ಜನಸಾಮಾನ್ಯರಿಗೆ ಕಾನೂನು ಅರಿವು ಅಗತ್ಯ
Team Udayavani, Sep 16, 2018, 5:01 PM IST
ಬಳ್ಳಾರಿ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕಾನೂನು ಸಾಕ್ಷರತಾ ರಥಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಿರುವ ಈ ಕಾನೂನು ಸಾಕ್ಷರತಾ ರಥಯಾತ್ರೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ಬಿರಾದಾರ್ ಹಸಿರು ನಿಶಾನೆ ತೋರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾನೂನು ಸಾಕ್ಷರತಾ ರಥಯಾತ್ರೆಯು ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಜನಸಾಮಾನ್ಯರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಲಿದೆ ಎಂದು ತಿಳಿಸಿದರು.
ನ್ಯಾಯಾಧೀಶರು, ವಕೀಲರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಈ ಸಾಕ್ಷರತಾ ರಥಯಾತ್ರೆಯೊಂದಿಗೆ ಪಾಲ್ಗೊಂಡು ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡಲಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳು ಸೇರಿದಂತೆ ವಿವಿಧ ಸಮುದಾಯಗಳ ಜನರಿಗೆ ತಮಗೆ ಲಭ್ಯವಿರುವ ಹಕ್ಕುಗಳು ಮತ್ತು ಸೌಲಭ್ಯಗಳ ಕುರಿತು ತಿಳಿಹೇಳುವ ಕೆಲಸವನ್ನು ಈ ಸಂದರ್ಭದಲ್ಲಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಕಾನೂನು ಸಾಕ್ಷರತಾ ರಥಯಾತ್ರೆ ಸೆ.15 ರಂದು ಜಿಲ್ಲೆಯ ಹೊಸಮೋಕಾದ ಕಾಲೇಜು ಮೈದಾನ, ಚೆಳ್ಳಗುರ್ಕಿಯ ಎರ್ರಿತಾತಾ ದೇವಸ್ಥಾನ ಆವರಣ, ರೂಪನಗುಡಿಯ ಗ್ರಾಪಂ ಆವರಣ, ಸೆ.16ರಂದು ಸೋಮಸಮುದ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನ, ಕೋಳೂರದ ರಾಮಲಿಂಗೇಶ್ವರ ದೇವಸ್ಥಾನ ಆವರಣ, ಬೈಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನ, ಸೆ.17ರಂದು ಹಂದಿಹಾಳ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ, ಕೊರ್ಲಗುಂದಿಯ ಗ್ರಾಪಂ ಆವರಣ, ಶ್ರೀಧರಗಡ್ಡೆಯ ಸರಕಾರಿ ಪ್ರೌಢಶಾಲೆ ಆವರಣ, ಸೆ.18ರಂದು ಕೊಳಗಲ್ಲುವಿನ ಎರ್ರಿತಾತ ದೇವಸ್ಥಾನ ಆವರಣ, ಸಂಗನಕಲ್ಲು ಗ್ರಾಪಂ ಆವರಣ, ಸಿಂದಿಗೇರಿಯ ಸರಕಾರಿ ಪ್ರೌಢಶಾಲೆಯ
ಆವರಣದಲ್ಲಿ ವಿವಿಧ ರೀತಿಯ ಕಾನೂನು ಸಾಕ್ಷರತಾ ಕಾರ್ಯಕ್ರಮ ಏರ್ಪಡಿಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಖಾಸಿಂ ಚೂರಿಖಾನ್, ಕಾತ್ಯಾಯಿನಿ, ಸಿ.ಆರ್. ಸೋಮಶೇಖರ್, ವಿಪುಲ ಪೂಜಾರ, ಎಸ್ .ಬಿ.ಹಂದ್ರಾಳ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಎಸ್.ಬದರಿನಾಥ್, ತಾಪಂ ಅಧ್ಯಕ್ಷೆ ರಮೀಜಾ ಬಿ, ತಹಶೀಲ್ದಾರ್ ನಾಗರಾಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಡಿಪಿಒ ಉಷಾ, ತಾಪಂ ಇಒ ಜಾನಕಿರಾಮ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಜಿ.ಎಂ.ರವಿರಾಜಶೇಖರರೆಡ್ಡಿ, ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮೌನೇಶ ಸೇರಿದಂತೆ ವಕೀಲರು,ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸೆ.16ರಂದು ಸೋಮಸಮುದ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನ, ಕೋಳೂರದ ರಾಮಲಿಂಗೇಶ್ವರ ದೇವಸ್ಥಾನ ಆವರಣ, ಬೈಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನ, ಸೆ.17ರಂದು ಹಂದಿಹಾಳ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ, ಕೊರ್ಲಗುಂದಿಯ ಗ್ರಾಪಂ ಆವರಣ, ಶ್ರೀಧರಗಡ್ಡೆಯ ಸರಕಾರಿ ಪ್ರೌಢಶಾಲೆ ಆವರಣ, ಸೆ.18ರಂದು ಕೊಳಗಲ್ಲುವಿನ ಎರ್ರಿತಾತ ದೇವಸ್ಥಾನ ಆವರಣ, ಸಂಗನಕಲ್ಲು ಗ್ರಾಪಂ ಆವರಣ, ಸಿಂದಿಗೇರಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!