ಕಾಂಗ್ರೆಸ್‌ ಪುಢಾರಿಗಳಿಂದಮೋದಿ ಅಕ್ಕಿ ಮಾರಾಟ: ಶೋಭಾ


Team Udayavani, Oct 26, 2018, 4:39 PM IST

bell-2.jpg

ಹೊಸಪೇಟೆ: ಕೇಂದ್ರ ದಿಂದ ಬರುವ ಮೋದಿಯವರ ಅಕ್ಕಿ-ಗೋಧಿಯನ್ನು ಕಾಂಗ್ರೆಸ್‌ನ ಪುಡಾರಿಗಳು ಮಾರಾಟ ಮಾಡಿಕೋಂಡು ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಪ್ರದಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರ‌್ಲಂದಾಜೆ ಆರೋಪಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ದಿಂದ 400 ಕೋಟಿ ರೂ. ವೆಚ್ಚದಲ್ಲಿ ಪ್ರತಿ ತಿಂಗಳು 57 ಲಕ್ಷ ಮೆಟ್ರಕ್‌ ಟನ್‌ ಗೋಧಿ, 1.65 ಲಕ್ಷ ಟನ್‌ ಅಕ್ಕಿ ಬರುತ್ತಿದೆ. 1 ಕೆಜಿ ಅಕ್ಕಿ 31 ರೂ. ಹಾಗೂ 1 ಕೆಜಿ ಗೋಧಿಗೆ 21 ರೂ.ನಂತೆ ಖರೀದಿ ಮಾಡಿ ರಾಜ್ಯಕ್ಕೆ ಕಳು‌ಹಿಸುತ್ತಿದೆ . ಇದರಲ್ಲಿ ರಾಜ್ಯ ಸರ್ಕಾ ರದ ಪಾಲು ಒಂದು ಕೆಜಿ ಅಕ್ಕಿ ಯದು 3 ರೂ., ಗೋಧಿಯ 2 ರೂ. ಮಾತ್ರ. ಈ ಅಕ್ಕಿ-ಗೋಧಿಯನ್ನು ರಾಜ್ಯದ ಬಡವರಿಗೆ ವಿತರಣೆ ಮಾಡಿ ಅನ್ನಭಾಗ್ಯ ಯೋಜನೆ ನನ್ನದು ಎಂದು ಬೀಗು ತ್ತಿದೆ. ಕೇಂದ್ರ ದಿಂದ ಅಕ್ಕಿ ಯನ್ನು ಕಾಂಗ್ರೆಸ್‌ ಪುಡಾರಿಗಳು ಪಾಲಿಶ್‌ ಮಾಡಿ ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.

ಜಾತಿ, ಜಾತಿ ಹಾಗೂ ಧರ್ಮಗಳ ವಿರುದ್ಧ ಕಲಹ ಉಂಟು  ಮಾಡುವ ಕಾಂಗ್ರೆಸ್‌ ಟಿಪ್ಪು ಜಯಂತಿ ಹೆಸರಿನಲ್ಲಿ ಸಹೋ ದರರಂತೆ ಇರುವ ಹಿಂದೂ-ಮುಸ್ಲಿಂ ನಡುವೆ ವೈಮ ನಸ್ಸು ಉಂಟು ಮಾಡಿದರು. ಟಿಪ್ಪು ಜಯಂತಿ ಮುಸ್ಲಿಂ ಬಾಂಧವರಿಗೆ ಬೇಕಿದಿಲ್ಲ. ಅದು ಕಾಂಗ್ರೆಸ್‌ ಸರ್ಕಾರಕ್ಕೆ ಬೇಕಿತ್ತು ಎಂದು ಕಿಡಿಕಾರಿದರು. 

ದೋಸ್ತಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 4.5 ತಿಂಗಳು ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ. ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಹ ಕಾರ ಸಂಘ, ರಾಷ್ಟ್ರೀ ಕೃತ ಬ್ಯಾಂಕ್‌ ಸೇರಿ ದಂತೆ ಖಾಸಗಿ ಸಂಸ್ಥೆಯಲ್ಲಿ ಪಡೆದಿರುವ ರೈತರ ಎಲ್ಲಾ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದರು. ಈವರೆಗೂ ಯಾವುದೇ ರೈತರ ಸಾಲಮನ್ನಾ ಆಗಿಲ್ಲ ಎಂದು ಟೀಕಿಸಿದರು.

ವಿಶ್ವಮಟ್ಟದಲ್ಲಿ ಭಾರ ತದ ಹೆಗ್ಗಳಿಕೆ ಸಾರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿ ಸಲು ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರಿಗೆ ಮತ ನೀಡ ಬೇಕು ಎಂದು ಮನವಿ ಮಾಡಿದರು.

ಕೊಪ್ಪಳ ಸಂಸದ ಕರಡಿ ಸಂಗಣ್ಣ, ಗಂಗಾವತಿ ಶಾಸಕ ಪರಣ್ಣಮನವಳ್ಳಿ, ಯಲಬುರ್ಗಾ ಶಾಸಕ ಹಾಲಪ್ಪಚಾರ್‌, ಬಿಜೆಪಿ ಮಹಿಳಾ ಮೋರ್ಚಾ ಉಪಾ ಧಕ್ಷೆ ರಾಣಿ ಸಂಯುಕ್ತ, ಮಾಜಿ ಶಾಸಕ ಎಚ್‌.ಆರ್‌.ಗವಿಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ತಾಲೂಕು ಅಧ್ಯಕ್ಷ ಅನಂತಪದ್ಮನಾಭ, ಹಿರಿಯ ಮುಖಂಡ ಅಶೋಕ್‌ ಜೀರೆ, ಕವಿ ರಾಜ್‌ ಅರಸ್‌, ಚಂದ್ರಕಾಂತ್‌ ಕಾಮತ್‌, ಶಂಕರ್‌ ಮೇಟಿ ಇನ್ನಿತರರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.