ಯುವಕರಲ್ಲಿ ಸಾಧನೆಯ ಛಲ ಹೆಚ್ಚಲಿ: ಚನ್ನಣ್ಣನವರ್‌


Team Udayavani, Sep 4, 2018, 4:01 PM IST

bell.jpg

ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರಳಿ ಬರಬೇಕು. ಇಲ್ಲಿ ಸೇರಿದ ಯುವಕರಲ್ಲಿ ನನ್ನಂತೆ ಸಾಧನೆ ಮಾಡಬೇಕೆನ್ನುವ ಛಲವಿರುವ, ಆಶಯವಿರುವ ನೂರಾರು ಜನರು ದೊರೆಯುತ್ತಾರೆ. ಪ್ರತಿ ಗ್ರಾಮ, ಮನೆಗಳಲ್ಲಿಯೂ ರವಿ ಚನ್ನಣ್ಣನವರ್‌ ನನ್ನಂತಹವರು ಜನಿಸಬೇಕು. ಎಲ್ಲರೂ ಸಾಧಕರಾಗಬೇಕು ಎಂದು ಬೆಂಗಳೂರಿನ ಪಶ್ಚಿಮ ವಲಯದ ಉಪಪೊಲೀಸ್‌ ಆಯುಕ್ತ ರವಿ ಡಿ. ಚನ್ನಣ್ಣನವರ್‌ ಅಭಿಪ್ರಾಯಪಟ್ಟರು.

ನಗರದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವ ಬಳಗ ಟ್ರಸ್ಟ್‌ ವತಿಯಿಂದ ನೀಡಲಾದ 2018-19ನೇ ಸಾಲಿನ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಮೇಲೆ ರಾಮಕೃಷ್ಣ ಮಠದ ನಿರ್ಭಯಾನಂದ ಸರಸ್ವತಿ ಗುರುಗಳ ಪ್ರಭಾವವಿದ್ದಂತೆ ನೀವು ಕೂಡ ಗುರುವಿನ ಗುಲಾಮನಾಗಿ ಜೀವನದಲ್ಲಿ ಉತ್ತಮ ಸಾಧನೆ ತೋರಿ. ಭಗತ್‌ಸಿಂಗ್‌, ಚಂದ್ರಶೇಖರ್‌ ಆಜಾದ್‌ನವರ ಆಶಯಗಳಂತೆ ಯುವಕರು ದೇಶವನ್ನು ಕಟ್ಟೋಣ ಎನ್ನುವ ಆಶಯ ಬೆಳೆಸಿಕೊಳ್ಳಬೇಕು. ಯಾರಿಗೆ ಧೈರ್ಯವಿದೆ, ಓದಬೇಕೆನ್ನುವ ಛಲವಿದೆ, ಎಷ್ಟೇ ಸಂಖ್ಯೆಯಲ್ಲಿ ಇದ್ದರೂ ಬಂದು ಬಿಡಿ, ನಮ್ಮ ಸಮಾನ ಮನಸ್ಕರಿಂದ ಶಿಕ್ಷಣಕ್ಕೆ ನೆರವು ನೀಡಲಾಗುವುದು. ಮನುಷ್ಯನನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿಯೇ ಹುಟ್ಟಿಲ್ಲ. ಭಗವಂತನ ಅದ್ಭುತ ಸೃಷ್ಟಿಯೇ ಮನುಷ್ಯನಾಗಿದ್ದು, ಉಪನಿಷತ್ತುಗಳಲ್ಲಿ ತಿಳಿಸಿದಂತೆ ಭೂಮಿಯನ್ನು ಆಳುವ ಸಾಮರ್ಥ್ಯವನ್ನು ಪ್ರತಿಯೊಂದು ಮಗುವಿಗೂ ಭಗವಂತ ನೀಡಿರುತ್ತಾನೆ. ಆದರೆ ಆ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ ಎಂದರು.

ಪ್ರಶಸ್ತಿ ಎನ್ನುವುದು ಲಕ್ಷ್ಮಣರೇಖೆ ಇದ್ದಂತೆ. ಬಸವಣ್ಣನವರ ಹೆಸರಿನಲ್ಲಿರುವ ಪ್ರಶಸ್ತಿಯನ್ನು ಪಡೆದ ನಂತರ ನನ್ನ ನಿರೀಕ್ಷೆಗಳು, ಜವಾಬ್ದಾರಿಗಳು ಹೆಚ್ಚಾಗಿದ್ದು, ಬಸವಾದಿ ಶರಣರ ಆಶಯದಂತೆ ವಿದ್ಯಾರ್ಥಿಗಳಿಗೆ, ದೀನ ದಲಿತರಿಗೆ ನೆರವಾಗುತ್ತೇನೆ. ವಿದ್ಯಾರ್ಥಿಗಳು ಐಎಎಸ್‌, ಐಪಿಎಸ್‌ ಅಧಿಕಾರಿಗಳಾಗಬೇಕೆನ್ನುವ ಚಿಂತನೆ ಹೊಂದಿ, ಇಲ್ಲವೆ ಲಾಭದಾಯಕ ಕೃಷಿ ಬದುಕನ್ನು ಕಟ್ಟಿಕೊಳ್ಳಿ ಎಂದರು.

ತಾಲೂಕಿನ ನಂಟನ್ನು ಭಾಷಣದಲ್ಲಿ ನೆನಪಿಸಿಕೊಂಡ ಅವರು, ನನ್ನ ವಿದ್ಯಾರ್ಥಿ ಜೀವನದ ಕಷ್ಟಕಾಲದಲ್ಲಿ ಕರ್ಚಿಗನೂರಿನ ಗೆಳೆಯ ಎರ್ರೆಪ್ಪಚಾನಾಳ್‌ ಕಳುಹಿಸುತ್ತಿದ್ದ ಇಲ್ಲಿಯ ಅಕ್ಕಿಯನ್ನು ವರ್ಷವಿಡೀ ಊಟ ಮಾಡಿದ್ದೇನೆ. ಇಲ್ಲಿ ಹರಿಯುವ ಹಗರಿಯಲ್ಲಿ ಈಜಾಡಿದ್ದೇನೆ. ಕರ್ಚಿಗನೂರು ಹಾಲ್ವಿ ಮಠದಲ್ಲಿ ಪುರಾಣ ಕೇಳಿದ್ದೇನೆ. ದಾಸೋಹದಲ್ಲಿ ಪ್ರಸಾದ ಸ್ವೀಕರಿಸಿದ್ದೇನೆ. ಇಲ್ಲಿನ ಅನ್ನದ ಋಣ ನನ್ನ ಮೇಲಿದೆ ಎಂದು ತಮ್ಮ ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಾಂತಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಪ್ರತಿಯೊಂದು ವಿಷಯವನ್ನು ತಿಳಿದುಕೊಳ್ಳಬೇಕು, ಯಾರು ಹೆಚ್ಚು ಪುಸ್ತಕವನ್ನು ಅಧ್ಯಯನ ನಡೆಸುತ್ತಾರೋ ಅವರು
ಪ್ರತಿಭಾವಂತರಾಗುತ್ತಾರೆ ಎಂದು ತಿಳಿಸಿದರು. 

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಹಾಗೂ ಬಸವ ಬಳಗ ಟ್ರಸ್ಟ್‌ನ ಗೌರವಾಧ್ಯಕ್ಷ ಎನ್‌.ಜಿ. ಲಿಂಗಣ್ಣ, ತಾಲೂಕು ಅಧ್ಯಕ್ಷ ಡಾ| ಎನ್‌.ಎಂ. ಶಿವಪ್ರಕಾಶ್‌, ಟ್ರಸ್ಟಿನ ನಾಗನಗೌಡ, ವಿರುಪಾಕ್ಷಿಗೌಡ ಸೇರಿದಂತೆ ಅಕ್ಕನ ಬಳಗದ ಸದಸ್ಯರು ಇದ್ದರು. 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.