ಅಧಿವೇಶನದಲ್ಲಿ ಪ್ರಶ್ನಿಸಲು 50 ಪ್ರಶ್ನೆ ಸಿದ್ಧ


Team Udayavani, Dec 3, 2018, 4:15 PM IST

bell-1.jpg

ಬಳ್ಳಾರಿ: ಕೇಂದ್ರದ ಸಂಸತ್‌ನಲ್ಲಿ ಡಿ.11ರಿಂದ ನಡೆಯಲಿರುವ ಅಧಿವೇಶನದಲ್ಲಿ ಪ್ರಶ್ನಿಸುವ ಸಲುವಾಗಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚುಕ್ಕಿಯುಳ್ಳ ಮತ್ತು ಚುಕ್ಕಿರಹಿತ ಸೇರಿದಂತೆ ಒಟ್ಟು 50 ಪ್ರಶ್ನೆಗಳನ್ನು ಸಿದ್ಧಪಡಿಸಿ ಕೇಂದ್ರದ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಸಂಸದ ವಿ.ಎಸ್‌.ಉಗ್ರಪ್ಪ ತಿಳಿಸಿದರು.

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ ಆರಂಭವಾಗಲಿರುವ ಡಿ.11 ರಂದು ನಾನು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಬಳಿಕ ಬಳ್ಳಾರಿ ಕ್ಷೇತ್ರ, ರಾಜ್ಯ, ರಾಷ್ಟ್ರದ ಸಮಸ್ಯೆಗಳಿಗೆ ಜಿಲ್ಲೆಯ ಜನರ ಧ್ವನಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ಸಂಸತ್‌ ಅಧಿವೇಶನದಲ್ಲಿ ಪ್ರಶ್ನಿಸುವ ಸಲುವಾಗಿ ಚುಕ್ಕಿಸಹಿತ 25, ಚುಕ್ಕಿರಹಿತ 25 ಸೇರಿದಂತೆ ಒಟ್ಟು 50 ಪ್ರಶ್ನೆಗಳನ್ನು
ಸಿದ್ಧಪಡಿಸಿ ದೆಹಲಿಗೆ ಕಳುಹಿಸಿಕೊಟ್ಟಿದ್ದೇನೆ. ಸೋಮವಾರ ಸಂಬಂಧಪಟ್ಟ ಅಧಿಕಾರಿಗಳ ಕೈ ಸೇರಲಿದೆ ಎಂದು ತಿಳಿಸಿದರು. 

ಅಂತಾರಾಜ್ಯ ಜಿಲ್ಲೆಗಳ ಕುಡಿಯಲು ಸೇರಿ ಕೃಷಿ ಚಟುವಟಿಕೆಗೆ ನೀರುಣಿಸುವ ತುಂಗಭದ್ರಾ ಜಲಾಶಯದಲ್ಲಿ 33 ಟಿಎಂಸಿಯಷ್ಟು ಹೂಳು ಸಂಗ್ರಹವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಹೊಸಪೇಟೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ಕಳೆದ ಐದಾರು ವರ್ಷಗಳಿಂದ ನೆನಗುದಿಗೆ ಬೀಳಲು ಕಾರಣವೇನು? ಕೊಟ್ಟೂರು-ಹೊಸಪೇಟೆ ರೈಲು ಮಾರ್ಗದಲ್ಲಿ ಬ್ರಾಡ್‌ಗೆಜ್‌ ಆದ ಬಳಿಕ 1995ರಿಂದ ಪ್ರಯಾಣಿಕ ರೈಲು ಸಂಚಾರ ಸ್ಥಗಿತಗೊಂಡಿದೆ. ಇದೀಗ ಗೂಡ್ಸ್‌ರೈಲು ಮಾತ್ರ ಸಂಚರಿಸುತ್ತಿದೆ. ಈ ಮಾರ್ಗದಲ್ಲಿ ಪ್ರಯಾಣಿಕ ರೈಲು ಸಂಚಾರ ಯಾವಾಗ? ಈ ಭಾಗದ ಜನರ ಬೇಡಿಕೆಯಾಗಿದ್ದ ಬಳ್ಳಾರಿ-ಹೊಸಪೇಟೆ-ಹುಬ್ಬಳ್ಳಿ ಇಂಟರ್‌ ಸಿಟಿ ರೈಲು ಆರಂಭ ಯಾವಾಗ ಎಂಬ ಪ್ರಶ್ನೆಗಳು ಸೇರಿದಂತೆ ಜಿಲ್ಲೆಯನ್ನು ಆವರಿಸಿರುವ ಬರಪರಿಸ್ಥಿತಿ, ರೈತರ ಸಮಸ್ಯೆಗಳು, ಕುಡಿವ ನೀರು, ನೋಟು ಅಮಾನ್ಯಿಕರಣ ವಿಷಯಗಳ ಬಗ್ಗೆ ಸದನದಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕೆ ಮತ್ತು ಚರ್ಚಿಸುವುದಕ್ಕೆ ಅವಕಾಶ ಸಿಕ್ಕಷ್ಟನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕ್ಷೇತ್ರ ಮತ್ತು ರಾಜ್ಯದ ಸಮಸ್ಯೆ ಪ್ರಸ್ತಾಪಿಸುವ ಮತ್ತು ಬಗೆಹರಿಸುವುದಕ್ಕೆ ಪ್ರಯತ್ನಿಸುತೇನೆ ಎಂದರು.

ಜಿಲ್ಲೆಯ ಹಗರಿ ನದಿಗೆ ಬ್ರಿಡ್ಜ್ನಿ ರ್ಮಿಸುವ ವಿಷಯ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ವಿಧಾನಪರಿಷತ್‌ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯನವರನ್ನು ಕೇಳಿದ್ದೇನೆ. ಆ ಕುರಿತ ಮಾಹಿತಿ ಲಭ್ಯವಾದರೆ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಇನ್ನು ಇದಕ್ಕೂ ಮುನ್ನ ಅತಿಥಿ ಗೃಹದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮನೆಗಳಿಗೆ ಖಾತಾ ಕೊಡಿಸುವ, ಚುನಾವಣೆಯಲ್ಲಿ ಟ್ಯಾಕ್ಸಿ ಬಳಸಿಕೊಂಡು ಬಿಲ್‌ ಪಾವತಿಸದಿರುವುದು, ಶಿಕ್ಷಕರ ಸಮಸ್ಯೆಗಳು, ರೈತರ ಸಂಘದಿಂದ ಎಚ್‌ಎಲ್‌ಸಿ, ಎಲ್‌ಎಲ್‌ಸಿ ಕಾಲುವೆಗಳಿಗೆ ಎರಡನೇ ಬೆಳೆಗೆ ನೀರು ಹರಿಸುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಕಲ್ಲುಕಂಬ ಪಂಪಾಪತಿ, ಬಿ.ರಾಂಪ್ರಸಾದ್‌, ಅಸುಂಡಿ ಹೊನ್ನೂರಪ್ಪ, ಪಾಲಿಕೆ ಸದಸ್ಯ ಬೆಣಕಲ್‌ ಬಸವರಾಜ, ಬಿ.ಎಂ.ಪಾಟೀಲ್‌, ಪದ್ಮಾ ಸೇರಿದಂತೆ ಕಾರ್ಯಕರ್ತರು ಇದ್ದರು. 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.