ತುಂಗಭದ್ರಾ ನದಿಯಲ್ಲಿ ಪ್ರವಾಹ ಇಳಿಮುಖ
Team Udayavani, Aug 19, 2018, 4:04 PM IST
ಕಂಪ್ಲಿ: ಸ್ಥಳೀಯ ಪಟ್ಟಣದ ಕೋಟೆ ಪ್ರದೇಶದಲ್ಲಿ ಕಳೆದ 5 ದಿನಗಳಿಂದ ಮೈದುಂಬಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಇಂದು ಬೆಳಿಗ್ಗೆಯಿಂದ ಪ್ರವಾಹದ ಪ್ರಮಾಣ ಕಡಿಮೆಯಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದ್ದು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ನದಿಗೆ ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಬಿಡುತ್ತಿರುವುದರಿಂದ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಕೆಳಭಾಗದಲ್ಲಿ ನೀರು ಹರಿಯುತ್ತಿರುವುದು ಕಂಡು ಬಂದಿತು.
ಕಂಪ್ಲಿ-ಗಂಗಾವತಿ ಸೇತುವೆ ಮೇಲೆ ನೀರು ಇಲ್ಲದೇ ಇರುವುದರಿಂದ ಕಳೆದ 5 ದಿನಗಳಿಂದ ಪ್ರವಾಹಕ್ಕೆ ನೀರಿನ ಜೊತೆಯೇ ಹರಿದು ಬಂದ ಕಸಕಡ್ಡಿ, ಗಿಡ ಗಂಟೆಗಳು ಸೇತುವೆಯ ಕಂಬಿಗಳಿಗೆ ಸಿಕ್ಕಿಕೊಂಡಿವೆ. ಇದರಿಂದ ಸಾರ್ವಜನಿಕರ ಹಾಗೂ ದ್ವಿಚಕ್ರಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಆದರೆ ಇಂದು ಬೆಳಗ್ಗೆ ಪುರಸಭೆಯ ಸಿಬ್ಬಂದಿಗಳು ಸೇತುವೆಯ ಮೇಲೆ ಸಂಗ್ರಹವಾಗಿದ್ದ ಕಸಕಡ್ಡಿಗಳನ್ನು, ಗಿಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು. ಸೇತುವೆ ಮೇಲೆ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ಕಡೆಯ ಸಾರ್ವಜನಿಕರು ಸಂಭ್ರಮದಿಂದ ಸೇತುವೆಯ ಮೇಲೆ ಓಡಾಡುತ್ತಿರುವುದು
ಕಂಡು ಬಂತು. ಜೊತೆಗೆ ಕಂಪ್ಲಿಯಿಂದ ಗಂಗಾವತಿಗೆ ಹೋಗುವವರು ಹಾಗು ಗಂಗಾವತಿ ಭಾಗದಿಂದ ಕಂಪ್ಲಿ ಕಡೆಗೆ ಬರುವವರು ತಮ್ಮ ಸಾಮಗ್ರಿಗಳನ್ನು ಹೊತ್ತುಕೊಂಡು ಸೇತುವೆ ಮೇಲೆ ನಡೆದುಕೊಂಡು ಬರುವ ಹಾಗೂ ಆಟೋಗಳ ಮೂಲಕ ಸಂಚರಿಸುವ ದೃಶ್ಯ ಸಂಜೆಯವರೆಗೂ ಕಂಡು ಬಂತು.
ಪುರಸಭೆ ಅಧ್ಯಕ್ಷರಾದ ಎಂ. ಸುಧೀರ್, ಕಂದಾಯ ಇಲಾಖೆ ಅಧಿಕಾರಿಗಳು ಸೇತುವೆ ಮೇಲಿನ ಕಸಕಡ್ಡಿ,ಗಿಡ ಮರಗಳ ತೆರವು ಕಾರ್ಯ ಪರಿಶೀಲಿಸಿದರು. ನದಿಯಲ್ಲಿ ಪ್ರವಾಹ ಕಡಿಮೆಯಾಗಿದ್ದರೂ ಯಾವ ಕ್ಷಣದಲ್ಲಿಯಾದರೂ ಪುನಃ ಪ್ರವಾಹ ಬರಬಹುದು ಎಂಬ ಹಿನ್ನೆಲೆಯಲ್ಲಿ ನದಿ ತೀರದಲ್ಲಿ ಕಂಪ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ