4551 ಕಡತಗಳ ವಿಲೇವಾರಿ


Team Udayavani, Nov 20, 2018, 5:03 PM IST

bell-1.jpg

ಬಳ್ಳಾರಿ: ಕಂದಾಯ ಇಲಾಖೆಯಲ್ಲಿ ಕಳೆದ ಒಂದು ವರ್ಷದಿಂದ 10 ಸಾವಿರಕ್ಕೂ ಹೆಚ್ಚು ಕಡತಗಳು ಬಾಕಿ ಉಳಿದಿದೆ. ಇವುಗಳನ್ನು ಕಳೆದ ಒಂದು ವಾರದಿಂದ ಕಂದಾಯ ಇಲಾಖೆಯಲ್ಲಿ ನಡೆದ ಕಡತ ವಿಲೇವಾರಿ ಸಪ್ತಾಹದಲ್ಲಿ ಕೈಗೆತ್ತಿಕೊಂಡು ವಿವಿಧ ವಿಭಾಗದ 4551 ಕಡತಗಳನ್ನು ವಿಲೇವಾರಿ ಮಾಡಲಾಗಿದ್ದು, 6140 ಕಡತಗಳು ಬಾಕಿ ಉಳಿದಿವೆ.

ಜಿಲ್ಲಾ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಭೂ ದಾಖಲೆಗಳು, ಮಾಸಾಶನ, ಸಾಮಾಜಿಕ ಭದ್ರತಾ ಯೋಜನೆಗಳು ಸೇರಿದಂತೆ ಕಳೆದ 2018 ಮೇ.22ರಿಂದ 2018 ಅ.30ರ  ವರೆಗೆ ಜಿಲ್ಲೆಯಾದ್ಯಂತ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ 12061, ಸಹಾಯಕ ಆಯುಕ್ತರ ಕಚೇರಿ 21419, ಹೊಸಪೇಟೆ ಸಹಾಯಕ ಆಯುಕ್ತರ ಕಚೇರಿ 3561, ಬಳ್ಳಾರಿ ತಾಲೂಕು ಕಚೇರಿ 10155, ಸಿರುಗುಪ್ಪ 29440, ಸಂಡೂರು 25576, ಹೊಸಪೇಟೆ 78314, ಹ.ಬೊ.ಹಳ್ಳಿ 7437, ಹಡಗಲಿ 22168, ಕೂಡ್ಲಿಗಿ 35142 ಸೇರಿದಂತೆ ಒಟ್ಟು 2,45,273 ಅರ್ಜಿಗಳು ಸಲ್ಲಿಕೆಯಾಗಿದ್ದವು.
 
ಈ ಪೈಕಿ 2018ರ ಮೇ.23 ರಿಂದ 2018 ನವೆಂಬರ್‌ 9ರ ವರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ 10526, ಬಳ್ಳಾರಿ
ಸಹಾಯಕ ಆಯುಕ್ತರ ಕಚೇರಿ 19128, ಹೊಸಪೇಟೆ ಸಹಾಯಕ ಆಯುಕ್ತರ ಕಚೇರಿ 3118, ಬಳ್ಳಾರಿ ತಾಲೂಕು ಕಚೇರಿ 9261, ಸಿರುಗುಪ್ಪ 28271, ಸಂಡೂರು 25055, ಹೊಸಪೇಟೆ 76827, ಹ.ಬೊ.ಹಳ್ಳಿ 6906, ಹಡಗಲಿ 21144, ಕೂಡ್ಲಿಗಿ 34346 ಕಡತಗಳನ್ನು ವಿಲೇವಾರಿ ಮಾಡಲಾಗಿತ್ತು.

2018 ಮೇ.9 ರಂದು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ 1535, ಬಳ್ಳಾರಿ ಎಸಿ ಕಚೇರಿ 2291, ಹೊಸಪೇಟೆ ಎಸಿ ಕಚೇರಿ
443, ಬಳ್ಳಾರಿ ತಾಲೂಕು ಕಚೇರಿ 894, ಸಿರುಗುಪ್ಪ 1169, ಸಂಡೂರು 521, ಹೊಸಪೇಟೆ 1487, ಹ.ಬೊ.ಹಳ್ಳಿ 531,
ಹಡಗಲಿ 1024, ಕೂಡ್ಲಿಗಿ 796 ಸೇರಿದಂತೆ ಒಟ್ಟು 10691 ಕಡತಗಳು ಬಾಕಿ ಉಳಿದಿದ್ದು, ಕಳೆದ ನ.12 ರಿಂದ ನ.18ರ ವರೆಗೆ ನಡೆದ ಕಂದಾಯ ಇಲಾಖೆಯ ಕಡತ ವಿಲೇವಾರಿ ಸಪ್ತಾಹದಲ್ಲಿ ಆದ್ಯತೆ ಮೇರೆಗೆ ತೆಗೆದುಕೊಂಡ ಪರಿಣಾಮ ಬಳ್ಳಾರಿ ಡಿಸಿ ಕಚೇರಿ 540 (995 ಬಾಕಿ), ಎಸಿ ಕಚೇರಿ 509 (1782 ಬಾಕಿ), ಹೊಸಪೇಟೆ ಎಸಿ ಕಚೇರಿ 36 (407 ಬಾಕಿ), ಬಳ್ಳಾರಿ ತಾಲೂಕು ಕಚೇರಿ 224 (670 ಬಾಕಿ), ಸಿರುಗುಪ್ಪ 712 (457 ಬಾಕಿ), ಸಂಡೂರು 319 (202 ಬಾಕಿ) ಹೊಸಪೇಟೆ 801 (686 ಬಾಕಿ), ಹ.ಬೊ.ಹಳ್ಳಿ 104 (427 ಬಾಕಿ), ಹಡಗಲಿ 714 (310 ಬಾಕಿ), ಕೂಡ್ಲಿಗಿ 596 (204 ಬಾಕಿ) ಸೇರಿ ಒಟ್ಟು 4551 ಕಡತಗಳನ್ನು ವಿಲೇವಾರಿ ಮಾಡಿದ್ದು, ಇನ್ನೂ 6140 ಕಡತಗಳು ಬಾಕಿ ಉಳಿದಿವೆ. ಅವುಗಳನ್ನು ಸಹ ಆದ್ಯತೆ ಮೇರೆಗೆ ಈ ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ. 

ಏನಿದು ಕಡತ ವಿಲೇವಾರಿ ಸಪ್ತಾಹ
ಕಂದಾಯ ಇಲಾಖೆಯಲ್ಲಿ ಕೆಲಸದ ಒತ್ತಡ, ಸೂಕ್ತ ದಾಖಲೆ ಸೇರಿ ಹಲವು ಕಾರಣಗಳಿಂದ ಸಾಕಷ್ಟು ಕಡತಗಳು ನಿಗದಿತ ಸಮಯಕ್ಕೆ ವಿಲೇವಾರಿಯಾಗದೇ ಬಾಕಿ ಉಳಿದಿರುತ್ತವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತವೆ. ಹಾಗಾಗಿ ಒಂದು ವಾರವನ್ನು ನಿಗದಿಗೊಳಿಸಿ, ಈ ಅವಧಿಯಲ್ಲಿ ಎಷ್ಟು ಕಡತಗಳನ್ನು ವಿಲೇವಾರಿ ಮಾಡಿ, ಸರ್ಕಾರಕ್ಕೆ ಅನುಪಾಲನಾ ವರದಿ ಕಳುಹಿಸಿ, ಕಾರ್ಯಾಲಯಕ್ಕೆ ಪ್ರತಿಯನ್ನು ಕಳುಹಿಸಬೇಕು. ಅಲ್ಲದೇ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬಾಕಿ ಇರುವ ಕಡತ ಹಾಗೂ ಸಮಸ್ಯೆಗಳಿರುವಂತಹ ಪ್ರಕರಣಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕೆಂಬುದನ್ನು ಅಧೀನದಲ್ಲಿರುವ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ಒಂದು ವರ್ಷಕ್ಕೂ ಹಿಂದಿನ ಕಡತಗಳಿಗೆ ಮೊದಲ ಆದ್ಯತೆ ನೀಡಿ ವಿಲೇವಾರಿ ಮಾಡಬೇಕು. ಜತೆಗೆ ಕಡತ ವಿಲೇವಾರಿಯು ಗುಣಾತ್ಮಕವಾಗಿರಬೇಕು ಎಂಬುದು ಸಪ್ತಾಹದ ಮುಖ್ಯ ಉದ್ದೇಶ.

ಭಾನುವಾರವೂ ಕಡತ ವಿಲೇ ರಜಾದಿನ ಭಾನುವಾರವೂ ಕಾರ್ಯನಿರ್ವಹಿಸಿದ ಸಿಬ್ಬಂದಿ ಕಂದಾಯ ಇಲಾಖೆಯಲ್ಲಿ ಬಾಕಿ
ಉಳಿದಿದ್ದ ಕಡತಗಳನ್ನು ವಿಲೇವಾರಿಗಾಗಿ ನ.12ರಂದು ಆರಂಭವಾದ ಕಂದಾಯ ಇಲಾಖೆಯ ಕಡತ ವಿಲೇವಾರಿ ಸಪ್ತಾಹದ ಕೊನೆಯ ದಿನ ನ.18 ಭಾನುವಾರವಾಗಿದ್ದು, ಅಂದು ರಜಾ ದಿನವಾದರೂ ಇಲಾಖೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸಿದ್ದಾರೆ. 10691 ಬಾಕಿ ಕಡತಗಳ ಪೈಕಿ ಒಟ್ಟು 4551 ಕಡತಗಳನ್ನು ವಿಲೇವಾರಿ ಮಾಡಿ, ಮಾಹಿತಿಯನ್ನು ಅಂದೇ ಸರಕಾರಕ್ಕೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

ರಾಮೇಶ್ವರಂ ಕೆಫೆ ಪ್ರಕರಣ: ಮತ್ತೊಮ್ಮೆ ಬಳ್ಳಾರಿ ನಗರಕ್ಕೆ ಬಂದ NIA ಅಧಿಕಾರಿಗಳು

ರಾಮೇಶ್ವರಂ ಕೆಫೆ ಪ್ರಕರಣ: ಬಳ್ಳಾರಿಯಲ್ಲಿ NIA ಅಧಿಕಾರಿಗಳ ಶೋಧ, ಓರ್ವ ವಶಕ್ಕೆ

Bellary; “ಬ್ರದರ್ಸ್‌’ ವಿಧಾನಸೌಧಕ್ಕೇ ಬಾಂಬ್‌ ಇಡ್ತಾರೆ: ಶ್ರೀರಾಮುಲು

Bellary; “ಬ್ರದರ್ಸ್‌’ ವಿಧಾನಸೌಧಕ್ಕೇ ಬಾಂಬ್‌ ಇಡ್ತಾರೆ: ಶ್ರೀರಾಮುಲು

Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ

Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ

Rameshwaram Cafe Case; ಬಾಂಬರ್‌ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ

Rameshwaram Cafe Case; ಬಾಂಬರ್‌ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.