ತಾಲೂಕು ಕೇಂದ್ರಗಳಲ್ಲಿ ತಾತ್ಕಾಲಿಕಪುನರ್ವಸತಿ ಕೇಂದ್ರ ಸ್ಥಾಪಿಸಿ: ಹಂದ್


Team Udayavani, Aug 30, 2018, 12:26 PM IST

bell-1.jpg

ಬಳ್ಳಾರಿ: ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾಲೂಕು ಕೇಂದ್ರಗಳಲ್ಲಿ ತಾತ್ಕಾಲಿಕ ಪುನರ್‌ವಸತಿ ಕೇಂದ್ರಗಳನ್ನು ತೆರೆಯುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಅಗತ್ಯಬಿದ್ದರೆ ಜಿಲ್ಲಾ ಖನಿಜ ನಿಧಿಯನ್ನು ಬಳಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌
ನ್ಯಾಯಾಧೀಶರಾದ ಎಸ್‌.ಬಿ.ಹಂದ್ರಾಳ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2018-19ನೇ ಸಾಲಿನ 2ನೇ ತ್ತೈಮಾಸಿಕ ಜಿಲ್ಲಾ ಮಟ್ಟದ ಮಾನವ ಅಕ್ರಮ ಸಾಗಾಣಿಕೆ ತಡೆ ಕುರಿತ ಸಮನ್ವಯ ಸಮಿತಿ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು
ಮಾತನಾಡಿದರು. 

ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ನೀಡುವುದು ಹಾಗೂ ಅಗತ್ಯವಿದ್ದರೆ ಪೊಲೀಸರಿಂದ ರಕ್ಷಣೆ, ವೈದ್ಯಕೀಯ ಚಿಕಿತ್ಸೆ ಸಮರ್ಪಕವಾಗಿ ಒದಗಿಸಬೇಕು. ನೊಂದ ಮಹಿಳೆಯರಿಗೆ ಉಚಿತ ಕಾನೂನು ನೆರವು ಕಾನೂನು ಸೇವಾ ಪ್ರಾಧಿಕಾರ ಒದಗಿಸಲಿದೆ ಎಂದು ತಿಳಿಸಿದರು. 

2017-18ನೇ ಸಾಲಿನಲ್ಲಿ ಮಹಿಳೆಯರ ಸಂರಕ್ಷಣೆ ಕಾಯ್ದೆ ಅಡಿ 194 ಪ್ರಕರಣಗಳು ದಾಖಲಾಗಿದ್ದು, ಸಮಾಲೋಚನೆಯಿಂದ 180 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. 14 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ. 2018-19ನೇ ಸಾಲಿನಡಿ 70 ಪ್ರಕರಣಗಳು ದಾಖಲಾಗಿದ್ದು, 61 ಪ್ರಕರಣಗಳನ್ನು ಇತ್ಯರ್ಥ, ನ್ಯಾಯಾಲಯದಲ್ಲಿ 6 ಮತ್ತು 3 ಪ್ರಕರಣಗಳು ಸಂರಕ್ಷಣಾಧಿಕಾರಿಗಳಲ್ಲಿ ಬಾಕಿ ಉಳಿದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಉಷಾ ಸಭೆಗೆ ಮಾಹಿತಿ ನೀಡಿದರು.

ತಾಲೂಕು ಮಟ್ಟದಲ್ಲಿ ಗೆಳತಿ ವಿಶೇಷ ಚಿಕಿತ್ಸಾ ಘಟಕ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ಒದಗಿಸುವ ಮಹಿಳಾ ವಿಶೇಷ ಚಿಕಿತ್ಸಾ ಘಟಕ ಗೆಳತಿ ವಿಶೇಷ ಚಿಕಿತ್ಸಾ ಘಟಕ ಈಗಾಗಲೇ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅದರಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಈ ಘಟಕ ಆರಂಭಿಸುವ
ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತಾಲೂಕು ಮಟ್ಟದಲ್ಲಿ ಗೆಳತಿ ಚಿಕಿತ್ಸಾ ವಿಶೇಷ ಘಟಕಕ್ಕೆ ಅಗತ್ಯ ಸೌಲಭ್ಯಗಳು ಕಲ್ಪಿಸುವ ನಿಟ್ಟಿನಲ್ಲಿ ಕೆಲ ಸಮಸ್ಯೆಗಳು ಇರುವುದು ನಮ್ಮ ಗಮನಕ್ಕೆ ಬಂದಿದ್ದು, ನಿವಾರಿಸಿಕೊಂಡು ಘಟಕ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದು ನ್ಯಾ| ಹಂದ್ರಾಳ್‌ ಸೂಚಿಸಿದರು. 

“ಗೆಳತಿ’ ಸಮಸ್ಯೆಗಳ ಪಟ್ಟಿ ನೀಡಿ: ಗೆಳತಿ ಚಿಕಿತ್ಸಾ ಘಟಕಕ್ಕೆ ಸಂಬಂಧಿಸಿದ ಸಮಸ್ಯೆಗಳ ಪಟ್ಟಿ ಮಾಡಿ ನಮಗೆ ನೀಡಿದರೆ ಅವುಗಳನ್ನು ಬಗೆಹರಿಸಲು ಯತ್ನಿಸಲಾಗುವುದು. ಈ ಚಿಕಿತ್ಸಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಒಂದು
ದಿನದ ಕಾರ್ಯಾಗಾರ ಏರ್ಪಡಿಸುವಂತೆ ಸೂಚಿಸಿದರು. ಸಾಮೂಹಿಕ ವಿವಾಹಗಳು ನಡೆಯುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ನಿಯಮಗಳನ್ನು ಸಮರ್ಪಕವಾಗಿ
ಪಾಲಿಸುವಂತೆ ನ್ಯಾ| ಹಂದ್ರಾಳ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. 

ಸಭೆಯಲ್ಲಿ ಮಹಿಳೆಯರು, ಮಕ್ಕಳ ಸಾಗಾಣಿಕೆ, ಗ್ರಾಪಂ ಕಾವಲು ಸಮಿತಿ ಸಭೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್‌, ಡಿವೈಎಸ್ಪಿ ಸುರೇಶ್‌ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ನೀಡುವುದು ಹಾಗೂ ಅಗತ್ಯವಿದ್ದರೆ ಪೊಲೀಸರಿಂದ ರಕ್ಷಣೆ, ವೈದ್ಯಕೀಯ ಚಿಕಿತ್ಸೆ ಸಮರ್ಪಕವಾಗಿ ಒದಗಿಸಬೇಕು. ನೊಂದ ಮಹಿಳೆಯರಿಗೆ ಉಚಿತ ಕಾನೂನು ನೆರವು ಕಾನೂನು ಸೇವಾ ಪ್ರಾಧಿಕಾರ ಒದಗಿಸಲಿದೆ.
ಎಸ್‌.ಬಿ.ಹಂದ್ರಾಳ್‌, ನ್ಯಾಯಾಧೀಶರು

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.