ಆರ್ಥಿಕ ಪರಿಸ್ಥಿತಿ ನೋಡಿ ಮೀಸಲಾತಿ ನೀಡಿ


Team Udayavani, Nov 25, 2018, 4:43 PM IST

bell-1.jpg

ಹೂವಿನಹಡಗಲಿ: ಸರ್ಕಾರ ಕೇವಲ ಜಾತಿ ಆಧಾರದ ಮೇಲೆ ಮೀಸಲಾತಿ ನೀಡುವುದು ಬಿಟ್ಟು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲಾ ಜಾತಿಯ ಬಡವರಿಗೂ ಕೂಡಾ ಮೀಸಲಾತಿ ನೀಡಬೇಕು ಎಂದು ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಹೇಳಿದರು.

ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ವೀರಶೈವ ಪಂಚಮಸಾಲಿ ಸಂಘಟನೆಯಿಂದ ಆಯೋಜಿಸಲಾಗಿದ್ದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ ನಾಮಫಲಕ ಅನಾವರಣ ಹಾಗೂ ರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
 
ವೀರಶೈವ ಪಂಚಮಸಾಲಿ ಸಮಾಜ ಬಾಂಧವರು ಈಗಾಗಲೇ ಬಹುವರ್ಷಗಳಿಂದ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದ್ದಾರೆ. ಯಾರದೋ ಹಕ್ಕನ್ನು ಕಿತ್ತುಕೊಂಡು ಸರ್ಕಾರ ನಮಗೆ ನೀಡುವುದು ಬೇಡ. ನಮ್ಮಲ್ಲಿರುವ ಬಡವರ ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ಅಭಿವೃದ್ಧಿಗಾಗಿ ಸೌಲಭ್ಯಗಳನ್ನು ನೀಡಬೇಕಾಗಿದೆ ಎಂದರು.

ಸರ್ಕಾರದ ಕೆಲವೊಂದು ನೀತಿ ನಿಯಮಗಳು ಬದಲಾಗಬೇಕಾಗಿದೆ. ಬಹುಕಾಲದಿಂದ ಮೀಸಲಾತಿಯ ಸೌಲಭ್ಯವನ್ನು ಅನುಭವಿಸುತ್ತಿರುವವರು ಎಲ್ಲರೂ ಅಲ್ಲದಿದ್ದರು ಕೆಲವರು ಈಗಾಗಲೇ ಆರ್ಥಿಕವಾಗಿ, ಶೈಕ್ಷಣಿಕವಾಗಿ ರಾಜಕೀಯ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿದ್ದಾರೆ. ಅವರ ಮಕ್ಕಳು ಕೂಡಾ ಸರ್ಕಾರದ ಸೌಲಭ್ಯದಲ್ಲಿ ಶಿಕ್ಷಣ ಸೇರಿದಂತೆ ಎಲ್ಲವನ್ನು ಪಡೆಯುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಇಂತಹ ದ್ವಂದ್ವ ನೀತಿಗಳನ್ನು ವಿರೋಧಿ ಸುವುದಕ್ಕಾಗಿಯೇ ನಕ್ಸಲರು ಮತ್ತು ಕಮ್ಯೂನಿಷ್ಟರು ಹುಟ್ಟಿಕೊಳ್ಳುತ್ತಾರೆ. ಸರ್ಕಾರ ಮೀಸಲಾತಿಯಲ್ಲಿ ಪರಿಷ್ಕರಣೆ ಮಾಡುವುದರ ಮೂಲಕ ಎಲ್ಲಾ ಸಮಾಜದ ಬಡವರಿಗೂ ಕೂಡಾ ಸೌಲಭ್ಯವನ್ನು ನೀಡಬೇಕು ಎಂದರು.

ತಾವು ಇತ್ತೀಚೆಗೆ 6 ತಿಂಗಳ ಹಿಂದೆ ಶ್ರೀ ಪೀಠಕ್ಕೆ ಸ್ವಾಮೀಜಿಗಳಾಗಿ ನೇಮಕಗೊಂಡಿದ್ದು, ಈ ಹಿಂದೆ ಯೋಗದ ಮೂಲಕ ಸಮಾಜ ಸೇವೆ ಮಾಡುತ್ತಿದ್ದೆ, 8 ರಾಷ್ಟ್ರಗಳನ್ನು ಸುತ್ತಿದ ಅನುಭವವಿದೆ. ಪೀಠದ ಜವಾಬ್ದಾರಿ ಹೊತ್ತಿರುವುದರಿಂದ ಸಮಾಜದ ಅಭಿವೃದ್ಧಿಯ ಕರ್ತವ್ಯವು ಕೂಡಾ ನನ್ನದಾಗಿರುವುದರಿಂದ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗಾಗಲೇ ಪ್ರಸಾದದ ವ್ಯವಸ್ಥೆ ಸೇರಿದಂತೆ ಹಲವು ವಿಶೇಷತೆಗಳು ಇದ್ದು, ಸಮಾಜ ಬಾಂಧವರು ಪೀಠಕ್ಕೆ ಭೇಟಿ ನೀಡುವುದರ ಮೂಲಕ ಭಕ್ತಿ ಸಮರ್ಪಣೆ ಸೇರಿದಂತೆ ಸಾಮಾಜಿಕ ಹಾಗೂ ಧಾರ್ಮಿಕ ಜಾಗೃತಿ ಕೂಡಾ ಪಡೆದುಕೊಳ್ಳಬೇಕು ಎಂದರು.

 ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮಾತನಾಡಿ, ವೀರಶೈವ ಪಂಚಮಸಾಲಿ ಸಮಾಜ ಒಂದು ದೊಡ್ಡ ಸಮಾಜವಾಗಿದ್ದು, ಎಲ್ಲ ಸಮಾಜದವರೊಂದಿಗೆ ಅವಿನಾಭಾವ ಸಂಬಂಧ ಇರಿಸಿಕೊಂಡಂತಹ ಸಮಾಜದ ಅಭಿವೃದ್ಧಿ ಮತ್ತು ಮಾರ್ಗದರ್ಶನಕ್ಕಾಗಿ ವಚನಾನಂದ ಶ್ರೀಗಳಂತಹ ಒಬ್ಬ ಗುರುಗಳು ಲಭಿಸಿರುವುದು ಸಂತಸ ತಂದಿದೆ ಎಂದರು.
 
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿದರು. ತಾ.ಪಂ ಅಧ್ಯಕ್ಷೆ ಶಾರದಮ್ಮ, ಹಿರೇಹಡಗಲಿ ಗ್ರಾಪಂ ಅಧ್ಯಕ್ಷೆ ಕೊಂಪಿ ಚನ್ನಮ್ಮ, ಜಿ.ಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಸಮಾಜದ ಮುಖಂಡರಾದ ಅರವಳ್ಳಿ ವೀರಣ್ಣ, ಬಳ್ಳುಳ್ಳಿ ವೀರಣ್ಣ, ಎಸ್‌.ಹಾಲೇಶ, ಬ್ಯಾಲಹುಣಿ ಬಸವನಗೌಡ, ಪಿ.ವೀರಣ್ಣ, ಸೊಪ್ಪಿನ ಮಂಜುನಾಥ, ಹಾಗೂ ಬಿ.ಹನುಮಂತಪ್ಪ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.