ಕಾಯಂಗೆ ಅರ್ಜಿಯಲ್ಲಿ ಮೇಸ್ತ್ರಿ ಸಂಬಂಧಿಗಳು!


Team Udayavani, Jul 30, 2018, 4:23 PM IST

bell-1.jpg

ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ 176 ಪೌರ ಕಾರ್ಮಿಕರ ನೇರ ನೇಮಕಾತಿಗೆ ಪ್ರಕ್ರಿಯೆ ನಡೆಯುತ್ತಿದೆಯಾದರೂ, ದಶಕಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದ ಮೂಲ ಪೌರಕಾರ್ಮಿಕರಿಗೆ ಅನ್ಯಾಯವಾಗುವ ಸಾಧ್ಯತೆ ದಟ್ಟವಾಗಿದೆ. ಮೇಸ್ತ್ರಿ, ಸ್ಯಾನಿಟೇಷನ್‌ ಇನ್ಸ್‌ಪೆಕ್ಟರ್‌ ಗಳು ತಮ್ಮ ಸಂಬಂಧಿಕರಿಂದ ಅರ್ಜಿ ಸಲ್ಲಿಸಿರುವುದು ಈ ಅಕ್ರಮಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಹಿಂದಿನ ಕಾಂಗ್ರೆಸ್‌ ಸರ್ಕಾರ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ, ಉಳಿದ ಬಳ್ಳಾರಿ ಸೇರಿ 10 ಮಹಾನಗರ ಪಾಲಿಕೆಗಳಲ್ಲಿ ಕೊರತೆಯಿದ್ದ ಪೌರಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವಂತೆ ಹೊರಡಿಸಿದ್ದ ಆದೇಶದ ಹಿನ್ನೆಲೆಯಲ್ಲಿ ಇಲ್ಲಿನ ಪಾಲಿಕೆಯಲ್ಲಿ 176 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 570 ಅರ್ಜಿಗಳು ಸಲ್ಲಿಕೆಯಾಗಿದೆ. ಆದರೆ, ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರನ್ನು ನಿರ್ವಹಿಸುವ ಮೇಸ್ತ್ರಿಗಳು ಮತ್ತು ಸ್ಯಾನಿಟೇಷನ್‌ ಇನ್ಸ್‌ಪೆಕ್ಟರ್‌ಗಳು, ತಮ್ಮ ಸಂಬಂಧಿಕರಿಂದಲೂ ಅರ್ಜಿ ಸಲ್ಲಿಸಿದ್ದಾರೆ. 

ಈ ಮೂಲಕ ಮೇಸ್ತ್ರಿ, ಸ್ಯಾನಿಟೇಷನ್‌ ಇನ್ಸಪೆಕ್ಟರ್‌ಗಳಿಂದಲೇ ಮೂಲ ಪೌರಕಾರ್ಮಿಕರಿಗೆ ಅನ್ಯಾಯವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಗುತ್ತಿಗೆಪೌರಕಾರ್ಮಿಕರ ಹಾಜರಾತಿ ಪುಸ್ತಕಕ್ಕೆ ಅಷ್ಟೇ ಸೀಮಿತವಾಗಿದ್ದ ಇವರ ಸಂಬಂಧಿಕರು ಹೆಸರಿಗಷ್ಟೇ ಪೌರಕಾರ್ಮಿಕರಾಗಿದ್ದು, ಎಂದೂ ರಸ್ತೆಗಿಳಿದು ಕಸಗುಡಿಸುವ ಕೆಲಸ ಮಾಡಿಲ್ಲ. ಇನ್ನು ಕೆಲವರು ತಮ್ಮ ವೇತನದಲ್ಲಿ ಮೇಸ್ತ್ರಿಗೆ ಒಂದಷ್ಟು ಹಣ ಕೊಟ್ಟು ಕೆಲಸ ಮಾಡದೆ ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿಮಾಡಿ ಮನೆಗೆ ಹೋಗುವಂತಹ ಪೌರಕಾರ್ಮಿ ಕರೂ ಅರ್ಜಿ ಸಲ್ಲಿಸಿದ್ದಾರೆ ಎಂದುತಿಳಿದುಬಂದಿದೆ. ಹೀಗೆ ಹಾಜರಾತಿ ಪುಸ್ತಕದಲ್ಲಿ ಸಹಿಗಷ್ಟೇ ಸೀಮಿತವಾಗಿರುವ ಇಂಥವರನ್ನು ಜಿಲ್ಲಾಡಳಿತ ಒಂದು ವೇಳೆ ನೇಮಕ ಮಾಡಿದರೆ ದಶಕಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮೂಲ ಪೌರಕಾರ್ಮಿಕರಿಗೆ ಅನ್ಯಾಯವಾಗಲಿದೆ. ಹೀಗಾಗಿ ಅಂಥ ಅರ್ಜಿಗಳನ್ನು ಜಿಲ್ಲಾಡಳಿತ ಕೈಬಿಡಬೇಕೆಂಬುದು ಮೂಲ ಪೌರಕಾರ್ಮಿಕರ ಒತ್ತಾಯವಾಗಿದೆ.

ದಿನೇದಿನೆ ವಿಸ್ತಾರಗೊಳ್ಳುತ್ತಿರುವ ಗಣಿನಗರಿ ಬಳ್ಳಾರಿ ಮಹಾನಗರ ಪಾಲಿಕೆಗೆ ಒಟ್ಟು 650 ಪೌರಕಾರ್ಮಿಕರ ಅಗತ್ಯವಿದೆ. ಪಾಲಿಕೆಯಲ್ಲಿ ಸದ್ಯ 178 ಕಾಯಂ, 465 ಗುತ್ತಿಗೆ ಸೇರಿ ಒಟ್ಟು 643 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲಾಡಳಿತ ಅಗತ್ಯವಿರುವ 465 ಪೌರಕಾರ್ಮಿಕರ ಬದಲಿಗೆ ಕೇವಲ 176 ಹುದ್ದೆಗಳಿಷ್ಟೇ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 570 ಜನರಿಂದ ಅರ್ಜಿಗಳು ಸಲ್ಲಿಕೆಯಾಗಿವೆ. ನಿಯಮದ ಪ್ರಕಾರ ಪೌರಕಾರ್ಮಿಕರಿಗೆ ಸಮವಸ್ತ್ರ, ಮುಖಕ್ಕೆ ಮಾಸ್ಕ್, ಕೈ ಗವಸು, ಕಾಲಿಗೆ ಬೂಟು, ಪೊರಕೆ, ಆರೆ, ಬಕೆಟ್‌ ಸೇರಿ ಒಟ್ಟು 25 ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಕೈಗೊಂಡಿರುವ ಕ್ರಮಗಳು ಭೌತಿಕವಾಗಿ ಪೌರಕಾರ್ಮಿಕರ ಕೈ ಸೇರದಿದ್ದರೂ, ಅದಕ್ಕಾಗುವ ವೆಚ್ಚದ ಬಿಲ್ಲುಗಳು ಮಾತ್ರ ಪಾಸಾಗುತ್ತವೆ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಪೌರ ಕಾರ್ಮಿಕರಿಗೆ ಈ ಮೊದಲು ಪೇ ಸ್ಕೇಲ್‌ ಪ್ರಕಾರ ವೇತನ ನೀಡಲಾಗುತ್ತಿತ್ತು. ಪ್ರತಿ ತಿಂಗಳು ಕಾರ್ಮಿಕರ ಕೈ ಸೇರಬೇಕಿದ್ದ ವೇತನ 4 ತಿಂಗಳಿಗೊಮ್ಮೆ 2 ತಿಂಗಳ ವೇತನ ಪಾವತಿಸಲಾಗುತ್ತಿದೆ. ಮಾರ್ಚ್‌, ಏಪ್ರಿಲ್‌ ತಿಂಗಳ ವೇತನ ಜು. 12 ರಂದು ಪಾವತಿಯಾಗಿದ್ದು, ಇನ್ನು ಮೇ, ಜೂನ್‌ ತಿಂಗಳ ವೇತನ ಬಾಕಿ ಉಳಿದಿದೆ. ವೇತನ ಪಾವತಿಗೆ ನಿಗದಿತ ದಿನಾಂಕವಿಲ್ಲದಿದ್ದರೂ, 10ನೇ ತಾರೀಖು ಮೇಲೆ ಪಾವತಿಸಲಾಗುತ್ತಿದೆ. 

ಕಾಯಂ ಮತ್ತು ಗುತ್ತಿಗೆ ಪೌರಕಾರ್ಮಿಕರ ಆರೋಗ್ಯ, ಸುರಕ್ಷೆ ವಿಷಯದಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಕೈ ಗವಸು, ಮಾಸ್ಕ್ ಸೇರಿ ಅಗತ್ಯ ಪರಿಕರಗಳನ್ನು ಆಯಾ ವಿಭಾಗದ ಕಚೇರಿಯಲ್ಲಿ ಸಂಗ್ರಹಿಸಿಡಲಾಗಿದೆ. 3 ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ಅವಧಿಯಲ್ಲೇ ವೇತನ ಪಾವತಿಸಲಾಗುತ್ತದೆ. ಆದರೆ, ಗುತ್ತಿಗೆದಾರರಿಂದ ತಡವಾಗಿ ಕಾರ್ಮಿಕರ ಕೈ ಸೇರುತ್ತಿರಬಹುದು. ಸದ್ಯ ಪೌರಕಾರ್ಮಿಕರ ಹುದ್ದೆಗಳಿಗೆ ನೇರನೇಮಕಾತಿ ನಡೆಯುತ್ತಿದೆ.
  ನಾರಾಯಣಪ್ಪ, ಆಯುಕ್ತರು, ಮಹಾನಗರ ಪಾಲಿಕೆ, ಬಳ್ಳಾರಿ

ಪೌರಕಾರ್ಮಿಕರ ನೇರ ನೇಮಕಾತಿಗೆ ಸಂಬಂಧಿಸಿದಂತೆ ಪಾಲಿಕೆ ಮೇಸ್ತ್ರಿಗಳು, ಸ್ಯಾನಿಟೇಷನ್‌ ಇನ್ಸ್‌ಪೆಕ್ಟರ್‌ಗಳು ತಮ್ಮ ಸಂಬಂಧಿ ಕರಿಂದ ಅರ್ಜಿ ಸಲ್ಲಿಸಿರುವುದು ನಮ್ಮ ಗಮನಕ್ಕಿಲ್ಲ. ಗುತ್ತಿಗೆದಾರರಿಂದ ಮಾಹಿತಿ ಪಡೆಯಲಾಗುವುದು. ಒಂದುವೇಳೆ ಅದು ನಿಜವಾದಲ್ಲಿ ದಶಕಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದ ಮೂಲ ಪೌರಕಾರ್ಮಿಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಪೌರಕಾರ್ಮಿಕರಿಗೆ ಸಮವಸ್ತ್ರ, ಕೈ ಗವಸು ಇತರೆ ಪರಿಕರಗಳನ್ನು ಗುತ್ತಿಗೆದಾರರು ನೀಡುತ್ತಿಲ್ಲ. ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
 ಆರ್‌.ಸುಶೀಲಾಬಾಯಿ, ಮಹಾಪೌರರು, ಮಹಾನಗರ ಪಾಲಿಕೆ, ಬಳ್ಳಾರಿ

„ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.