ಬಯಲು ಶೌಚ ಮುಕ ಜಿಲ್ಲೆಗೆ ಆ.15ರ ಗಡುವು


Team Udayavani, Jul 24, 2018, 4:39 PM IST

bella.jpg

ಬಳ್ಳಾರಿ: ಮನೆಗೊಂದು ಪ್ರತ್ಯೇಕ ಶೌಚಾಲಯ ನಿರ್ಮಿಸುವಲ್ಲಿ ಜಿಲ್ಲೆಯ ಕೇಂದ್ರಸ್ಥಾನ ಬಳ್ಳಾರಿ ತಾಲೂಕೇ ಹಿಂದೆ ಬಿದ್ದಿರುವುದು ಶೋಚನೀಯ ಸಂಗತಿ ಎಂದು ಜಿಪಂ ಯೋಜನಾ ನಿರ್ದೇಶಕ ಚಂದ್ರಶೇಖರಗುಡಿ ವಿಷಾದ ವ್ಯಕ್ತಪಡಿಸಿದರು.

ನಗರದ ಬಿಡಿಎಎ ಸಭಾಂಗಣದಲ್ಲಿ ತಾಪಂ ವತಿಯಿಂದ ಸೋಮವಾರ ಏರ್ಪಡಿಸಿದ್ದ ಬಯಲು ಶೌಚಾಲಯ ಮುಕ್ತ ತಾಲೂಕಿಸುವ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಿಂದುಳಿದ ಹೈಕ ಭಾಗದಲ್ಲಿ ಗುರುತಿಸಿಕೊಂಡಿರುವ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಹೊಸಪೇಟೆ ಹೊರತುಪಡಿಸಿ ಉಳಿದೆಲ್ಲ ತಾಲೂಕುಗಳು ಅತ್ಯಂತ ಹಿಂದುಳಿದಿವೆ. ಆದರೆ, ಶೌಚಾಲಯ ನಿರ್ಮಾಣದಲ್ಲಿ ಹಿಂದುಳಿದ ಎಲ್ಲ ತಾಲೂಕುಗಳು ಮುಂದಾಗಿದ್ದರೆ, ಬಳ್ಳಾರಿ ತಾಲೂಕು ಮಾತ್ರ ಅತ್ಯಂತ ಹಿಂದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ಜಿಲ್ಲೆಯಲ್ಲಿ 1.40 ಲಕ್ಷ ಶೌಚಾಲಯ ನಿರ್ಮಿಸಲಾಗಿದೆ. ಇನ್ನು ಕೇವಲ 14755 ಸಾವಿರ ಮಾತ್ರ ಬಾಕಿ ಉಳಿದಿವೆ. ಈ ಪೈಕಿ ಹೊಸಪೇಟೆ ಶೇ.100ರಷ್ಟು ಗುರಿ ಸಾಧಿ ಸಿದ್ದರೆ, ಹಡಗಲಿ 894, ಹ.ಬೊ.ಹಳ್ಳಿ 3960, ಕೂಡ್ಲಿಗಿ 2855, ಸಂಡೂರು 1826, ಸಿರುಗುಪ್ಪ 280, ಬಳ್ಳಾರಿ 4940 ಸೇರಿದಂತೆ ಒಟ್ಟು 14755 ಸಾವಿರ ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ. ಬಯಲು ಶೌಚಾಲಯ ಮುಕ್ತ ಜಿಲ್ಲೆಯಾಗಿಸಲು ಕೇವಲ 14000 ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಆ.15 ರೊಳಗಾಗಿ ಬಾಕಿ ಶೌಚಾಲಯಗಳನ್ನು ನಿರ್ಮಿಸಿ, ಜಿಲ್ಲೆಯನ್ನು ಬಯಲು ಶೌಚಾಲಯ ಮುಕ್ತಗೊಳಿಸುವಲ್ಲಿ ಗ್ರಾಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಅಧಿಕಾರಿಗಳು ಎಲ್ಲರೂ ಪಣ ತೊಡಬೇಕೆಂದು ತಾಕೀತು ಮಾಡಿದರು.

ರಾಜ್ಯದ 30 ಜಿಲ್ಲೆಗಳಲ್ಲಿ 20 ಜಿಲ್ಲೆಗಳು ಬಯಲು ಶೌಚಾಲಯ ಮುಕ್ತ ಜಿಲ್ಲೆಗಳಾಗಿವೆ. ಪಕ್ಕದ ಕೊಪ್ಪಳ ಜಿಲ್ಲೆಯು ಬಯಲು ಶೌಚಾಲಯದಿಂದ ಮುಕ್ತಗೊಂಡಿರುವ ಜಿಲ್ಲೆಯಾಗಿದೆ. ಆದರೆ, ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ಹಿಂದೆ ಬಿದ್ದಿದ್ದು, ಈ 10 ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆ ಮುಂದಿದೆ. ಜಿಲ್ಲೆಯಲ್ಲಿ ಶೇ.94.5ರಷ್ಟು ಗುರಿ ಸಾಧಿಸಲಾಗಿದ್ದು, ಇನ್ನು ಕೇವಲ ಶೇ.5.5ರಷ್ಟು ಗುರಿ ಸಾಧಿಸಿದರೆ, ಬಳ್ಳಾರಿಯೂ ಬಯಲು ಶೌಚಾಲಯ ಮುಕ್ತ ಜಿಲ್ಲೆಯಾಗಿ ಹೊರ ಹೊಮ್ಮಲಿದೆ ಎಂದರು.

ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳುವಂತೆ ಈಗಾಗಲೇ ಹಲವು ಬಾರಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಕೆಲವರು ಶೌಚಾಲಯ ನಿರ್ಮಿಸಿಕೊಳ್ಳಲು ಆಸಕ್ತಿ ತೋರಿದರೆ, ಇನ್ನು ಕೆಲವರು ನಿರಾಸಕ್ತಿ ತೋರಿದ್ದಾರೆ.

ಆದರೂ, ಶೌಚಾಲಯ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿದೆ. ಪ್ರತಿಯೊಬ್ಬರೂ ಶ್ರಮಿಸಿ ಮುಂದಿನ ಆ.15 ರೊಳಗಾಗಿ ಇನ್ನುಳಿದ 14755 ಸಾವಿರ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಬಳ್ಳಾರಿ ಜಿಲ್ಲೆಯನ್ನು ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿಸಬೇಕು. ಎಸ್‌ಸಿ-ಎಸ್‌ಟಿಗೆ 15000 ರೂ., ಸಾಮಾನ್ಯ ವರ್ಗಕ್ಕೆ 12000 ರೂ. ಅನುದಾನ ನೀಡಲಾಗುತ್ತದೆ. ಇದನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಪಂ ಅಧ್ಯಕ್ಷೆ ರಮೀಜಾ ಬೀ, ಉಪಾಧ್ಯಕ್ಷ ಮಲ್ಲಿಕಾರ್ಜುನ, ತಾಪಂ ಇಒ ಜಾನಕಿರಾಮ್‌, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರಿದ್ದರು. ಬಳಿಕ ಬಯಲು ಶೌಚಾಲಯ ಮುಕ್ತ ತಾಲೂಕಾಗಿಸುವ ಕುರಿತು ತರಬೇತಿ ಶಿಬಿರ ನಡೆಯಿತು

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.