1200ಕ್ಕೂ ಹೆಚ್ಚು ನೌಕರರಿಂದ ರಕ್ತದಾನ


Team Udayavani, Oct 4, 2018, 5:16 PM IST

yad-2.jpg

ಬಳ್ಳಾರಿ: ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಹಿಂದಿನ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ಸದಸ್ಯರು ನಗರದ
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ “ರಕ್ತಕೊಟ್ಟೇವು ಪಿಂಚಣಿ- ಬಿಡೆವು, ನಿಶ್ಚಿತ ಪಿಂಚಣಿ ನಮ್ಮ ಹಕ್ಕು ಎಂದು’ ಬುಧವಾರ ರಕ್ತದಾನ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘವು ಕಳೆದ ನಾಲ್ಕು ವರ್ಷಗಳಿಂದ ಯೋಜನೆಯ ಕರಾಳತೆಯ ಬಗ್ಗೆ
ನೌಕರರಲ್ಲಿ ಜಾಗೃತಿ ಮೂಡಿಸುತ್ತಿವೆ. ಜತೆಗೆ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ನಡೆಸಲಾಗಿದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ, ಶಾಸಕರು, ಸಂಸದರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ಅಲ್ಲದೇ, ನಿಶ್ಚಿತ ಪಿಂಚಣಿ ನಮ್ಮ ಹಕ್ಕು ದಿನ, ಕರಾಳ ದಿನಾಚರಣೆ, ಪ್ರತಿಭಟನೆ, ಸಭೆ ಮತ್ತು ರ್ಯಾಲಿಗಳನ್ನು ಹಮ್ಮಿಕೊಳ್ಳುವ ಮೂಲಕ ಎನ್‌ಪಿಎಸ್‌ ಪದ್ಧತಿ ರದ್ದುಪಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಆದರೂ, ರಾಜ್ಯ ಸರ್ಕಾರ ಎನ್‌ಪಿಎಸ್‌ ನೌಕರರನ್ನು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರತಿಭಟನಾರರು ಆರೋಪಿಸಿದರು.

ಶಾಸಕ ಜಿ.ಸೋಮಶೇಖರರೆಡ್ಡಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ
ಮಾತನಾಡಿದ ಅವರು, ನೌಕರರ ವೇತನದ ಹಣವನ್ನು ಷೇರು ಮಾರುಕಟ್ಟೆಗೆ ಹಾಕುವ ಮೂಲಕ ರಾಜ್ಯ ಸರ್ಕಾರ ನಾಮ ಹಚ್ಚುವ ಹುನ್ನಾರ ನಡೆಸಿದೆ. ನೌಕರರಿಗೆ ಮುಪ್ಪಿನಲ್ಲಿ ಅನುಕೂಲವಾಗಲೆಂದೇ ಪಿಂಚಣಿ ಸೌಲಭ್ಯ ಜಾರಿಗೆ ತರಲಾಗಿತ್ತು. ಆದರೆ, ಹಿಂದಿನ ನಿಶ್ಚಿತ ಪಿಂಚಣಿ ಸೌಲಭ್ಯ ರದ್ದುಗೊಳಿಸಿದ ರಾಜ್ಯ ಸರ್ಕಾರ, ನೌಕರರ ವೇತನದಲ್ಲೇ
ಕಡಿತಗೊಳಿಸಿದ ಹಣವನ್ನು ಷೇರು ಮಾರುಕಟ್ಟೆಗೆ ಹಾಕಲು ಹೊರಟಿದ್ದು, ನೌಕರರ ಹೊಟ್ಟೆ ಮೇಲೆ ಒಡೆಯುತ್ತಿದೆ. ಸರಕಾರಕ್ಕೆ ಏನು ಕಡಿಮೆಯಾಗಿದೆ? ಎಂದು ಪ್ರಶ್ನಿಸಿದ ಸೋಮಶೇಖರರೆಡ್ಡಿ, ಇಂತಹ ದುಃಸಾಹಸಕ್ಕೆ ಕೈ ಹಾಕಬಾರದು. ಸರ್ಕಾರ ಯಾವುದಾದರೂ ಸರಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಿಜೆಪಿ ಸರ್ಕಾರ ಇದ್ದಿದ್ದರೆ 15 ದಿನಗಳಲ್ಲಿ ಯೋಜನೆ ಜಾರಿಯಾಗುತ್ತಿತ್ತು ಎಂದು ತಿಳಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎನ್‌ಜಿಒ ಕಚೇರಿ ಬಳಿ ಡ್ಯಾಪ್ಕೊ ಸಹಯೋಗದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಕಮ್ಮರಚೇಡು ಮಠದ  ಲ್ಯಾಣಸ್ವಾಮಿಗಳು ಚಾಲನೆ ನೀಡಿ ಮಾತನಾಡಿದರು.

ಎನ್‌ಪಿಎಸ್‌ ಸಂಘದ ಜಿಲ್ಲಾಧ್ಯಕ್ಷ ಜಿ.ವೈ.ತಿಪ್ಪಾರೆಡ್ಡಿ ಮಾತನಾಡಿ, ನೂತನ ಪಿಂಚಣಿ ಯೋಜನೆ ವಿರೋಧಿಸಿ ಹಳೆಯ ಪಿಂಚಣಿ ಪದ್ಧತಿಯನ್ನೇ ಜಾರಿಗೊಳಿಸುವಂತೆ ಆಗ್ರಹಿಸಿ ರಕ್ತ ಕೊಟ್ಟೇವು ಪಿಂಚಣಿ ಬಿಡೇವು ಹೋರಾಟ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಯೊಂದಿಗೆ ರಕ್ತದಾನವೂ ನಡೆಯುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಹೋರಾಟಕ್ಕೆ ಮಣಿಯದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ರೂಪುರೇಷೆಗಳನ್ನು ಬದಲಾಯಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಘದ ಗೌರವ ಸಲಹೆಗಾರ ರಾಜಶೇಖರ್‌ ಗಾಣಿಗೇರ್‌, ಪಾಲಿಕೆ ಸದಸ್ಯರಾದ ಮಲ್ಲನಗೌಡ, ಶ್ರೀನಿವಾಸ್‌
ಮೋತ್ಕರ್‌, ಸಂಘದ ತಾಲೂಕು ಅಧ್ಯಕ್ಷ ಎನ್‌.ರಮೇಶ್‌, ಪ್ರಧಾನ ಕಾರ್ಯದರ್ಶಿ ಕೆ.ಹೊನ್ನೂರಸ್ವಾಮಿ, ಉಪಾಧ್ಯಕ್ಷ ಗಿರೀಶ್‌, ಹನುಮಂತಪ್ಪ, ಮುಖಂಡರಾದ ನಂದೀಶ್‌ಪುಂಡಿ, ಶಾಂತಮ್ಮ, ಬಸವರಾಜ್‌ ಸೇರಿದಂತೆ ನೂರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.