ಆದರ್ಶ ಗ್ರಾಮದ ಅಭಿವೃದ್ಧಿ ವೀಕ್ಷಿಸಿದ ಮೈಸೂರು ವಿವಿ ತಂಡ


Team Udayavani, Dec 2, 2018, 4:08 PM IST

bell-1.jpg

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಆದರ್ಶ ಗ್ರಾಮದ ಅಭಿವೃದ್ಧಿ ಕಾಮಗಾರಿಗಳನ್ನು ಮೈಸೂರು ವಿಶ್ವವಿದ್ಯಾಲಯದ ತಂಡ ಪರಿಶೀಲಿಸಿ ವರದಿ ಸಂಗ್ರಹಿಸಿತು. ಆದರ್ಶ ಗ್ರಾಮದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸೋನಲ್‌ ಅವರು ಗ್ರಾಪಂ ಅಧ್ಯಕ್ಷೆ ಹಾಗೂ ಸದಸ್ಯರೊಂದಿಗೆ ಅಭಿವೃದ್ಧಿ ಕುರಿತು ಸುಧೀರ್ಘ‌ ಚರ್ಚೆ ನಡೆಸಿದರು.

ಗ್ರಾಮದ ಶೈಕ್ಷಣಿಕ ಪ್ರಗತಿ, ಸ್ಮಾಟ್‌ಕ್ಲಾಸ್‌, ಶಾಲೆ ಬಿಟ್ಟವರ ಸಂಖ್ಯೆ, ಶಾಲೆ ಬಿಡಲು ಕಾರಣಗಳು ಯಾವವು ಎಂಬುದರ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಮಕ್ಕಳ ದೈಹಿಕ ಕ್ಷಮತೆ, ಪೌಷ್ಟಿಕಾಂಶ, ಹೆರಿಗೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಪೂರಕವಾಗಿದೆಯೇ ಎಂದು ಪ್ರಶ್ನಿಸಿದರು.

ಗ್ರಾಪಂ ಸದಸ್ಯ ಗೌರಜ್ಜನವರ ಗಿರೀಶ್‌ ಪ್ರತಿಕ್ರಿಯಿಸಿ, ಅಂಗನವಾಡಿ ಮಕ್ಕಳು ಉತ್ತಮ ಆರೋಗ್ಯ ಹೊಂದಿದ್ದಾರೆ. ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಕೇವಲ 12 ಇದ್ದು, ಪುನಃ ಶಾಲೆಗೆ ಕರೆತರಲು ಶಿಕ್ಷಕರು ಹಾಗೂ ಸಮುದಾಯದೊಂದಿಗೆ ಪ್ರಯತ್ನಿಸುತ್ತಿದ್ದೇವೆ. 7ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು 8ನೇ ತರಗತಿಗೆ ದಾಖಲಾತಿ ಹೊಂದಿಲ್ಲ. ಮೂಲ ಕಾರಣ ಗುರುತಿಸಿ ಪೋಷಕರ ಮನವೊಲಿಸಿ ಶಾಲೆಗೆ ಕರೆತರಲಾಗುವುದು ಎಂದರು.

 ಆದರ್ಶ ಗ್ರಾಮದ ಅಭಿವೃದ್ಧಿ ಅಷ್ಟಕ್ಕಷ್ಟೇ. 131 ಕಾಮಗಾರಿಗಳ ಪಟ್ಟಿಯಲ್ಲಿ 89 ಕಾಮಗಾರಿಗಳಿಗೆ ಈವರೆಗೂ ಅನುದಾನವಿಲ್ಲ. ಆದರ್ಶ ಗ್ರಾಮ ಯೋಜನೆಯಡಿ 7 ಪರಿವರ್ತಕ, 38 ಕಂಬ, ಗ್ರಂಥಾಲಯಕ್ಕೆ ಜೆರಾಕ್ಸ್‌ ಮಿಷನ್‌ ಕೊಟ್ಟಿದ್ದು ಬಿಟ್ರೆ ಪ್ರಮುಖವಾಗಿ ಏನೂ ನೀಡಿಲ್ಲ ಎಂದು ತಿಳಿಸಿದರು.

ವೀಕ್ಷಣೆ: ತಂಡ ನಿಗದಿತ ಪ್ರಶ್ನೆಗಳನ್ನು ಆಯ್ಕೆ ಮಾಡಿಕೊಂಡು ಜನಪ್ರತಿನಿಧಿಗಳು, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಧೂಮಪಾನ, ಮಧ್ಯಪಾನ, ಶಿಕ್ಷಣದ ಸ್ಥಿತಿಗತಿ ಕುರಿತು ಚರ್ಚಿಸಿದರು. ತಂಡ ಟೆಂಡರ್‌ ಹಂತದಲ್ಲಿರುವ ಕಾಮಗಾರಿಗಳನ್ನು ಕೂಡಲೇ ಅನುಷ್ಠಾನಗೊಳಿಸಿ ಎಂದು ಇಒ ಅವರಿಗೆ ಸೂಚಿಸಿತು. ವಸತಿ ಫಲಾನುಭವಿಗಳ ಮನೆ, ನರೇಗಾ ಯೋಜನೆಯ ಕಾಮಗಾರಿಗಳು, ಸಿಸಿರಸ್ತೆ, ಚರಂಡಿ, ದೋಬಿಘಾಟ್‌, ಗ್ರಂಥಾಲಯ, ಹಾಲು ಶಿಥೀಲಿಕರಣ ಘಟಕ ವೀಕ್ಷಿಸಿದರು.

ತಂಡದ ಸಹ ಪ್ರಾಧ್ಯಾಪಕ ನಿತಿನ್‌ ಅರಾತ್‌ ಮಾತನಾಡಿ, ತಂಬ್ರಹಳ್ಳಿ ಆದರ್ಶ ಗ್ರಾಮದ ಸಂಪೂರ್ಣ ಮಾಹಿತಿಯನ್ನು
ಯಥಾವತ್ತಾಗಿ ಕೇಂದ್ರಕ್ಕೆ ಸಲ್ಲಿಸಲಾಗುವುದು. ರಾಜ್ಯ ಸರಕಾರ ಎರಡು ಆದರ್ಶ ಗ್ರಾಮಗಳ ವರದಿ ನೀಡುವಂತೆ ಸೂಚಿಸಿದನ್ವಯ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು. 

ಇದೇವೇಳೆ ತಂಡ ಬಾಚಿಗೊಂಡನಹಳ್ಳಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಅಲ್ಲಿಯ ಜನರನ್ನು ತಂಬ್ರಹಳ್ಳಿ ಆದರ್ಶ ಗ್ರಾಮವಾಗಿದೆಯೇ ಎಂದು ಪ್ರಶ್ನಿಸಿದಾಗ, ಬಾಚಿಗೊಂಡನಹಳ್ಳಿ ಗ್ರಾಮಸ್ಥರು ಆ ಗ್ರಾಮಕ್ಕಿಂತ ನಮ್ಮ ಗ್ರಾಮದಲ್ಲಿಯೇ ಹೆಚ್ಚು ಅಭಿವೃದ್ಧಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಉಪನಿರ್ದೇಶಕ ಮುಕ್ಕಣ್ಣ ಕರಿಗಾರ್‌, ಇಒ ಬಿ. ಮಲ್ಲಾನಾಯ್ಕ, ಪಿಡಿಒ ಕೃಷ್ಣಮೂರ್ತಿ, ಗ್ರಾಪಂ ಅಧ್ಯಕ್ಷೆ ಗಂಗಾವತಿ ಗೌಸಿಯಾಬೇಗಂ, ಉಪಾಧ್ಯಕ್ಷೆ ಬಾಳಿಹಳ್ಳಿ ರತ್ನಮ್ಮ ಚನ್ನಪ್ಪ, ಗ್ರಾಪಂ ಸದಸ್ಯರಾದ ಮಡಿವಾಳ ಕೊಟ್ರೇಶ, ಸುಕುರ್‌ಸಾಬ್‌, ಶ್ರೀನಿವಾಸ, ತಳವಾರ ಹನುಮಂತಮ್ಮ, ಸೊಬಟಿ ಹರೀಶ್‌, ಕೊರವರ ಯಮನೂರಪ್ಪ, ಕೆ. ದೇವಮ್ಮ, ಕಾರ್ಯದರ್ಶಿ ಶರಣಪ್ಪ, ಕಂಪ್ಯೂಟರ್‌ ಅಪರೇಟರ್‌ ಕೊಟ್ರೇಶ ಕಾಶಿನಾಯ್ಕರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.