ಕೀಳರಿಮೆ, ಭಯ ಬಿಟ್ಟು ಮುನ್ನುಗ್ಗಿ


Team Udayavani, Sep 3, 2018, 4:44 PM IST

bell-3.jpg

ಬಳ್ಳಾರಿ: ಹಿಂದೆ ರಾಜರ ಕಾಲದಲ್ಲಿ ರಾಜನ ಮಗ ರಾಜನಾಗುವ ಪರಿಸ್ಥಿತಿ ಈಗಿಲ್ಲ. ಈಗೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆ. ಇಲ್ಲಿ ಯಾರು ಏನು ಬೇಕಾದರೂ ಆಗಬಹುದು. ಕಠಿಣ ಪರಿಶ್ರಮದೊಂದಿಗೆ ಕೀಳರಿಮೆ, ಭಯವನ್ನು ಬಿಟ್ಟು ಮುನ್ನುಗ್ಗಿದಾಗ ಯಶಸ್ಸು ಸಾಧ್ಯ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್‌ ವಿದ್ಯಾರ್ಥಿಗಳಿಗೆ
ಸೂಚಿಸಿದರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ “ಯುವಕರ ನಡೆ, ಸಾಧನೆಯ ಕಡೆ’ ಎಂಬ
ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.

ಹಿಂದೆ ಬಲಶಾಲಿಗಳು ಸಣ್ಣವರನ್ನು ಹೊಡೆದು ನಾಯಕನಾಗುತ್ತಿದ್ದ. ಆದರೆ, ಈಗ ಆ ಪರಿಸ್ಥಿತಿಯಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು. ಎಲ್ಲರಿಗೂ ಸಮಾನ ಅವಕಾಶಗಳಿವೆ. ಹಾಗೆ ಸರ್ಕಾರದ ಎಲ್ಲ ಹುದ್ದೆಗಳು ಪ್ರಜಾಪ್ರಭುತ್ವದ ಒಂದು ಭಾಗ. ಆದ್ದರಿಂದ ಯಾರೂ ತಮಗಿಂತ ಹೆಚ್ಚು ಅಂಕಗಳಿಸಿದವರನ್ನು, ಇಂಗ್ಲಿಷ್‌ ಮಾತನಾಡುವವರನ್ನು ಕಂಡು ಕೀಳರಿಮೆ ಬೆಳೆಸಿಕೊಳ್ಳುವುದು ಬೇಡ. ಪ್ರತಿಯೊಬ್ಬರಿಗೂ ತಮ್ಮದೇ ಆದ ಪ್ರತ್ಯೇಕ ಮಾರ್ಗಗಳಿರುತ್ತವೆ. ಯಾವುದೇ ವಿಷಯ, ವಿಚಾರಕ್ಕೆ ಭಯಪಡದೆ, ಧೈರ್ಯವನ್ನು ಮೈಗೂಡಿಸಿಕೊಂಡು ಕಠಿಣ ಪರಿಶ್ರಮದಿಂದ ಮುನ್ನುಗ್ಗಬೇಕು ಎಂದವರು ಸಲಹೆ ನೀಡಿದರು.

ಉನ್ನತ ಹುದ್ದೆಗಳು ಕೇವಲ ಶ್ರೀಮಂತ ಮಕ್ಕಳಿಗಷ್ಟೇ ಸೀಮಿತ ಎಂಬ ಮನೋಭಾವವನ್ನು ಈ ಕ್ಷಣದಿಂದಲೇ ತಲೆಯಿಂದ ತೆಗೆದುಹಾಕಿ ಎಂದ ಅವರು, ಬಡ, ಕೂಲಿ ಕಾರ್ಮಿಕರ ಮಕ್ಕಳು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಯಾವುದೇ ತರಬೇತಿ ಕೇಂದ್ರಗಳಿಗೆ ಹೋಗದಿದ್ದರೂ ಮನೆಗಳಲ್ಲೇ ಇದ್ದು ಸತತ ಅಭ್ಯಾಸ ಮಾಡಿ
ಯಶಸ್ಸು ಸಾಧಿಸಬಹುದು. ಸಮಸ್ಯೆಯಿದೆ ಎಂದು ಹಿಂಜರಿಯುವ ಬದಲಿಗೆ ಎಂಥಾ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸುವ ಎದೆಗಾರಿಕೆ ನಿಮ್ಮಲ್ಲಿ ಮೂಡಬೇಕು. ಆಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯ ಎಂದರು. ಯುಪಿಎಸ್‌ಸಿ ಪರೀಕ್ಷೆಗೆ ಪ್ರತಿವರ್ಷ ಸುಮಾರು 10 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಾರೆ.

ಅದರಲ್ಲಿ ಯಶಸ್ಸು ಕಾಣುವವರ ಸಂಖ್ಯೆ ಕೇವಲ 0.02. ಅನಾನುಕೂಲಗಳ ಬಗ್ಗೆ ಕಾರಣ ಹೇಳುವವರು ಯಶಸ್ಸಿನ ಪಟ್ಟಿಯಲ್ಲಿ ಇರಲು ಅರ್ಹರಲ್ಲ. ಪ್ರತಿ ಮಗುವಿಗೂ ಜಗತ್ತನ್ನಾಳುವ ಶಕ್ತಿಯಿದೆ. ವ್ಯವಸ್ಥೆಯಲ್ಲಿರುವ ಲೋಪಗಳ ಬಗ್ಗೆ ಆಕ್ರೋಶಗಳಿದ್ದರೆ ಕೇವಲ ವಿಮರ್ಶಕರಾಗಿ ಉಳಿಯದೇ, ನಿಮ್ಮಲ್ಲಿನ ಅಂಜಿಕೆ, ಭಯವನ್ನು ಬಿಟ್ಟು ಮುನ್ನುಗ್ಗುವುದನ್ನು ಕಲಿಯಬೇಕು ಎಂದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವಾಗ ವಿಶ್ವಾಸ ಮುಖ್ಯ. ಯಾವುದೇ ಕಾರಣಕ್ಕೂ ಸಾಧನೆ ಅರ್ಧದಲ್ಲಿ ಕೈಬಿಡಬಾರದು. ಕಷ್ಟಗಳನ್ನು ಮೆಟ್ಟಿನಿಂತವರು ಐಎಎಸ್‌, ಐಪಿಎಸ್‌ ಅಧಿಕಾರಿಗಳಾಗುತ್ತಾರೆ. ಜೀವನದಲ್ಲಿ ಛಲ, ಗುರಿ ಹೊಂದಿದ್ದವರು ಸಲಭವಾಗಿ ಯುಪಿಎಸ್‌ಸಿ ಪರೀಕ್ಷೆಯನ್ನು ಎದುರಿಸಿ ಗುರಿಯನ್ನು ಮುಟ್ಟಬಲ್ಲರು ಎಂದ ಅವರು, ಬಹುತೇಕರು ಕಷ್ಟದ ಜೀವನ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನನ್ನೊಂದಿಗೆ ಐಎಎಸ್‌ ಪಾಸ್‌ ಮಾಡಿದ್ದ ಶೇ.80ರಷ್ಟು ವಿದ್ಯಾರ್ಥಿಗಳು ಬಿಪಿಎಲ್‌ ಕುಟುಂಬದಿಂದ ಬಂದವರಾಗಿದ್ದರು ಎಂದರು. 

ಕೊಪ್ಪಳ ಜಿಪಂ ಸಿಇಒ ವೆಂಕಟರಾಜ, ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರಮೇಶ್‌ ಕುಮಾರ್‌ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಆಸನಗಳ ಕೊರತೆಯಾಗಿತ್ತು. ಹೊರಗಡೆ ಎಲ್‌ಇಡಿ ಪರದೆ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಉಪನಿರ್ದೇಶಕ ರಾಜಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪಿ.ಶುಭಾ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸರಳಾದೇವಿ ಕಾಲೇಜು ಪ್ರೋ| ಅಬ್ದುಲ್‌ ಮುತಾಲಿಬ್‌ ಇದ್ದರು ಐಎಎಸ್‌, ಐಪಿಎಸ್‌ ಲಾಭದಾಯಕ ಹುದ್ದೆಯಲ್ಲ. ರಾತ್ರೋರಾತ್ರಿ ಶ್ರೀಮಂತರಾಗಲ್ಲ. ಅಲ್ಲೂ ಸಾಕಷ್ಟು ಕಷ್ಟಗಳಿವೆ. ಸುತ್ತಲೂ ಇರುವವರೇ ನಮ್ಮ ಕಾಲೆಳೆಯುತ್ತಾರೆ. ಈ ಎಲ್ಲವನ್ನು ಸಮರ್ಥವಾಗಿ ಎದುರಿಸಲು ಮಾನಸಿಕವಾಗಿ ಸದೃಢರಾಗಿರಬೇಕು. ಸದೃಢ ನಿರ್ಧಾರ, ಸಕಾರಾತ್ಮಕ ಚಿಂತನೆಯಿಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಬೇರೆಯವರ ಬಗ್ಗೆ ಕೀಳರಿಮೆ ಬಿಡಬೇಕು. ಉಳ್ಳವರನ್ನು ಕಂಡು ಬಡವ ಎಂದು ನೊಂದುಕೊಳ್ಳಬಾರದು.  ರವಿ ಡಿ. ಚನ್ನಣ್ಣನವರ್‌, ಡಿಸಿಪಿ ಬೆಂಗಳೂರು ಪಶ್ಚಿಮ ವಿಭಾಗ

ಟಾಪ್ ನ್ಯೂಸ್

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.