ವಿದ್ಯಾರಣ್ಯ ಭಾರತೀ ಸ್ವಾಮೀಜಿಗಳಿಂದ ಚಾತುರ್ಮಾಸ ವ್ರತ ಆರಂಭ


Team Udayavani, Jul 28, 2018, 11:17 AM IST

bell.jpg

ಹೊಸಪೇಟೆ: ಐತಿಹಾಸಿಕ ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಗುರು ಪೂರ್ಣಿಮೆ ಅಂಗವಾಗಿ ಹಂಪಿಯ ವಿದ್ಯಾರಣ್ಯ ಪೀಠಾಧಿಪತಿ ಶ್ರೀಭಾರತಿ ಸ್ವಾಮೀಜಿ ಶ್ರೀವಿರೂಪಾಕ್ಷೇಶ್ವರಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ವೇದವ್ಯಾಸ ಪೂಜೆ ಸಲ್ಲಿಸಿದರು. ಬೆಳಗ್ಗೆ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಸ್ನಾನ, ಸಂಧ್ಯಾವಂದನೆ ಸಲ್ಲಿಸಿದ ವಿದ್ಯಾರಣ್ಯ ಶ್ರೀಭಾರತಿ ಸ್ವಾಮೀಜಿ, ದತ್ತಾತ್ರೇಯ, ವೇದವ್ಯಾಸರು, ಕೃಷ್ಣ ಹಾಗೂ ಶಂಕರಾಚಾರ್ಯ ಅವರಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಚಾತುರ್ಮಾಸ ವ್ರತವನ್ನು ಆರಂಭಿಸಿದರು.

ಆಷಾಢ ಗುರುಪೂರ್ಣಿಮೆಯ ದಿನದಿಂದ ಕಾರ್ತಿಕ ಶುದ್ಧ ಪೂರ್ಣಿಮೆಯವರೆಗಿನ ಚಾತುರ್ಮಾಸ ಅವಧಿಯಲ್ಲಿ ಭಾರತಿ ಶ್ರೀಗಳು ಗಡಿದಾಟಿ ಎಲ್ಲಿಯೂ ಹೋಗದೆ, ಹಂಪಿಯಲ್ಲಿಯೇ ವಾಸ್ತವ್ಯ ಹೂಡಿ, ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ. ಪ್ರತಿನಿತ್ಯವೂ ವಿರೂಪಾಕ್ಷೇಶ್ವರ ಸ್ವಾಮಿಗೆ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸುತ್ತಾರೆ. ಚಾತುರ್ಮಾಸದಲ್ಲಿ ಗುರುಪಾದುಕೆ ವಿಶೇಷ ಪೂಜೆ ನಡೆಯಲಿದ್ದು, ಪ್ರತಿದಿನ ನೂರಾರು ಭಕ್ತರು ಗುರುದರ್ಶನ ಪಡೆಯಲಿದ್ದಾರೆ.

ಈ ಅವಧಿಯಲ್ಲಿ ನಾಗಪಂಚಮಿ, ಗಣೇಶ ಚತುರ್ಥಿ, ನವರಾತ್ರಿ ಹಬ್ಬಗಳನ್ನು ಹಂಪಿಯಲ್ಲಿ ಆಚರಣೆ ಮಾಡಲಾಗುತ್ತದೆ. ಅಂತಿಮವಾಗಿ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸುವ ಮೂಲಕ ತಮ್ಮ ವ್ರತಾಚರಣೆ ಪೂರ್ಣಗೊಳಿಸಿ, ಇತರೆ ಗ್ರಾಮಗಳಿಗೆ ಪುರ ಪ್ರವೇಶ ಮಾಡಲಿದ್ದಾರೆ.

ಚಂದ್ರಗ್ರಹಣ: ಈ ಮಧ್ಯೆ ಶುಕ್ರವಾರ ರಾತ್ರಿ ಚಂದ್ರಗ್ರಹಣ ಸಂಭವಿಸುವ ಹಿನ್ನೆಲೆಯಲ್ಲಿ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 1.30ಕ್ಕೆ ವಿಶೇಷ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 3.30ಕ್ಕೆ ಹುಣ್ಣಿಮೆ ಉತ್ಸವ ನಡೆಯಿತು. ನಂತರ ದೇವಸ್ಥಾನ ಗರ್ಭಗುಡಿ ಬಾಗಿಲು ಹಾಕಲಾಯಿತು.

ಪ್ರತಿನಿತ್ಯ ರಾತ್ರಿ 8ರ ವರೆಗೆ ಭಕ್ತರಿಗೆ ವಿರೂಪಾಕ್ಷೇಶ್ವರಸ್ವಾಮಿಯ ದರ್ಶನ ಭಾಗ್ಯವಿರುತ್ತಿತ್ತು. ಆದರೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನ 3.30ಕ್ಕೆ ಬಾಗಿಲು ಹಾಕಲಾಗಿದ್ದು, ಮರುದಿನ ಬೆಳಗ್ಗೆ ದೇವಸ್ಥಾನ ಶುದ್ಧಗೊಳಿಸಿ, ಶ್ರೀಗಳ ನೇತೃತ್ವದಲ್ಲಿ ದೈನಂದಿನ ವಿಶೇಷ ಪೂಜೆಗಳು ನಡೆಯಲಿವೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಜೆ.ಎಚ್‌.ಶ್ರೀನಾಥಶರ್ಮ ತಿಳಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.