ಪ್ಲೀಸ್‌! ನಮಗೂ ಬದುಕಲು ಅವಕಾಶ ಕೊಡಿ


Team Udayavani, Aug 17, 2018, 5:29 PM IST

bell-2.jpg

ನಮನ ಹಂಪಿ
ರಾಮಾಯಣದಲ್ಲಿ ಸೀತೆಯನ್ನು ಕಾಪಾಡಲು ಬೆಟ್ಟ ಹಾರಿ ಹನುಮಂತ ಶ್ರೀರಾಮನ ಸಂದೇಶ ನೀಡಿ ಧೈರ್ಯವಾಗಿರುವಂತೆ ಹೇಳಿದ. ಆದರೆ ಇಲ್ಲಿ ಪರಿಸ್ಥಿತಿ ತುಂಬ ಭಿನ್ನ. ಇಲ್ಲಿನ ದೃಶ್ಯ ನೋಡಿದರೆ ನಿಮ್ಮ ಕಂಗಳಲಿ ನೀರು ಬರದೆ ಇರದು. ಮುನಿದುಕೊಂಡ ತುಂಗಭದ್ರೆಯ ರುದ್ರ ನರ್ತನಕ್ಕೆ ನಲುಗಿ ಹೋಗಿದ್ದೇವೆ. ಅಸಹಾಯಕರಾಗಿದ್ದೇವೆ. ನಮ್ಮ ಪರಿಸ್ಥಿತಿಯನ್ನು ತೋರಿಸಲು ಪಾಪಾ.. ಆ ರಾಚಯ್ಯನೇ ಬರಬೇಕಾಯಿತು. ನಮಗೀಗ ರಾಮನಾಮ ಜಪ ಮಾಡದೆ ಬೇರೆ ವಿಧಿಯಲ್ಲ.

ಹೌದು, ಇಂಥ ಪರಿಸ್ಥಿತಿ ವಿಶ್ವಪ್ರಸಿದ್ಧ ಹಂಪಿ ನದಿ ಪಾತ್ರದಲ್ಲಿ ಕಳೆದೆರಡು ದಿನಗಳಿಂದ ಕಂಡು ಬರುತ್ತಿದೆ. ಈ ಕುರಿತು ನಮ್ಮ ಅಹವಾಲು ಹೇಳಿಕೊಳ್ಳಲೇಬೇಕಾಗಿದೆ. ನಾಳೆಯ ಉಳುವೆಗೆ ನಾವು ಅನಾಥರಾಗದೇ ಜೀವಿಸಬೇಕಿದೆ. ಅಂಗೈ ಅಗಲ ತುಂಬ, ತನ್ನ ಕಬಂಧ ಬಾಹುಗಳು ಮೈಕೊರೆಯುವ ಚಳಿಗೆ ಸೋತು ಹೋಗುತ್ತಿವೆ. ಮೈಮರೆತರೆ ಮಡಿಲಿನಲ್ಲಿ ಮುಂಜಾನೆಯ ಕನಸು ಕಾಣುತ್ತಿರುವ ಹಸುಗೂಸುಗಳು ನೆಮ್ಮದಿಯ ನಿದ್ರೆಗೆ ಜಾರುವುದಿಲ್ಲ. ಒಬ್ಬರನ್ನೊಬ್ಬರು ಅಪ್ಪಿಕೊಂಡಿರುವ ಸ್ನೇಹಿತ, ಆತ್ಮೀಯ ಎಲ್ಲರೂ ಒಬ್ಬರಿಗೊಬ್ಬರು ಧೈರ್ಯ ತಂದುಕೊಡುತ್ತಿದ್ದೇವೆ. ಯಾಕೋ ಏನೋ ಈ ಬಾರಿ ತುಂಗಭದ್ರೆ ತುಸು ಹೆಚ್ಚೇ ಮುನಿಸಿಕೊಂಡಿದ್ದಾಳೆ.

ಮಲೆನಾಡು, ಪಶ್ಚಿಮಘಟ್ಟದ ಪ್ರಕೃತಿಗೆ ವರುಣ ದೇವನೇನೋ ತಥಾಸ್ತು ಎಂದಿದ್ದಾನೆ. ಆದರೆ ಅದರ ಸಿಟ್ಟು, ಸೆಡುವು ತುಂಗಭದ್ರೆ ತನ್ನ ಒಡಲಾಳ ತುಂಬಿಕೊಂಡು ಇಲ್ಲಿ ತೋರಿಸುತ್ತಿದ್ದಾಳೆ. ಇನ್ನಿಲ್ಲದಂತೆ ಝೇಂಕರಿಸುತ್ತಿದ್ದಾಳೆ. ಈಕೆಯ ಕೋಪ ತಾಪಕ್ಕೆ ನಾವಿರುವ ಸ್ಥಳ ಅಕ್ಷರಶಃ ದಿಕ್ಕಿಲ್ಲದಂತಾಗಿದೆ. ಸುತ್ತಲೂ ತುಂಗಭದ್ರೆಯ ನರ್ತನಕ್ಕೆ ಕಳೆದೆರಡು ದಿನಗಳಿಂದ ಬೆಚ್ಚಿ ಬಿದ್ದಿದ್ದೇವೆ.

ಸಾಕು ಮಾಡು ತಾಯಿ! ನಾವಾದ್ರೂ ಅಲ್ಪಸ್ವಲ್ಪ ತಡೆದುಕೊಳ್ಳಬಹುದು. ಆದರೆ ಪಾಪ ಹಸುಗೂಸುಗಳು ಎದೆಯಲ್ಲಿ ಬೆಚ್ಚನೆಯ ಜಾಗ ಹುಡುಕುತ್ತಿವೆ. ತೋಯ್ದು ತೊಪ್ಪೆಯಾಗಿ ಕೂಳಿಲ್ಲದೇ ಧೋ ಎಂದು ಹರಿಯುವ ನಿನ್ನ ನೋಡಿ ಶಪಿಸಬೇಕೆನಿಸುತ್ತಿದೆ. ಆದರೇನು ಮಾಡೋದು ನಮಗೆ ಮಾತುಬಾರದು. ರಾತ್ರಿ ಕೊರೆಯುವ ಚಳಿಗೆ ಮಕ್ಕಳು ಹೈರಾಣಾಗುತ್ತಿವೆ. ಮನುಷ್ಯರಿಗೆ ಮಾತ್ರ ಜೀವವಿದೆಯಾ? ಮನುಷ್ಯ ಜಾತಿಗೆ ಹೋಲುವ ನಾವಾರೂ ಯಾರಿಗೂ ಕಾಣಿಸುತ್ತಿಲ್ಲವೇ? ನಮ್ಮಂಥವರಿಗೆಂದೇ ಸರ್ಕಾರದ ಇಲಾಖೆಯೊಂದು ಇದೆಯಂತೆ. 

ಆದರೇನು ಮಾಡೋದು ಮನುಜರಿಗಿರುವ ಬೆಲೆ ನಮಗಿಲ್ಲವೇ? ರಾಮಾಯಾಣದಲ್ಲಿ ಶ್ರೀರಾಮನ ನಾಮಬಲವೇ ಶಕ್ತಿಯಾಗಿತ್ತು. ಇದೀಗ ನಮಗೆ ಹಂಪಿಯ ಕೋದಂಡರಾಮನೇ ಬಲ. ಆತನ ದೇಗುಲವೇ ನಮಗೆ ಶ್ರೀರಕ್ಷೆ. ಆ ದೇಗುಲದ ಕಂಬದ ತುದಿಯಲ್ಲಿ ನಾವಿಬ್ಬರೂ ನಮ್ಮ ಮಕ್ಕಳೊಂದಿಗೆ, ಕುಟುಂಬದೊಂದಿಗೆ ಹೇಗಿರಬೇಕು? ಹೇ ಶ್ರೀರಾಮ ಈಗಲೂ ನೀನು ಇದ್ದರೆ ನಮ್ಮನ್ನು ಕಾಪಾಡು! ಅತ್ತು ಅತ್ತು ಅಳು ಬತ್ತಿಹೋಗಿದೆ. ನಮ್ಮನ್ನು ನಾವು ಸಂತೈಸಿಕೊಳ್ಳಬೇಕಿದೆ. ದಿನವೂ ಭಕ್ತರ ಹಣ್ಣು ಹಂಪಲು ಸಿಗುತ್ತಿತ್ತು. ಆದರೆ ಕಳೆದೊಂದು ವಾರದಿಂದ ತುಂಗಭದ್ರೆ ಮೈದುಂಬಿ ಹಂಪಿ ಹೊಳೆಯ ಮೂಲಕ ಹರಿಯುತ್ತಿದ್ದಾಳೆ. ನಿನ್ನೆ ಮೊನ್ನೆಯಂತೂ 2 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಬಿಡುತ್ತಿದ್ದಂತೆ ನದಿ ಪಾತ್ರದ ನಾವೆಲ್ಲ ಕಂಗಾಲಾಗಿದ್ದೇವೆ. ರಭಸದಿಂದ ಹೊಳೆಯಲ್ಲಿ ಬಾಳೆ ದಿಂಡು ಕಿತ್ತು ತಿನ್ನಲು ಹರಸಾಹ ಪಡುತ್ತಿದ್ದೇವೆ. ಆದರೆ ಏನೂ ಉಪಯೋಗವಾಗುತ್ತಿಲ್ಲ. ಸುತ್ತಲೂ ತುಂಗಭದ್ರೆ ಒಂದೇ ಸಮನೆ ಬುಸುಗುಡುತ್ತಿದ್ದಾಳೆ.

ಎತ್ತಲೂ ಹೋಗದ ಪರಿಸ್ಥಿತಿ. ತಿನ್ನಲು ನಮಗೇನೂ ಸಿಗುತ್ತಿಲ್ಲ. ಮಾರುದ್ದ ಈಜಾಡಲು ನಮಗಾಗುವುದಿಲ್ಲ. ಅಲ್ಲಿಯ ಬೋರ್ಗರತೆ ದನಿ ಕೇಳಿಯೇ ಭಯಗೊಂಡಿದ್ದೇವೆ. ಕಳೆದೊಂದು ದಶಕದಿಂದೇಚೆಗೆ ಇಂಥ ಪರಿಸ್ಥಿತಿಯಿದ್ದರೂ ನಮ್ಮನ್ನು ಚಿತ್ರಿಸುವವರು ಕಡಿಮೆಯಿದ್ದರು. ಆದರೆ ಇಂದು ನಮ್ಮವರನ್ನು ನಮಗೆ ತಿಳಿಯದಂತೆ ಸೆರೆ ಹಿಡಿದಿದ್ದಾರೆ.

ಇಂದು ಸಂಜೆಯ ಹೊತ್ತಿಗೆ ಬದುಕಿನ ಭರವಸೆ ಕ್ಷೀಣಿಸುತ್ತಿದೆ. ಒಬ್ಬರಿಗೊಬ್ಬರು ಧೈರ್ಯ ತಂದುಕೊಳ್ಳುತ್ತಿದ್ದೇವೆ. ಆತ್ಮಸ್ಥೈರ್ಯ ಕುಸಿಯುತ್ತಿದೆ. ಆದರೆ ಸೋಲು ಒಪ್ಪಿಕೊಳ್ಳುತ್ತಿಲ್ಲ. ಇನ್ನೇನು ಮಾಡೋದು? ನಾಳೆಯ ಒಂದೊಳ್ಳೆ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಸಾಧ್ಯವಾದರೆ ನಮ್ಮನ್ನು ಕಾಪಾಡಿ. ಸುರಕ್ಷಿತ ಸ್ಥಳಗಳಿಗೆ ಕರೆದುಕೊಂಡು ಹೋಗಿ ಬಿಡಿ. ನಾವು ಬದುಕಬೇಕಿದೆ. ಬದುಕಲು ಅವಕಾಶ ಮಾಡಿಕೊಡಿ! ನಮಗೂ ಬದುಕುವ ಹಕ್ಕಿದೆ. ಹೀಗೆಂದು ನಮಗೆ ಕೇಳಲೂ ಹಕ್ಕಿಲ್ಲವೇ? ಹೌದು ನಾವು ಮೂಕರು. ಆದರೆ ಮನಸು…. ಮೂಕಲ್ಲ. ಸಹಾಯ ಮಾಡಿ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.