ಹಂಪಿ ವಿರೂಪಾಕ್ಷೇಶ್ವರಗೆರೇಷ್ಮೆ ನೂಲಿನ ಅಲಂಕಾರ
Team Udayavani, Aug 27, 2018, 5:48 PM IST
ಹೊಸಪೇಟೆ: ನೂಲು ಹುಣ್ಣಿಮೆ ನಿಮಿತ್ತ ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಪ್ರತಿಮೆಗೆ ಭಾನುವಾರ ರೇಷ್ಮೆ ನೂಲಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.
ಹಂಪಿ ವಿದ್ಯಾರಣ್ಯ ಪೀಠದ ಪೀಠಾಧಿಪತಿ ಶ್ರೀ ವಿದ್ಯಾರಣ್ಯ ಭಾರತಿ ಶ್ರೀಗಳು, ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ವಿಗ್ರಹಕ್ಕೆ ಅಭಿಷೇಕ ನಡೆಸಿ ನಂತರ ರೇಷ್ಮೆ ನೂಲಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆರ್ಚಕರಿಂದ ಉಪಾಕರ್ಮ ಹೋಮ ನೆರವೇರಿತು. ಪ್ರಧಾನ ಅರ್ಚಕರಾದ ಜೆ.ಎಸ್. ಶ್ರೀನಾಥ ಶರ್ಮಾ, ಮಂಜುನಾಥ, ಪಿ.ಶ್ರೀನಿವಾಸ ಶರ್ಮಾ ಹಾಗೂ ಮುರುಳಿಧರ ಶಾಸ್ತ್ರೀಯವರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ದೇವಾಲಯದ ಪ್ರಾಂಗಣದಲ್ಲಿ ರಜತ ನಂದಿ ವಾಹನ ಉತ್ಸವ ನಡೆಯಿತು.
ನೂಲು ಹುಣ್ಣಿಮೆ ಪ್ರಯುಕ್ತ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಹಂಪಿಗೆ ಭೇಟಿ ನೀಡಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾಂಬಿಕೆ ದೇವಿ ದರ್ಶನ ಪಡೆದು ಹೂವು, ಹಣ್ಣು ಹಾಗೂ ಕಾಣಿಕೆ ಸಲ್ಲಿಸಿದರು.
ವಿರೂಪಾಕ್ಷನಿಗೆ ಐದು ದಿನಗಳ ಕಾಲ ರೇಷ್ಮೆ ನೂಲಿನ ಅಲಂಕಾರ ಮಾಡಲಾಗುತ್ತದೆ. ನಂತರ ದೇವರಿಗೆ ಸಮರ್ಪಿಸಲಾಗಿದ್ದ ರೇಷ್ಮೆ ನೂಲನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಪ್ರಸಾದ ರೂಪದಲ್ಲಿ ಇದನ್ನು ಸ್ವೀಕರಿಸುವ ಭಕ್ತರು ದಾರಗಳನ್ನು ಧರಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!