ತುಂಗಭದ್ರಾ ಡ್ಯಾಮ್‌ ಭರ್ತಿಯಾದರೂ ತಪ್ಪದ ಆತಂಕ


Team Udayavani, Oct 22, 2018, 4:28 PM IST

bell-2.jpg

ಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಕಳೆದ ಆಗಸ್ಟ್‌ನೊಳಗೆ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಯ ಮೂಲಕ ಬಿಡಲಾಯಿತು. ನಾಲ್ಕೈದು ವರ್ಷಗಳಿಂದ ಒಂದೇ ಬೆಳೆ ಬೆಳೆದ ರೈತರು ಈ ಭಾರಿ ಎರಡು ಬೆಳೆ ಬೆಳೆಯಬಹುದೆಂದು ಖುಷಿಯಾಗಿದ್ದರು. ಆದರೆ ಈ ಖುಷಿ ಬಹಳ ದಿನ ಉಳಿಯಲಿಲ್ಲ.

 ಇದೀಗ ಜಲಾಶಯದಲ್ಲಿ ಕೇವಲ 75 ಟಿಎಂಸಿ ಅಡಿ ನೀರಿದ್ದು ಬೇಸಿಗೆ ಬೆಳೆಗೆ ಕಾಲುವೆಗೆ ಹರಿಸುವುದು ಕಷ್ಟ ಎನ್ನುವ ಮಾತು ಅಚ್ಚುಕಟ್ಟು ಪ್ರದೇಶದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಲಾಶಯಕ್ಕೆ ಹರಿದು ಬರುತ್ತಿರುವ ನೀರನ್ನು ಸಿಂಗಟಾಲೂರು ಜಲಾಶಯದಲ್ಲಿ ನಿಲ್ಲಿಸುತ್ತಿರುವುದು ರೈತರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
 
ಅಚ್ಚುಕಟ್ಟು ಪ್ರದೇಶದ ಕೊಪ್ಪಳ, ಬಳ್ಳಾರಿ ಜಿಲ್ಲೆಯ ತಾಲೂಕುಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ಮುಂಗರು ಹಂಗಾಮಿನಲ್ಲಿ ಭತ್ತ ನಾಟಿ ಮಾಡಿದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಕೆಲ ಭಾಗ ಹೊರತುಪಡಿಸಿ ಉಳಿದಂತೆ ಭತ್ತ ನಾಟಿ ಮಾಡಿಲ್ಲ. ಇನ್ನೂ ರಾಯಚೂರಿಗೆ ಎಡದಂಡೆ ಕಾಲುವೆ ನೀರು ತಲುಪಿಲ್ಲ. ಕಾಲುವೆಯಲ್ಲಿ ಹರಿಯುತ್ತಿರುವ ನೀರನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಿಬ್ಬಂದಿ ಕೊರತೆ ಇದೆ. ಕಾಲುವೆ ನೀರು ನದಿ ಮೂಲಕ ಆಂಧ್ರಪ್ರದೇಶವನ್ನು ಸೇರುತ್ತಿದೆ. 

 ಕೊನೆಯಲ್ಲಿ ಜಲಾಶದಲ್ಲಿ ಉಳಿಯುವ ನೀರಿನಲ್ಲಿ ಆಂಧ್ರಪ್ರದೇಶ ತನ್ನ ಪಾಲಿನ ನೀರನ್ನು ಕೇಳುವ ಮೂಲಕ ಹಕ್ಕು ಮಂಡನೆ ಮಾಡುತ್ತಿದೆ. ನೀರಿನ ಪಾಲು ಮಾಡಲು ಮಾತ್ರ ತುಂಗಭದ್ರಾ ಬೋರ್ಡ್‌ ಇದ್ದು ಜಲಾಶಯದ ಪ್ರತಿ ಆಗುಹೋಗುಗಳನ್ನು ರಾಜ್ಯ ಸರಕಾರ ನೋಡಿಕೊಳ್ಳಬೇಕಾದ
ಅನಿವಾರ್ಯತೆ ಇದೆ. ಬೋರ್ಡ್‌ ತೆಗೆದು ಹಾಕುವಂತೆ ಅನೇಕ ಭಾರಿ ರೈತರು ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ.
 
ಕುಡಿಯುವ ನೀರಿಗಾಗಿ ನಿರ್ಮಿಸಲಾದ ಸಿಂಗಟಾಲೂರು ಏತ ನೀರಾವರಿ ಯೋಜನೆ ಸಣ್ಣ ಪ್ರಮಾಣದ ಡ್ಯಾಮ್‌ನಲ್ಲಿ ಮಳೆಗಾಲದ ಸಂದರ್ಭದಲ್ಲಿ ನೆರೆಯ ನೀರನ್ನು ಮಾತ್ರ ಸಂಗ್ರಹ ಮಾಡಬೇಕೆನ್ನುವ ನಿಯಮವಿದ್ದರೂ ಗದಗ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಉಳಿದ ದಿನಗಳಲ್ಲಿ ನದಿಯ ಮೂಲಕ ಹರಿದು ಬರುವ ನೀರನ್ನು ಹಿಡಿದಿಟ್ಟುಕೊಳ್ಳುವ ಮೂಲಕ ತುಂಗಭದ್ರಾ ಜಲಾಶಯದ ಒಳಹರಿವನ್ನು ತಡೆಯಲಾಗುತ್ತಿದೆ.

ಮುಂಗಾರು ಮಳೆಯಿಂದ ಭರ್ತಿಯಾಗುವ ಜಲಾಶಯದಲ್ಲಿ ಪ್ರತಿವರ್ಷ ನ. 15 ತನಕ ಪ್ರತಿ ದಿನ 15 ಸಾವಿರ ಕ್ಯೂಸೆಕ್‌ ನೀರು ಒಳಹರಿವು ಇರುತ್ತಿತ್ತು. ಇದರಿಂದ ಎಡಬಲ ಮತ್ತು ಇತರೆ ಉಪಯೋಗಕ್ಕಾಗಿ ಪ್ರತಿದಿನ 10 ಸಾವಿರ ಕ್ಯೂಸೆಕ್‌ ನೀರು ಹೊರ ಹರಿವು ಸರಿದೂಗಿಸಲಾಗುತ್ತಿತ್ತು. ಕಳೆದ ನಾಲ್ಕೈದು ವರ್ಷಗಳಿಂದ ಸಿಂಗಟಾಲೂರು ಯೋಜನೆಯಲ್ಲಿ ಹರಿದುಬರುವ ನೀರನ್ನು ತಡೆಯುತ್ತಿರುವುದರಿಂದ ಡಿಸೆಂಬರ್‌ ವೇಳೆಗೆ ಜಲಾಶಯದ ನೀರು ಖಾಲಿಯಾಗುತ್ತಿದೆ ಎನ್ನುವುದು ರೈತರ ಅಭಿಪ್ರಾಯವಾಗಿದೆ.

ಪ್ರಸ್ತುತ ಜಲಾಶಯದಲ್ಲಿ 75 ಟಿಎಂಸಿ ಅಡಿ ನೀರಿದ್ದು, ನಾಟಿ ಮಾಡಿದ ಭತ್ತದ ಬೆಳೆಗೆ ಇನ್ನೂ 30 ಟಿಎಂಸಿ ಅಡಿ ನೀರು ಬೇಕು. ಉಳಿಯುವ 45 ಟಿಎಂಸಿ ಅಡಿ ನೀರಿನಲ್ಲಿ ಆಂಧ್ರಪ್ರದೇಶದ ಪಾಲು ತೆಗೆದು ಕುಡಿಯು ನೀರು, ಡೆಡ್‌ ಸ್ಟೋರೆಜ್‌ ಮತ್ತು ವಿದ್ಯುತ್‌ ಸ್ಥಾವರಗಳಿಗೆ ಕನಿಷ್ಟ 10 ಟಿಎಂಸಿ
ಅಡಿ ನೀರು ಬೇಕಾಗುತ್ತದೆ. ಪುನಃ ಒಂದೇ ಬೆಳೆಗೆ ಅಚ್ಚುಕಟ್ಟು ರೈತರು ತೃಪ್ತಿಪಟ್ಟುಕೊಳ್ಳುವ ಸಂಭವ ಹೆಚ್ಚಿದೆ. ಸೂಕ್ತ ನಿರ್ವಹಣೆ, ಮಿತ ಬಳಕೆ ಮೂಲಕ ನೀರನ್ನು ಉಳಿಸಬೇಕಾದ ಅನಿವಾರ್ಯತೆ ರೈತರು ಮತ್ತು ಜಲಾಶಯದ ಅಧಿಕಾರಿಗಳು ತುರ್ತಾಗಿ ಮಾಡಬೇಕಾಗಿದೆ.

ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಕುಡಿಯುವ ನೀರಿಗಾಗಿ 6.5 ಟಿಎಂಸಿ ಅಡಿ ನೀರು ಸಂಗ್ರಹ ಮಾಡುವ ನೆಪದಲ್ಲಿ 18 ಟಿಎಂಸಿ ಅಡಿ ಜಲಾಶಯಕ್ಕೆ ಹರಿದುಬರುವ ನೀರನ್ನು ಹಿಡಿದಿಟ್ಟುಕೊಳ್ಳುತ್ತಿರುವುದು ಅಚ್ಚುಕಟ್ಟು ಪ್ರದೇಶ ರೈತರಿಗೆ ತೊಂದರೆಯಾಗಿದೆ. ಸಮನಾಂತರ ಜಲಾಶಯ ನಿರ್ಮಿಸಿ ಸಿಂಗಟಾಲೂರು ಯೋಜನೆಯಿಂದ ನೀರಾವರಿ ಮಾಡಲು ನೆರೆ ಸಂದರ್ಭದಲ್ಲಿ ನೀರು ಸಂಗ್ರಹ ಮಾಡುವಂತೆ ರೈತ ಸಂಘ ಆಗ್ರಹಿಸಿತ್ತು. ಅವೈಜ್ಞಾನಿಕವಾಗಿ ಎಚ್‌.ಕೆ. ಪಾಟೀಲ ಅವರ ಮಾತು ಕೇಳಿ ತುಂಗಭದ್ರಾ ಜಲಾಶಯವನ್ನು ಅಪಾಯಕ್ಕೆ ದೂಡಲಾಗುತ್ತಿದೆ. ನೀರು ಆಂಧ್ರಪ್ರದೇಶಕ್ಕೆ ಹರಿಯಲು ಪ್ರಮುಖ ಕಾರಣ ಅಧಿಕಾರಿಗಳು. ಹಣ ಮಾಡುವ ದಂಧೆಯಲ್ಲಿ ತೊಡಗಿದ್ದು ಸೂಕ್ತ ತನಿಖೆಯಾಗಬೇಕು. ನೆರೆ ಸಂದರ್ಭದಲ್ಲಿ 250 ಟಿಎಂಸಿ ಅಡಿ ನೀರು ಆಂಧ್ರದ ಪಾಲಾಗಿದ್ದು ಸಾಮಾನ್ಯ ವೇಳೆಯಲ್ಲಿ ಆಂಧ್ರಕ್ಕೆ ನೀರು ಬಿಡಬಾರದು.
 ತಿಪ್ಪೇರುದ್ರಸ್ವಾಮಿ, ರೈತ ಹೋರಾಟಗಾರ

„ಕೆ.ನಿಂಗಜ್ಜ

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.