ಯುವಕರಲ್ಲಿ ಸಾಧನೆಯ ಛಲ ಹೆಚ್ಚಲಿ: ಚನ್ನಣ್ಣನವರ್‌


Team Udayavani, Sep 4, 2018, 4:01 PM IST

bell.jpg

ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರಳಿ ಬರಬೇಕು. ಇಲ್ಲಿ ಸೇರಿದ ಯುವಕರಲ್ಲಿ ನನ್ನಂತೆ ಸಾಧನೆ ಮಾಡಬೇಕೆನ್ನುವ ಛಲವಿರುವ, ಆಶಯವಿರುವ ನೂರಾರು ಜನರು ದೊರೆಯುತ್ತಾರೆ. ಪ್ರತಿ ಗ್ರಾಮ, ಮನೆಗಳಲ್ಲಿಯೂ ರವಿ ಚನ್ನಣ್ಣನವರ್‌ ನನ್ನಂತಹವರು ಜನಿಸಬೇಕು. ಎಲ್ಲರೂ ಸಾಧಕರಾಗಬೇಕು ಎಂದು ಬೆಂಗಳೂರಿನ ಪಶ್ಚಿಮ ವಲಯದ ಉಪಪೊಲೀಸ್‌ ಆಯುಕ್ತ ರವಿ ಡಿ. ಚನ್ನಣ್ಣನವರ್‌ ಅಭಿಪ್ರಾಯಪಟ್ಟರು.

ನಗರದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವ ಬಳಗ ಟ್ರಸ್ಟ್‌ ವತಿಯಿಂದ ನೀಡಲಾದ 2018-19ನೇ ಸಾಲಿನ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಮೇಲೆ ರಾಮಕೃಷ್ಣ ಮಠದ ನಿರ್ಭಯಾನಂದ ಸರಸ್ವತಿ ಗುರುಗಳ ಪ್ರಭಾವವಿದ್ದಂತೆ ನೀವು ಕೂಡ ಗುರುವಿನ ಗುಲಾಮನಾಗಿ ಜೀವನದಲ್ಲಿ ಉತ್ತಮ ಸಾಧನೆ ತೋರಿ. ಭಗತ್‌ಸಿಂಗ್‌, ಚಂದ್ರಶೇಖರ್‌ ಆಜಾದ್‌ನವರ ಆಶಯಗಳಂತೆ ಯುವಕರು ದೇಶವನ್ನು ಕಟ್ಟೋಣ ಎನ್ನುವ ಆಶಯ ಬೆಳೆಸಿಕೊಳ್ಳಬೇಕು. ಯಾರಿಗೆ ಧೈರ್ಯವಿದೆ, ಓದಬೇಕೆನ್ನುವ ಛಲವಿದೆ, ಎಷ್ಟೇ ಸಂಖ್ಯೆಯಲ್ಲಿ ಇದ್ದರೂ ಬಂದು ಬಿಡಿ, ನಮ್ಮ ಸಮಾನ ಮನಸ್ಕರಿಂದ ಶಿಕ್ಷಣಕ್ಕೆ ನೆರವು ನೀಡಲಾಗುವುದು. ಮನುಷ್ಯನನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿಯೇ ಹುಟ್ಟಿಲ್ಲ. ಭಗವಂತನ ಅದ್ಭುತ ಸೃಷ್ಟಿಯೇ ಮನುಷ್ಯನಾಗಿದ್ದು, ಉಪನಿಷತ್ತುಗಳಲ್ಲಿ ತಿಳಿಸಿದಂತೆ ಭೂಮಿಯನ್ನು ಆಳುವ ಸಾಮರ್ಥ್ಯವನ್ನು ಪ್ರತಿಯೊಂದು ಮಗುವಿಗೂ ಭಗವಂತ ನೀಡಿರುತ್ತಾನೆ. ಆದರೆ ಆ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ ಎಂದರು.

ಪ್ರಶಸ್ತಿ ಎನ್ನುವುದು ಲಕ್ಷ್ಮಣರೇಖೆ ಇದ್ದಂತೆ. ಬಸವಣ್ಣನವರ ಹೆಸರಿನಲ್ಲಿರುವ ಪ್ರಶಸ್ತಿಯನ್ನು ಪಡೆದ ನಂತರ ನನ್ನ ನಿರೀಕ್ಷೆಗಳು, ಜವಾಬ್ದಾರಿಗಳು ಹೆಚ್ಚಾಗಿದ್ದು, ಬಸವಾದಿ ಶರಣರ ಆಶಯದಂತೆ ವಿದ್ಯಾರ್ಥಿಗಳಿಗೆ, ದೀನ ದಲಿತರಿಗೆ ನೆರವಾಗುತ್ತೇನೆ. ವಿದ್ಯಾರ್ಥಿಗಳು ಐಎಎಸ್‌, ಐಪಿಎಸ್‌ ಅಧಿಕಾರಿಗಳಾಗಬೇಕೆನ್ನುವ ಚಿಂತನೆ ಹೊಂದಿ, ಇಲ್ಲವೆ ಲಾಭದಾಯಕ ಕೃಷಿ ಬದುಕನ್ನು ಕಟ್ಟಿಕೊಳ್ಳಿ ಎಂದರು.

ತಾಲೂಕಿನ ನಂಟನ್ನು ಭಾಷಣದಲ್ಲಿ ನೆನಪಿಸಿಕೊಂಡ ಅವರು, ನನ್ನ ವಿದ್ಯಾರ್ಥಿ ಜೀವನದ ಕಷ್ಟಕಾಲದಲ್ಲಿ ಕರ್ಚಿಗನೂರಿನ ಗೆಳೆಯ ಎರ್ರೆಪ್ಪಚಾನಾಳ್‌ ಕಳುಹಿಸುತ್ತಿದ್ದ ಇಲ್ಲಿಯ ಅಕ್ಕಿಯನ್ನು ವರ್ಷವಿಡೀ ಊಟ ಮಾಡಿದ್ದೇನೆ. ಇಲ್ಲಿ ಹರಿಯುವ ಹಗರಿಯಲ್ಲಿ ಈಜಾಡಿದ್ದೇನೆ. ಕರ್ಚಿಗನೂರು ಹಾಲ್ವಿ ಮಠದಲ್ಲಿ ಪುರಾಣ ಕೇಳಿದ್ದೇನೆ. ದಾಸೋಹದಲ್ಲಿ ಪ್ರಸಾದ ಸ್ವೀಕರಿಸಿದ್ದೇನೆ. ಇಲ್ಲಿನ ಅನ್ನದ ಋಣ ನನ್ನ ಮೇಲಿದೆ ಎಂದು ತಮ್ಮ ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಾಂತಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಪ್ರತಿಯೊಂದು ವಿಷಯವನ್ನು ತಿಳಿದುಕೊಳ್ಳಬೇಕು, ಯಾರು ಹೆಚ್ಚು ಪುಸ್ತಕವನ್ನು ಅಧ್ಯಯನ ನಡೆಸುತ್ತಾರೋ ಅವರು
ಪ್ರತಿಭಾವಂತರಾಗುತ್ತಾರೆ ಎಂದು ತಿಳಿಸಿದರು. 

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಹಾಗೂ ಬಸವ ಬಳಗ ಟ್ರಸ್ಟ್‌ನ ಗೌರವಾಧ್ಯಕ್ಷ ಎನ್‌.ಜಿ. ಲಿಂಗಣ್ಣ, ತಾಲೂಕು ಅಧ್ಯಕ್ಷ ಡಾ| ಎನ್‌.ಎಂ. ಶಿವಪ್ರಕಾಶ್‌, ಟ್ರಸ್ಟಿನ ನಾಗನಗೌಡ, ವಿರುಪಾಕ್ಷಿಗೌಡ ಸೇರಿದಂತೆ ಅಕ್ಕನ ಬಳಗದ ಸದಸ್ಯರು ಇದ್ದರು. 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.