ಸ್ನಾತಕೋತ್ತರ ಕೋರ್ಸ್‌ಗೆ ಕೊನೆಗೂ ಸಿಕು ಅನುಮತಿ


Team Udayavani, Nov 12, 2018, 4:41 PM IST

bell-2.jpg

ಬಳ್ಳಾರಿ: ಇಲ್ಲಿನ ತಾರಾನಾಥ್‌ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಹೆಚ್ಚುವರಿ ಸ್ನಾತಕೋತ್ತರ ಕೋರ್ಸ್‌ಗಳಿಗಾಗಿ ಕಳೆದ ಎರಡು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ದೆಹಲಿಯ ಆಯುಷ್‌ ಮಂತ್ರಾಲಯ ಕೊನೆಗೂ ಅಸ್ತು ಎಂದಿದೆ.

ಕಾಯ ಚಿಕಿತ್ಸೆ, ಪಂಚಕರ್ಮ, ಶಲ್ಯತಂತ್ರ ಸ್ನಾತಕೋತ್ತರ ಪದವಿ ಕೋರ್ಸ್‌ ನಡೆಸಲು ಅನುಮತಿ ದೊರೆತಿದ್ದು,
ಪ್ರಸಕ್ತ ಅಕಾಡೆಮಿಕ್‌ ವರ್ಷದಿಂದಲೇ ಚಾಲನೆ ದೊರೆಯಲಿದೆ. ಜತೆಗೆ ಸ್ನಾತಕ ಪದವಿ ಕೋರ್ಸ್‌ಗಳಿಗೂ ವಿದ್ಯಾರ್ಥಿಗಳ
ಸಂಖ್ಯೆಯನ್ನು ಹೆಚ್ಚಿಸಿದೆ. 

ಹೈದ್ರಾಬಾದ್‌ ಕರ್ನಾಟಕ ಸೇರಿ ಉತ್ತರ ಕರ್ನಾಟಕದಲ್ಲೇ ಏಕೈಕ ಸರ್ಕಾರಿ ಕಾಲೇಜು ಆಗಿರುವ ನಗರದ ಸರ್ಕಾರಿ ತಾರಾನಾಥ್‌ ಆಯುರ್ವೇದ ಕಾಲೇಜು ಕಳೆದ ಐದಾರು ದಶಕಗಳಿಂದ ಕಾರ್ಯನಿರ್ವಹಿಸುತ್ತಿದೆ. ಆರಂಭದಿಂದಲೂ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಸ್ನಾತಕ ಪದವಿಗಳು ಚಾಲನೆಯಲ್ಲಿವೆ. ಕಳೆದ 20 ವರ್ಷಗಳಿಂದ ರಸಶಾಸ್ತ್ರ ವಿಭಾಗದಲ್ಲಿ ಮಾತ್ರ ಸ್ನಾತಕೋತ್ತರ ಪದವಿ ಕೋರ್ಸ್‌ ಇದ್ದು, 7 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಇನ್ನುಳಿದ ವಿಭಾಗಗಳಿಗೂ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಆರಂಭಿಸಲು ಅನುಮತಿ ನೀಡುವಂತೆ ಕಳೆದ ಎರಡು ದಶಕಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಈಚೆಗೆ ದೆಹಲಿಯ ಮಿನಿಸ್ಟ್ರಿ ಆಫ್‌ ಆಯುಷ್‌ ಮಂತ್ರಾಲಯ ಮತ್ತು ಬೆಂಗಳೂರಿನರಾಜೀವ್‌ ಗಾಂಧಿ ಮೆಡಿಕಲ್‌ ಸೈನ್ಸಸ್‌ ಸಂಸ್ಥೆಯು ಕಾಯಚಿಕಿತ್ಸೆ, ಪಂಚಕರ್ಮ, ಶಲ್ಯತಂತ್ರ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ನಡೆಸಲು ಅನುಮತಿ ದೊರೆತಿದೆ. ಹೀಗಾಗಿ ಒಟ್ಟು 18 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಸೀಟ್‌ಗಳ ಹಂಚಿಕೆ: ತಾರಾನಾಥ್‌ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ರಸಶಾಸ್ತ್ರ ವಿಭಾಗಕ್ಕೆ ಸ್ನಾತಕೋತ್ತರ ಪದವಿ (ಪಿಜಿ) ಚಾಲನೆಯಲ್ಲಿದ್ದು, 7 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರೊಂದಿಗೆ ಇದೀಗ ಅನುಮತಿ ದೊರೆತಿರುವ ಪಂಚಕರ್ಮ ಸ್ನಾತಕೋತ್ತರ ಪದವಿ ಕೋರ್ಸ್‌ಗೆ 7, ಕಾಯಚಿಕಿತ್ಸೆಗೆ 7, ಶಲ್ಯತಂತ್ರ (ಆಪರೇಷನ್‌) ಕೋರ್ಸಗೆ 4 ಸೇರಿ ಒಟ್ಟು 18 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲಿದ್ದಾರೆ. 

ಈಚೆಗೆ ನಡೆದ ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಹಂಚಿಕೆ ಮಾಡಲಾಗಿದ್ದು, ಶೇ. 80ರಷ್ಟು ಹೈಕ ಭಾಗದ ವಿದ್ಯಾರ್ಥಿಗಳಿಗೆ ಅವಕಾಶ ದೊರೆತಿದೆ ಎನ್ನುತ್ತಾರೆ ಕಾಲೇಜು ಪ್ರಭಾರಿ ಪ್ರಾಚಾರ್ಯ ರಾಜಶೇಖರ್‌ ಗಾಣಿಗೇರ್‌. 

ಯುಜಿಗೂ ಹೆಚ್ಚಿದ ವಿದ್ಯಾರ್ಥಿಗಳ ಸಂಖ್ಯೆ: ಕಳೆದ ಐದಾರು ದಶಕಗಳಿಂದ ಆಯುರ್ವೇದ ಚಿಕಿತ್ಸೆ ಬಗ್ಗೆ ಬೋಧಿಸುತ್ತಿರುವ ನಗರದ ಸರ್ಕಾರಿ ತಾರಾನಾಥ್‌ ಆಯುರ್ವೇದ ಕಾಲೇಜಿನಲ್ಲಿ ಕೇವಲ ಪ್ರತಿವರ್ಷ ವಿವಿಧ ವಿಭಾಗಗಳಲ್ಲಿ ಕೇವಲ 40 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿತ್ತು. ಪ್ರಸಕ್ತ ವರ್ಷದಿಂದ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಸರ್ಕಾರ ಅನುಮತಿ ನೀಡಿದ್ದು, ಮುಂದಿನ ದಿನಗಳಲ್ಲಿ ಒಟ್ಟು 60 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ದೊರೆಯಲಿದೆ. ಇದರಲ್ಲೂ 371(ಜೆ) ಪ್ರಕಾರ ಹೈಕ ಭಾಗದ ಸುಮಾರು 48 ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅವಕಾಶ ದೊರೆಯಲಿದೆ.

ಕೆಎಂಇಆರ್‌ಸಿ, ಡಿಎಂಎಫ್‌ನಿಂದ ಅನುದಾನ: ತಾರನಾಥ್‌ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಅಗತ್ಯ ಬೋಧಕ, ಬೋಧಕೇತರ ಸಿಬ್ಬಂದಿ ಲಭ್ಯವಿದ್ದಾರೆ. ಅದರ ಅಧಾರದ ಮೇಲೆಯೇ ಮೂರು ಸ್ನಾತಕೋತ್ತರ ಕೋರ್ಸ್‌ ಮತ್ತು ಸ್ನಾತಕ ಪದವಿಯಲ್ಲಿ 20 ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅನುಮತಿ ದೊರೆತಿದೆ. ಕಾಲೇಜನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಗಣಿಗಾರಿಕೆಯಿಂದ ಸಂಗ್ರಹಗೊಂಡಿದ್ದ ಕೆಎಂಆರ್‌ಇಸಿಯಿಂದ 45 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. 

ಜಿಲ್ಲಾ ಖನಿಜ ನಿಗೂ ಪ್ರಸ್ತಾವನೆ ನೀಡುವಂತೆ ಸ್ಥಳೀಯ ಶಾಸಕರು ಸಲಹೆ ನೀಡಿದ್ದಾರೆ. ಅದರಂತೆ ಅನುದಾನ ದೊರೆತಲ್ಲಿ, ಸಿಬ್ಬಂದಿಗೆ ವಸತಿ, ರೋಗಿಗಳ ಸಂಬಂಧಿಗಳಿಗಾಗಿ ಬೃಹತ್‌ ಕಟ್ಟಡ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂಬುದು ಪ್ರಭಾರ ಪ್ರಾಚಾರ್ಯ ರಾಜಶೇಖರ್‌ ಗಾಣಿಗೇರ್‌ ಅವರ ವಿಶ್ವಾಸದ ನುಡಿಗಳಾಗಿವೆ. 

ನಗರದ ತಾರಾನಾಥ್‌ ಸರ್ಕಾರಿ ಆಯುರ್ವೇದ ಕಾಲೇಜು ಕಳೆದ ಐದಾರು ದಶಕಗಳಿಂದ ಕಾರ್ಯನಿರ್ವಹಿಸುತ್ತಿದೆ. ಸ್ನಾತಕ ಪದವಿ ಕೋರ್ಸ್‌ನಲ್ಲಿ ಕೇವಲ 40 ವಿದ್ಯಾರ್ಥಿಗಳಿಗಷ್ಟೇ ಪ್ರವೇಶವಿದ್ದು, ಅದನ್ನು ಇದೀಗ 60ಕ್ಕೆ ಏರಿಸಲಾಗಿದೆ. ಈಗಾಗಲೇ ಇರುವ ರಸಶಾಸ್ತ್ರ ಸ್ನಾತಕೋತ್ತರ ಕೋರ್ಸ್‌ ಜತೆಗೆ ಕಾಯ ಚಿಕಿತ್ಸೆ, ಪಂಚಕರ್ಮ, ಶಲ್ಯತಂತ್ರ ಸ್ನಾತಕೋತ್ತರ ಕೋರ್ಸ್‌ಗಳಿಗೂ ಅನುಮತಿ ದೊರೆತಿದ್ದು, ಈಚೆಗೆ ನಡೆದ ಪ್ರವೇಶ ಪರೀಕ್ಷೆಯಿಂದಾಗಿ 18 ವಿದ್ಯಾರ್ಥಿಗಳನ್ನೂ ಹಂಚಿಕೆ ಮಾಡಲಾಗಿದೆ. ಕಾಲೇಜಿನಲ್ಲಿ ಈಗಾಗಲೇ ಅಗತ್ಯ ಬೋಧಕ, ಬೋಧಕೇತರ ಸಿಬ್ಬಂದಿಗಳಿದ್ದ ಪರಿಣಾಮ ಹೆಚ್ಚುವರಿ ಕೋರ್ಸ್‌ಗಳಿಗೆ ಅನುಮತಿ ದೊರೆಯಲು ಕಾರಣವಾಗಿದೆ. 
 ಡಾ| ರಾಜಶೇಖರ್‌ ಗಾಣಿಗೇರ್‌, ಪ್ರಭಾರ ಪ್ರಾಚಾರ್ಯರು, ಸರ್ಕಾರಿ ತಾರಾನಾಥ್‌ ಆಯುರ್ವೇದ ಕಾಲೇಜು, ಬಳ್ಳಾರಿ.

„ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.