2220 ಹೆಕೆ 2220 ಹೆಕ್ಟೇರ್‌ ಜಮೀನು ಜಲಾವೃತ


Team Udayavani, Aug 19, 2018, 3:58 PM IST

bell-1.jpg

ಕಂಪ್ಲಿ: ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಲಕ್ಷಾಂತರ ಕ್ಯೂಸೆಕ್‌ ನೀರನ್ನು ಬಿಡುತ್ತಿರುವುದರಿಂದ ನದಿತೀರದ ಮೂರು ತಾಲೂಕುಗಳಲ್ಲಿ ಸುಮಾರು 2,220 ಹೆಕ್ಟೇರ್‌ ಜಮೀನು ಜಲಾವೃತಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಹೇಳಿದರು.

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ, ಕೋಟೆಯ ಮೀನುಗಾರರ ಕಾಲೋನಿ ಹಾಗೂ ತುಂಗಭದ್ರಾ ಪ್ರವಾಹದಿಂದ ಜಲಾವೃತಗೊಂಡ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ಬಳ್ಳಾರಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗದಿದ್ದರೂ, ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದರಿಂದ ತುಂಗಭದ್ರಾ ನದಿ ಉಕ್ಕಿ ಹರಿದ ಪರಿಣಾಮ ಜಿಲ್ಲೆಯ ಹಡಗಲಿ, ಕಂಪ್ಲಿ ಮತ್ತು ಸಿರಗುಪ್ಪ ತಾಲೂಕಿನಲ್ಲಿ ಸುಮಾರು 2,220 ಹೆಕ್ಟೇರ್‌ ಜಮೀನು ಜಲಾವೃತಗೊಂಡಿದ್ದು, ರೈತರು ನಾಟಿ ಮಾಡಿದ ಭತ್ತ, ಬಾಳೆ, ಕಬ್ಬು ಸೇರಿದಂತೆ ಇತರೆ ಬೆಳೆಗಳಿಗೆ ಹಾನಿಯಾಗಿದೆ ಎಂದರು.

ನದಿಯಲ್ಲಿ ಪ್ರವಾಹ ತಗ್ಗಿದ ನಂತರ ಕಂದಾಯ ಇಲಾಖೆ ಮೂಲಕ ಸಮೀಕ್ಷೆ ನಡೆಸಲಾಗುವುದು. ಈಗಾಗಲೇ ಪ್ರವಾಹ ಕಡಿಮೆಯಾಗುತ್ತಿದ್ದು, ಬೆಳೆಗಳು ಹಾಳಾಗಿರುವುದಿಲ್ಲ ಎಂಬ ಆಶಾಭಾವ ಇದೆ. ಬೆಳೆಗಳು ಹಾಳಾಗಿದ್ದರೆ ಸರ್ಕಾರಕ್ಕೆ ವರದಿ ಸಲ್ಲಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದರು.

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಎರಡು ಜಿಲ್ಲೆಗಳ ಪ್ರಮುಖ ಸೇತುವೆಯಾಗಿದ್ದು, ಬಹುತೇಕ ಶಿಥಿಲಗೊಂಡಿದೆ. ಇದೀಗ ನದಿ ಪ್ರವಾಹದಿಂದ ಸೇತುವೆಯ ರಕ್ಷಣಾ ಕಂಬಗಳು ಮುರಿದು ಬಿದ್ದಿವೆ. ಈ ಸೇತುವೆ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರಲಿದ್ದು, ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೇತುವೆ ತಾತ್ಕಾಲಿಕ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಎರಡೂ ಜಿಲ್ಲೆಗಳ ಶಾಸಕರೊಂದಿಗೆ ಹಾಗೂ ಲೋಕೋಪಯೋಗಿ ಸಚಿವರೊಂದಿಗೆ ಚರ್ಚಿಸಿ ನೂತನ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋಟೆಯ ಮೀನುಗಾರರ ಕಾಲೋನಿಗೆ ಪ್ರತಿವರ್ಷ ಪ್ರವಾಹ ಬಂದಾಗಲೆಲ್ಲ ನೀರು ಹೋಗುತ್ತಿರುವುದರಿಂದ ಸಮಗ್ರವಾಗಿ ಸಮೀಕ್ಷೆ ನಡೆಸಿ, ಅಲ್ಲಿ ಕಾಲೋನಿಯಲ್ಲಿ ವಾಸಿಸುವವರಿಂದ 94 ಸಿಸಿ ಅರ್ಜಿ ಪಡೆದು ಶಾಶ್ವತ ವಸತಿ ಕಲ್ಪಿಸಲು ತೀರ್ಮಾನಿಸಲಾಗಿದೆ. ಸಮಗ್ರ ಸಮೀಕ್ಷೆ ನಡೆಸುವಂತೆ ಕಂಪ್ಲಿ ತಹಶೀಲ್ದಾರ್‌ ಅವರಿಗೆ ಸೂಚಿಸಿದರು. ಪುರಸಭೆ ಅಧ್ಯಕ್ಷ ಎಂ. ಸುಧೀರ್‌, ತಹಶೀಲ್ದಾರ್‌ ಎಂ.ರೇಣುಕಾ, ಹಿರಿಯ ಮುಖಂಡರಾದ ಕೆ.ಎಂ. ಹೇಮಯ್ಯಸ್ವಾಮಿ, ಪುರಸಭೆ ಸದಸ್ಯರಾದ ಬಟ್ಟ ಪ್ರಸಾದ್‌, ಮರೆಣ್ಣ, ಗೆಜ್ಜೆಳ್ಳಿ ಭಾಷಾ, ಮುಖಂಡರಾದ ಕೆ.ಎಸ್‌. ಚಾಂದ್‌ಭಾಷಾ, ಬಿ. ರವೀಂದ್ರಕುಮಾರ್‌, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವಾಮದೇವ ಕೊಳ್ಳಿ, ವಿವಿಧ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪರ್ಯಾಯ ಬೆಳೆ ಬೆಳೆಯಿರಿ 
ಕಂಪ್ಲಿ: ತಾಲೂಕಿನಲ್ಲಿ ಉತ್ತಮ ನೀರಿನ ಸೌಲಭ್ಯಗಳಿದ್ದು, ರೈತರು ಕೇವಲ ಬಾಳೆ ಹಾಗೂ ಭತ್ತ ಬೆಳೆಯದೇ ಪರ್ಯಾಯ ಬೆಳೆ ಬೆಳೆಯಬೇಕು. ತೋಟಗಾರಿಕೆ ಬೆಳೆ ಬೆಳೆಯುವತ್ತ ಗಮನ ಹರಿಸಬೇಕು ಜಿಲ್ಲಾ ಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂಜೂರ ಮತ್ತು ದಾಳಿಂಬೆ ಸಂಸ್ಕರಣ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳಲಾಗಿದೆ. ಶಾಸಕರಾದ ಜೆ.ಎನ್‌ ಗಣೇಶ್‌ ಅವರು ಕಂಪ್ಲಿಯ ಸಮಗ್ರ ಅಭಿವೃದ್ಧಿಗೆ ನೂರಾರು ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಇದೀಗ
ಕಂಪ್ಲಿ ತಾಲೂಕಿನಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ನೀಡಲಾಗುವುದು. ಗಣಿಬಾಧಿ ತ ಪ್ರದೇಶಗಳ ಅಭಿವೃದ್ದಿಗೆ ಹೊಸಪೇಟೆ ತಾಲೂಕಿಗೆ 4500 ಕೋಟಿ ರೂಗಳ ಕ್ರಿಯಾಯೋಜನೆ ತಯಾರಿಸಿ ಕಳುಹಿಸಲಾಗಿದೆ. ಇದರಲ್ಲಿ ಹೊಸಪೇಟೆ, ಕಂಪ್ಲಿ ಮತ್ತು ಮರಿಯಮ್ಮನಹಳ್ಳಿಗಳನ್ನು
ಸೇರಿಸಲಾಗಿದ್ದು, ಕಂಪ್ಲಿ ತಾಲೂಕಿಗೆ 400 ರಿಂದ 500 ಕೋಟಿ ರೂ. ಬರುವ ನಿರೀಕ್ಷೆ ಇದೆ ಎಂದರು. ಕಳೆದ ವರ್ಷ ನಿರ್ಮಿಸಿದ ಬುಕ್ಕಸಾಗರ ಕಡೇಬಾಗಿಲು ಸೇತುವೆ ಬಿರುಕು ಬಿಟ್ಟಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಳೆದ ಮೇ ತಿಂಗಳಲ್ಲಿ ಪ್ರಕೃತಿ ವಿಕೋಪದಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರ ನೀಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.