫೈ ಸೌಲಭ್ಯ ಕಲ್ಪಿಸಿಕೊಡುತ್ತಿದೆ
 
ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ವ್ಯಾಪ್ತಿಯ ಬಳ್ಳಾರಿ, ಹೊಸಪೇಟೆ, ಹುಬ್ಬಳ್ಳಿ, ಬೆಳಗಾವಿ, ಕಲುಬುರ್ಗಿಯಲ್ಲಿನ ನಿಲ್ದಾಣಗಳಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲ್‌ನಲ್ಲಿ ಸಂಚರಿಸುತ್ತಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿಲ್ದಾಣಗಳಲ್ಲಿ ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ವೈಫೈ ಸಂಪರ್ಕ ಕಲ್ಪಿಸಲಾಗುತ್ತಿದೆ.

ಸ್ಮಾರ್ಟ್‌ಫೋನ್‌ವುಳ್ಳ ಪ್ರಯಾಣಿಕರು ಈ ವೈಫೈನ್ನು ಉಚಿತವಾಗಿ ಬಳಸಿಕೊಳ್ಳಬಹುದು. ನಿಲ್ದಾಣದಲ್ಲೇ ಆಸನ ರಿಜರ್ವೇಷನ್‌ ಸೇರಿ ಸೌಲಭ್ಯ ಪಡೆಯಬಹುದು ಎಂದು ಹೆಸರು ಹೆಳಲಿಚ್ಚಿಸದ ರೈಲು ಸಿಬ್ಬಂದಿ ಒಬ್ಬರು ಹೇಳುತ್ತಾರೆ. 

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.