ಬಾಕಿ ವೇತನ ಪಾವತಿಗೆ ಆಗ್ರಹ


Team Udayavani, Nov 18, 2018, 5:23 PM IST

bell-1.jpg

ಬಳ್ಳಾರಿ: ಆಶಾ ಕಾರ್ಯಕರ್ತೆಯರ ಬಾಕಿ ವೇತನ, ಕೇಂದ್ರದ ಪ್ರೋತ್ಸಾಹಧನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಸಂಯುಕ್ತ (ಎಐಯುಟಿಯುಸಿ ಸಂಯೋಜಿತ) ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಶನಿವಾರ ಪ್ರತಿಭಟನೆ ನಡೆಸಿದರು.

ಗಾಂಧಿ ಭವನದಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಆವರಣದಲ್ಲಿ ಕೆಲಹೊತ್ತು ಧರಣಿ ನಡೆಸಿದರು. ನಂತರ
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಆರೋಗ್ಯ ಇಲಾಖೆಯಡಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಸರಕಾರದ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯ ಸರ್ಕಾರ 3500 ರೂ. ಗೌರವಧನ ನೀಡುತ್ತಿದ್ದು, ಕೇಂದ್ರ ಸರ್ಕಾರ ಕೆಲಸಕ್ಕೆ ತಕ್ಕಷ್ಟು ಪ್ರೋತ್ಸಾಹಧನ ನೀಡುತ್ತಿದೆ. ಆದರೆ, ಖಜಾನೆ-2ರಲ್ಲಿ ಬಾಕಿಯಿದ್ದ 6 ತಿಂಗಳ ವೇತನದಲ್ಲಿ ಈಚೆಗೆ ನಾಲ್ಕು ತಿಂಗಳ ವೇತನ ಪಾವತಿಯಾಗಿದೆ. ಇನ್ನುಳಿದ ಎರಡು ತಿಂಗಳ ವೇತನ ಬಾಕಿ ಉಳಿದಿದೆ. ಇನ್ನು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ದುಡಿದಷ್ಟು ಕೈಗೆ ಸಿಗುತ್ತಿಲ್ಲ. ಆರ್‌ಸಿಎಚ್‌ ಹೊಸ ಪೋರ್ಟಲ್‌ ಜಾರಿಯಾಗಿದ್ದರಿಂದ ಕಳೆದ ಮೂರು ತಿಂಗಳಿಂದ ಆಶಾ ಸೇವೆಗಳು ಎಂಸಿಟಿಎಸ್‌ನಲ್ಲಿ ಸರಿಯಾಗಿ ದಾಖಲಾಗಿಲ್ಲ. ಒಂದೇ ಸಮನೆ ಮೂರ್‍ನಾಲ್ಕು ತಿಂಗಳುಗಳ ಸೇವೆಗಳನ್ನು ದಾಖಲು ಮಾಡುವುದರಿಂದ ಕೆಲವೊಂದು ಸಮಸ್ಯೆಯಾಗುತ್ತಿದ್ದು, ಇದರಿಂದ ಆಶಾ ಕಾರ್ಯಕರ್ತೆಯರಿಗೆ ದುಡಿದಷ್ಟು ಪ್ರೋತ್ಸಾಹಧನ ಕೈಗೆ ಸೇರುತ್ತಿಲ್ಲ. ಇಂಥ ಸಮಸ್ಯೆಗಳ ನಿವಾರಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು
ಪ್ರತಿಭಟನಾಕಾರರು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರ ರಾಜ್ಯದ ನಿಗದಿತ ವೇತನ, ಕೇಂದ್ರದ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗಾಗಿ ಖಾತೆಗೆ ಪಾವತಿಯಾಗಬೇಕು. ಆಶಾ ಸಾಫ್ಟ್‌ (ಆಶಾನಿಧಿ) ಅಥವಾ ಆರ್‌ಸಿಎಚ್‌ ಪೋರ್ಟಲ್‌ ನೋಂದಣಿಗೆ ಆಶಾ ವೇತನ ಲಿಂಕ್‌ ಮಾಡಿರುವುದನ್ನು ಕೈ ಬಿಡಬೇಕು. ಆಶಾ ಕಾರ್ಯಕರ್ತೆಯರು ನಿರ್ವಹಿಸಿದ್ದ ಎಲ್ಲ ಕೆಲಸಗಳಿಗೂ ಸಂಪೂರ್ಣ ಪ್ರೋತ್ಸಾಹಧನ
ನೀಡಬೇಕು. ಪ್ರೋತ್ಸಾಹಧನವಿಲ್ಲದ ಲಾರ್ವಾ, ಕುಷ್ಟರೋಗ, ಐಯೋಡಿನ್‌ ಸೇರಿದಂತೆ ವಿವಿಧ ಸರ್ವೇಗಳಿಗೆ ದಿನಕ್ಕೆ 200 ರೂ. ಪ್ರೋತ್ಸಾಹಧನ ನಿಗದಿಪಡಿಸಬೇಕು. ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಸಮಿತಿ ರಚಿಸಿ, ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಬೇಕು. ತಾಲೂಕು ಆರೋಗ್ಯ
ಕೇಂದ್ರಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು. ವಿಶ್ರಾಂತಿ ಕೊಠಡಿಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಸಂಘದ ಡಿ.ನಾಗಲಕ್ಷ್ಮೀ, ಎ.ಶಾಂತಾ, ಜಿಲ್ಲಾಧ್ಯಕ್ಷೆ ವೀರಮ್ಮ, ಜಿಲ್ಲಾ ಕಾರ್ಯದರ್ಶಿ ಗೀತಮ್ಮ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಸೇಖರ್‌, ಎಸ್‌ಯುಸಿಐಸಿ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣಾ ಉಪಾಧ್ಯ, ಮಂಜುಳಾ, ಎ.ದೇವದಾಸ್‌, ಗೌರಮ್ಮ, ಲಕ್ಷೀ¾ದೇವಿ,
ಚನ್ನಮ್ಮ, ಶಶಿಕಲಾ, ಮಂಗಳಾ, ನೇತ್ರಾವತಿ, ಭುವನೇಶ್ವರಿ, ಅನಂತಲಕ್ಷ್ಮೀ, ಯಲ್ಲಮ್ಮ, ಜಲಜಾಕ್ಷ್ಮೀ, ಬಸಮ್ಮ, ರಾಜೇಶ್ವರಿ, ಅಂಬಿಕಾ, ಕಮಲ, ಜ್ಯೋತಿ, ಸುರೇಶ್‌, ಈಶ್ವರಿ ಸೇರಿದಂತೆ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.