ಕೊಂತೆಮ್ಮ ರೊಟ್ಟಿ ಆಚರಣೆ
Team Udayavani, Nov 27, 2018, 4:32 PM IST
ಸಿರುಗುಪ್ಪ: ಗೌರಿ ಹುಣ್ಣಿಮೆ ಅಂಗವಾಗಿ ಕೊಂತೆಮ್ಮರೊಟ್ಟಿ ಆಚರಣೆ ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕೊಂತೆಮ್ಮರೊಟ್ಟಿ ಆಚರಣೆ ಅಂಗವಾಗಿ 2 ಮಣ್ಣಿನ ಕೊಂತೆಮ್ಮಗಳನ್ನು ಸಂಜೆ ಮಾಳಿಗೆಯ ಮೇಲೆ ಸಗಣಿ ನೀರಿನಿಂದ ಸಾರಿಸಿ ರಂಗೋಲಿ ಹಾಕಿದ ಜಾಗದಲ್ಲಿಟ್ಟು ಕುಂಕುಮ, ಅರಿಶಿಣವಿಟ್ಟು ಅಮರೆ ಹೂವಿನಿಂದ ಅಲಂಕರಿಸಿ ಊದುಬತ್ತಿ ಹಚ್ಚಿ ಪೂಜೆ ನೆರವೇರಿಸಲಾಯಿತು. ಸಜ್ಜೆರೊಟ್ಟಿ, ಬೆಲ್ಲ, ತುಪ್ಪವನ್ನು ನೈವೇದ್ಯ ಮಾಡಿದ ನಂತರ ಕುಟುಂಬದ ಸದಸ್ಯರೆಲ್ಲರೂ ಸೇರಿ ಒಟ್ಟಾಗಿ ಭೋಜನ ಮಾಡುವುದು ಕೊಂತೆಮ್ಮರೊಟ್ಟಿ ಆಚರಣೆ ವಿಶೇಷ.
ಕೊಂತೆಮ್ಮರೊಟ್ಟಿ ಪೂಜೆಯ ಅಂಗವಾಗಿ ಸಜ್ಜೆ ರೊಟ್ಟಿ, ಜೊಳದ ರೊಟ್ಟಿ, ಚಪಾತಿ, ಎಣ್ಣೆ ಬದನೆಕಾಯಿ ಪಲ್ಯ, ಆಲೂಗಡ್ಡೆ ಪಲ್ಯ, ಹೆಸರು, ತೊಗರಿ, ಕಡ್ಲೆ, ಬಟಾಣಿ, ಅಲಸಂಕಾಳುಗಳ ಗುಗ್ಗರಿಗಳು, ಚಿತ್ರನ್ನಾ, ವೆಜೆಟೇಬಲ್ ಪಲಾವು, ಸಿಹಿಗಾರಿಗೆ ಮುಂತಾದ ವಿವಿಧ ಖಾದ್ಯಗಳನ್ನು ತಯಾರಿಸಿ ಕುಟುಂಬದ ಸದಸ್ಯರೆಲ್ಲರೂ ಸಾಮೂಹಿಕು ಭೋಜನ ಸವಿಯುತ್ತಾರೆ. ನಂತರ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ