ಮದಗಜಗಳಂತೆ ಕಾದಾಡಿದ ಕುಸ್ತಿ ಪಟುಗಳು


Team Udayavani, Sep 23, 2018, 5:19 PM IST

bell.jpg

ಹಗರಿಬೊಮ್ಮನಹಳ್ಳಿ: ತಾಲೂಕಿನ ಬಲ್ಲಾಹುಣ್ಸಿ ಗ್ರಾಮದಲ್ಲಿ ಮೊಹರಂ ಹಬ್ದದ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಕುಸ್ತಿ ಪಂದ್ಯಾವಳಿಯಲ್ಲಿ ಹರಪನಹಳ್ಳಿ ಸುರೇಶ್‌ ಮತ್ತು ಮರಿಯಮ್ಮನಹಳ್ಳಿ ಸೈಫುಲ್ಲಾ ಪರಸ್ಪರ ಮದಗಜಗಳಂತೆ ಸೆಣೆಸಾಡಿದ ದೃಶ್ಯ ನೋಡುಗರನ್ನು ರೋಮಾಂಚನಗೊಳಿಸಿದವು.

15 ನಿಮಿಷಗಳ ಕಾಲ ಜಗಜಟ್ಟಿಗಳಂತೆ ಪಟ್ಟುಗಳನ್ನು ಪ್ರದರ್ಶಿಸುತ್ತಾ ನೆರೆದವರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಕೊನೆಗೂ ಇಬ್ಬರೂ ಸಮಬಲದ ಪೈಪೋಟಿ ನಡೆಸಿ ಕಲ್ಲರ್‌ಜಿಂಗ್‌, ಏಕಲಾಂಗ್‌, ಸವಾರಿ, ಹೊರಕಾಲು ಸೇರಿದಂತೆ
ಅನೇಕ ಕುಸ್ತಿ ಪಟ್ಟುಗಳನು ಪ್ರದರ್ಶಿಸಿದರು. 

ವಿವಿಧ ಭಾಗಗಳಿಂದ ಆಗಮಿಸಿದ್ದ 30ಕ್ಕೂ ಹೆಚ್ಚು ಕುಸ್ತಿ ಪೈಲ್ವಾನ್‌ಗಳ ಕಾದಾಟ ನೋಡುಗರನ್ನು ರೋಮಾಂಚನಗೊಳಿಸಿತ್ತು. ಹೊಸಪೇಟೆ, ದಾವಣಗೆರೆ, ಹರಪನಹಳ್ಳಿ, ಮರಿಯಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ
ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಕುಸ್ತಿ ಪಟುಗಳು ತಮ್ಮ ಚಾಕಚಕ್ಯತೆ ಪ್ರದರ್ಶಿಸಿ ನೆರೆದಿದ್ದ ನೂರಾರು ಪ್ರೇಕ್ಷಕರಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡರು.

ದಾವಣಗೆರೆಯ ಹನುಮಂತ, ಅಣ್ಣಪ್ಪ, ಹಾಲೇಶ್‌, ನಾಗರಾಜ್‌ ಅಡಿವಿಹಳ್ಳಿಯ ಪ್ರತಾಪ್‌, ಕೂಡ್ಲಿಗಿಯ ಆದಿಲ್‌, ಉಂಬಳಗಟ್ಟಿಯ ಯಾಸೀನ್‌ ಪ್ರದರ್ಶಿಸಿದ ಕುಸ್ತಿ ಪಂದ್ಯಾಟಗಳು ಪ್ರೇಕ್ಷಕರನ್ನು ತುದಿಗಾಲಲ್ಲೇ ನಿಲ್ಲಿಸಿದ್ದವು.
 ದಾವಣಗೆರೆಯ ಕ್ರೀಡಾ ಹಾಸ್ಟೆಲ್‌ನ ಪೈಲ್ವಾನ್‌ ಕೆಂಚಪ್ಪ ಅವರೊಂದಿಗೆ ಸೆಣೆಸಾಡಲು ಯಾರೂ ಮುಂದೆ ಬರಲಿಲ್ಲ. ಗ್ರಾಮದ ಮೈಲಾರಿ ಮತ್ತು ಅರ್ಜುನ್‌ ಹಲಗೆ ವಾದನದ ಮೂಲಕ ಪಟುಗಳನ್ನು ಹುರಿದುಂಬಿಸುತ್ತಿದ್ದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಕುಸ್ತಿ ಪ್ರೇಮಿಗಳು ಶಾಲೆ ಕಟ್ಟಡದ ಮೇಲೆ ಕುಳಿತು ಪಂದ್ಯ ವೀಕ್ಷಿಸಿದರು. ಪಂದ್ಯಾವಳಿಯಲ್ಲಿ ವಿಜೇತರು ನಗದು ಬಹುಮಾನ ಸ್ವೀಕರಿಸಿದರು. ಯುವ ಮುಖಂಡ ಅಶೋಕ್‌ ಭೀಮಾನಾಯ್ಕ ಅಂತಿಮ ಪರ್ಸಿ ಪೈಕಿ ಕುಸ್ತಿ ಪಂದ್ಯವಾಳಿಗೆ ಚಾಲನೆ ನೀಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯು.ಬಾಬುವಲಿ, ಪಿಕಾರ್ಡ್‌ ಬ್ಯಾಂಕ್‌ ಉಪಾಧ್ಯಕ್ಷ ಪವಾಡಿ ಪೃಥ್ವಿರಾಜ್‌, ಮುಖಂಡರಾದ ಬಲ್ಲಾಹುಣ್ಸಿ ರಾಮಣ್ಣ, ಕೆ.ಜಹಾಂಗೀರ್‌ ಸಾಹೇಬ್‌, ಎಚ್‌.ಎ.ಕೊಟ್ರೇಶ್‌, ಬಾಲಕೃಷ್ಣಬಾಬು, ಎಸ್‌.ಚಂದ್ರಪ್ಪ, ಮೈಲಾರಪ್ಪ, ಗ್ರಾಮದ ಕುಸ್ತಿ ಆಯೋಜನೆ ಸಮಿತಿಯ ಡಾ| ಕಾಸೀಂ ಸಾಹೇಬ್‌, ಎನ್‌.ಕೆ.ಬಾಬಣ್ಣ, ಪ್ರಶಾಂತ್‌, ಶ್ಯಾನುಭೋಗರ ನಾಗರಾಜ, ಕೆ.ನಾಗರಾಜ ಇದ್ದರು. ಹುಳ್ಳಿ ಪ್ರಕಾಶ್‌, ನಾರಾಯಣದೇವರಕೆರೆಯ ಫಾಜಿಲ್‌ ಸಾಹೇಬ್‌, ಕರೀಂ ಸಾಹೇಬ್‌ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.