ಕೀಳರಿಮೆ, ಭಯ ಬಿಟ್ಟು ಮುನ್ನುಗ್ಗಿ


Team Udayavani, Sep 3, 2018, 4:44 PM IST

bell-3.jpg

ಬಳ್ಳಾರಿ: ಹಿಂದೆ ರಾಜರ ಕಾಲದಲ್ಲಿ ರಾಜನ ಮಗ ರಾಜನಾಗುವ ಪರಿಸ್ಥಿತಿ ಈಗಿಲ್ಲ. ಈಗೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆ. ಇಲ್ಲಿ ಯಾರು ಏನು ಬೇಕಾದರೂ ಆಗಬಹುದು. ಕಠಿಣ ಪರಿಶ್ರಮದೊಂದಿಗೆ ಕೀಳರಿಮೆ, ಭಯವನ್ನು ಬಿಟ್ಟು ಮುನ್ನುಗ್ಗಿದಾಗ ಯಶಸ್ಸು ಸಾಧ್ಯ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್‌ ವಿದ್ಯಾರ್ಥಿಗಳಿಗೆ
ಸೂಚಿಸಿದರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ “ಯುವಕರ ನಡೆ, ಸಾಧನೆಯ ಕಡೆ’ ಎಂಬ
ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.

ಹಿಂದೆ ಬಲಶಾಲಿಗಳು ಸಣ್ಣವರನ್ನು ಹೊಡೆದು ನಾಯಕನಾಗುತ್ತಿದ್ದ. ಆದರೆ, ಈಗ ಆ ಪರಿಸ್ಥಿತಿಯಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು. ಎಲ್ಲರಿಗೂ ಸಮಾನ ಅವಕಾಶಗಳಿವೆ. ಹಾಗೆ ಸರ್ಕಾರದ ಎಲ್ಲ ಹುದ್ದೆಗಳು ಪ್ರಜಾಪ್ರಭುತ್ವದ ಒಂದು ಭಾಗ. ಆದ್ದರಿಂದ ಯಾರೂ ತಮಗಿಂತ ಹೆಚ್ಚು ಅಂಕಗಳಿಸಿದವರನ್ನು, ಇಂಗ್ಲಿಷ್‌ ಮಾತನಾಡುವವರನ್ನು ಕಂಡು ಕೀಳರಿಮೆ ಬೆಳೆಸಿಕೊಳ್ಳುವುದು ಬೇಡ. ಪ್ರತಿಯೊಬ್ಬರಿಗೂ ತಮ್ಮದೇ ಆದ ಪ್ರತ್ಯೇಕ ಮಾರ್ಗಗಳಿರುತ್ತವೆ. ಯಾವುದೇ ವಿಷಯ, ವಿಚಾರಕ್ಕೆ ಭಯಪಡದೆ, ಧೈರ್ಯವನ್ನು ಮೈಗೂಡಿಸಿಕೊಂಡು ಕಠಿಣ ಪರಿಶ್ರಮದಿಂದ ಮುನ್ನುಗ್ಗಬೇಕು ಎಂದವರು ಸಲಹೆ ನೀಡಿದರು.

ಉನ್ನತ ಹುದ್ದೆಗಳು ಕೇವಲ ಶ್ರೀಮಂತ ಮಕ್ಕಳಿಗಷ್ಟೇ ಸೀಮಿತ ಎಂಬ ಮನೋಭಾವವನ್ನು ಈ ಕ್ಷಣದಿಂದಲೇ ತಲೆಯಿಂದ ತೆಗೆದುಹಾಕಿ ಎಂದ ಅವರು, ಬಡ, ಕೂಲಿ ಕಾರ್ಮಿಕರ ಮಕ್ಕಳು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಯಾವುದೇ ತರಬೇತಿ ಕೇಂದ್ರಗಳಿಗೆ ಹೋಗದಿದ್ದರೂ ಮನೆಗಳಲ್ಲೇ ಇದ್ದು ಸತತ ಅಭ್ಯಾಸ ಮಾಡಿ
ಯಶಸ್ಸು ಸಾಧಿಸಬಹುದು. ಸಮಸ್ಯೆಯಿದೆ ಎಂದು ಹಿಂಜರಿಯುವ ಬದಲಿಗೆ ಎಂಥಾ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸುವ ಎದೆಗಾರಿಕೆ ನಿಮ್ಮಲ್ಲಿ ಮೂಡಬೇಕು. ಆಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯ ಎಂದರು. ಯುಪಿಎಸ್‌ಸಿ ಪರೀಕ್ಷೆಗೆ ಪ್ರತಿವರ್ಷ ಸುಮಾರು 10 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಾರೆ.

ಅದರಲ್ಲಿ ಯಶಸ್ಸು ಕಾಣುವವರ ಸಂಖ್ಯೆ ಕೇವಲ 0.02. ಅನಾನುಕೂಲಗಳ ಬಗ್ಗೆ ಕಾರಣ ಹೇಳುವವರು ಯಶಸ್ಸಿನ ಪಟ್ಟಿಯಲ್ಲಿ ಇರಲು ಅರ್ಹರಲ್ಲ. ಪ್ರತಿ ಮಗುವಿಗೂ ಜಗತ್ತನ್ನಾಳುವ ಶಕ್ತಿಯಿದೆ. ವ್ಯವಸ್ಥೆಯಲ್ಲಿರುವ ಲೋಪಗಳ ಬಗ್ಗೆ ಆಕ್ರೋಶಗಳಿದ್ದರೆ ಕೇವಲ ವಿಮರ್ಶಕರಾಗಿ ಉಳಿಯದೇ, ನಿಮ್ಮಲ್ಲಿನ ಅಂಜಿಕೆ, ಭಯವನ್ನು ಬಿಟ್ಟು ಮುನ್ನುಗ್ಗುವುದನ್ನು ಕಲಿಯಬೇಕು ಎಂದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವಾಗ ವಿಶ್ವಾಸ ಮುಖ್ಯ. ಯಾವುದೇ ಕಾರಣಕ್ಕೂ ಸಾಧನೆ ಅರ್ಧದಲ್ಲಿ ಕೈಬಿಡಬಾರದು. ಕಷ್ಟಗಳನ್ನು ಮೆಟ್ಟಿನಿಂತವರು ಐಎಎಸ್‌, ಐಪಿಎಸ್‌ ಅಧಿಕಾರಿಗಳಾಗುತ್ತಾರೆ. ಜೀವನದಲ್ಲಿ ಛಲ, ಗುರಿ ಹೊಂದಿದ್ದವರು ಸಲಭವಾಗಿ ಯುಪಿಎಸ್‌ಸಿ ಪರೀಕ್ಷೆಯನ್ನು ಎದುರಿಸಿ ಗುರಿಯನ್ನು ಮುಟ್ಟಬಲ್ಲರು ಎಂದ ಅವರು, ಬಹುತೇಕರು ಕಷ್ಟದ ಜೀವನ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನನ್ನೊಂದಿಗೆ ಐಎಎಸ್‌ ಪಾಸ್‌ ಮಾಡಿದ್ದ ಶೇ.80ರಷ್ಟು ವಿದ್ಯಾರ್ಥಿಗಳು ಬಿಪಿಎಲ್‌ ಕುಟುಂಬದಿಂದ ಬಂದವರಾಗಿದ್ದರು ಎಂದರು. 

ಕೊಪ್ಪಳ ಜಿಪಂ ಸಿಇಒ ವೆಂಕಟರಾಜ, ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರಮೇಶ್‌ ಕುಮಾರ್‌ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಆಸನಗಳ ಕೊರತೆಯಾಗಿತ್ತು. ಹೊರಗಡೆ ಎಲ್‌ಇಡಿ ಪರದೆ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಉಪನಿರ್ದೇಶಕ ರಾಜಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪಿ.ಶುಭಾ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸರಳಾದೇವಿ ಕಾಲೇಜು ಪ್ರೋ| ಅಬ್ದುಲ್‌ ಮುತಾಲಿಬ್‌ ಇದ್ದರು ಐಎಎಸ್‌, ಐಪಿಎಸ್‌ ಲಾಭದಾಯಕ ಹುದ್ದೆಯಲ್ಲ. ರಾತ್ರೋರಾತ್ರಿ ಶ್ರೀಮಂತರಾಗಲ್ಲ. ಅಲ್ಲೂ ಸಾಕಷ್ಟು ಕಷ್ಟಗಳಿವೆ. ಸುತ್ತಲೂ ಇರುವವರೇ ನಮ್ಮ ಕಾಲೆಳೆಯುತ್ತಾರೆ. ಈ ಎಲ್ಲವನ್ನು ಸಮರ್ಥವಾಗಿ ಎದುರಿಸಲು ಮಾನಸಿಕವಾಗಿ ಸದೃಢರಾಗಿರಬೇಕು. ಸದೃಢ ನಿರ್ಧಾರ, ಸಕಾರಾತ್ಮಕ ಚಿಂತನೆಯಿಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಬೇರೆಯವರ ಬಗ್ಗೆ ಕೀಳರಿಮೆ ಬಿಡಬೇಕು. ಉಳ್ಳವರನ್ನು ಕಂಡು ಬಡವ ಎಂದು ನೊಂದುಕೊಳ್ಳಬಾರದು.  ರವಿ ಡಿ. ಚನ್ನಣ್ಣನವರ್‌, ಡಿಸಿಪಿ ಬೆಂಗಳೂರು ಪಶ್ಚಿಮ ವಿಭಾಗ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.