ಹಂಪಿ ವಿರೂಪಾಕ್ಷೇಶ್ವರಗೆರೇಷ್ಮೆ ನೂಲಿನ ಅಲಂಕಾರ
Team Udayavani, Aug 27, 2018, 5:48 PM IST
ಹೊಸಪೇಟೆ: ನೂಲು ಹುಣ್ಣಿಮೆ ನಿಮಿತ್ತ ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಪ್ರತಿಮೆಗೆ ಭಾನುವಾರ ರೇಷ್ಮೆ ನೂಲಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.
ಹಂಪಿ ವಿದ್ಯಾರಣ್ಯ ಪೀಠದ ಪೀಠಾಧಿಪತಿ ಶ್ರೀ ವಿದ್ಯಾರಣ್ಯ ಭಾರತಿ ಶ್ರೀಗಳು, ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ವಿಗ್ರಹಕ್ಕೆ ಅಭಿಷೇಕ ನಡೆಸಿ ನಂತರ ರೇಷ್ಮೆ ನೂಲಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆರ್ಚಕರಿಂದ ಉಪಾಕರ್ಮ ಹೋಮ ನೆರವೇರಿತು. ಪ್ರಧಾನ ಅರ್ಚಕರಾದ ಜೆ.ಎಸ್. ಶ್ರೀನಾಥ ಶರ್ಮಾ, ಮಂಜುನಾಥ, ಪಿ.ಶ್ರೀನಿವಾಸ ಶರ್ಮಾ ಹಾಗೂ ಮುರುಳಿಧರ ಶಾಸ್ತ್ರೀಯವರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ದೇವಾಲಯದ ಪ್ರಾಂಗಣದಲ್ಲಿ ರಜತ ನಂದಿ ವಾಹನ ಉತ್ಸವ ನಡೆಯಿತು.
ನೂಲು ಹುಣ್ಣಿಮೆ ಪ್ರಯುಕ್ತ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಹಂಪಿಗೆ ಭೇಟಿ ನೀಡಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾಂಬಿಕೆ ದೇವಿ ದರ್ಶನ ಪಡೆದು ಹೂವು, ಹಣ್ಣು ಹಾಗೂ ಕಾಣಿಕೆ ಸಲ್ಲಿಸಿದರು.
ವಿರೂಪಾಕ್ಷನಿಗೆ ಐದು ದಿನಗಳ ಕಾಲ ರೇಷ್ಮೆ ನೂಲಿನ ಅಲಂಕಾರ ಮಾಡಲಾಗುತ್ತದೆ. ನಂತರ ದೇವರಿಗೆ ಸಮರ್ಪಿಸಲಾಗಿದ್ದ ರೇಷ್ಮೆ ನೂಲನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಪ್ರಸಾದ ರೂಪದಲ್ಲಿ ಇದನ್ನು ಸ್ವೀಕರಿಸುವ ಭಕ್ತರು ದಾರಗಳನ್ನು ಧರಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ