ಚಿರತೆ ಸೆರೆಗೆ ಕ್ರಮ ಕೈಗೊಳ್ಳಲು ಒತ್ತಾಯ


Team Udayavani, Dec 14, 2018, 3:29 PM IST

bell-2.jpg

ಹೊಸಪೇಟೆ: ಇತ್ತೀಚಿನ ದಿನಗಳಲ್ಲಿ ಅರಣ್ಯದ ಅಂಚಿನ ಗ್ರಾಮಗಳಲ್ಲಿ ಚಿರತೆ ಹಾಗೂ ಕರಡಿ ದಾಳಿಗಳು ಹೆಚ್ಚಾಗುತ್ತಿದ್ದು, ಗ್ರಾಮಸ್ಥರು ಭಯದ ನೆರಳಿನಲ್ಲಿ ಕಾಲಕಳೆ 
ಯುಂತಾಗಿದೆ. ಇದಕ್ಕೆ ಸೋಮಲಾಪುರ ಗ್ರಾಮದಲ್ಲಿ ಚಿರತೆ ಮಗುವಿನ ಮೇಲೆ ದಾಳಿ ನಡೆಸಿಕೊಂದು ಹಾಕಿರುವ ಘಟನೆ ಕಣ್ಮುಂದೆ ಇದ್ದು, ಕೂಡಲೇ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗುರು ವಾರ ನಡೆದ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ಯಲ್ಲಿ ಸದಸ್ಯ ಸಿ.ಡಿ. ಮಹಾದೇವ ಆಗ್ರಹಿಸಿದರು.

ತಾಪಂ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷೆ ಜೋಗದ ನೀಲಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಅಂಚಿನ ಗ್ರಾಮದೊಳಗೆ ವನ್ಯಪ್ರಾಣಿಗಳು ಒಳನುಸಳದಂತೆ ತಂತಿಬೇಲಿ ನಿರ್ಮಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅರಣ್ಯ ಇಲಾಖೆ, ಚಿರತೆ ಸೆರೆಗೆ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ತಾಲ್ಲೂ ಕಿನ ಬಸವನದುರ್ಗ, ಗಾದಿಗನೂರು ಶಾಲೆಯ ವಿದ್ಯಾರ್ಥಿಗಳಿಗೆ ಕುಡಿಯಲು ನೀರಿಲ್ಲ. ಪರದಾಡುತ್ತಿದ್ದು, ಕುಡಿಯುವ ನೀರು ಪಡೆಯಲು ಇತರೆ ಜಾಗದಲ್ಲಿ ಮಕ್ಕಳು ತಿರುಗಾಡುತ್ತಿದ್ದಾರೆ ಎಂದು ಸದಸ್ಯ ಗಾದಿಲಿಂಗಪ್ಪ ಸಭೆಯ ಗಮನ ಸೆಳೆದರು. ತಾಲೂ ಕಿನ ಚಿಲಕನಹಟ್ಟಿ, ಸೋಮಲಾಪುರ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವವಾಗಿದೆ. ಕೂಡಲೇ ಗ್ರಾಮದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸೋಮಲಾಪುರ ಗ್ರಾಮದ ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಸದಸ್ಯೆ ಉಮಾದೇವಿ ಸಭೆಯಲ್ಲಿ ಹೇಳುತ್ತಿದಂತಯೇ ಸಂಸ್ಥೆಯ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ನೀಲಪ್ಪ ಶೀಘ್ರವೇ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸುವುದಾಗಿ ಭರ ವಸೆ ನೀಡಿದರು. ಒಂದು ವಾರದೊಳಗೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಪಂ ಇಒ ವೆಂಕೋಬಪ್ಪ ಅಧಿಕಾರಿಗೆ ತಾಕೀತು ಮಾಡಿದರು.

ಮುಂಬರುವ 2019ರಲ್ಲಿ ಲೋಕ ಸಭೆ ಚುನಾವಣೆ ಬರಲಿದ್ದು, ಚಿಲಕನಹಟ್ಟಿ ಗ್ರಾಮ ದಲ್ಲಿ ಕೇವಲ 2 ಮತಗಟ್ಟೆಗಳಿ ದ್ದು, ಗ್ರಾಮ ಸ್ಥರು ಸುಮಾರು 1.5 ಕಿ.ಮೀ. ದೂರದ ಹಾರೋನಹಳ್ಳಿ ಮತ ಕೇಂದ್ರಕ್ಕೆ ಮತ ಚಲಾಯಿಸಲು ಹೋಗಬೇಕಾದ ಪರಿಸ್ಥಿತಿ ಇದೆ. ಕೂಡಲೇ ಚುನಾ ವಣೆ ಮುನ್ನ ಚಿಲಕನಹಟ್ಟಿ ಗ್ರಾಮದಲ್ಲಿ ಅಗತ್ಯ ಮತಗಟ್ಟೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್‌. ರಾಜಪ್ಪ ಒತ್ತಾಯಿಸಿದರು.

ಚುನಾವಣೆ ಗುರುತಿನ ಚೀಟಿಗಾಗಿ ಅನೇಕ ಬಾರಿ ಅರ್ಜಿ ಸಲ್ಲಿಸಿದರೂ ಜನರಿಗೆ ಗುರುತಿನ ಚೀಟಿ ಸಿಗುತ್ತಿಲ್ಲ. ಚುನಾವಣೆಯಲ್ಲಿ ಗ್ರಾಮಸ್ಥರು ಮತದಾನ ದಿಂದ ದೂರ ಉಳಿಯುಂತಾಗುತ್ತದೆ ಕೂಡಲೇ ಗುರುತಿನ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಬೇಕು ಸದಸ್ಯೆ ನಾಗವೇಣಿ ಬಸವರಾಜ್‌ ಒತ್ತಾಯಿಸುತ್ತಿದಂತಯೇ ಕಂದಾಯ ಅಧಿಕಾರಿ ಮಂಜುನಾಥ್‌, ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಉಪಾಧ್ಯಕ್ಷ ಬಿ.ಎಸ್‌.ಶಿವಮೂರ್ತಿ ಸೇರಿದಂತೆ ವಿವಿಧ ಇಲಾಖಾಧಿಕಾರಿ ಸಭೆಯಲ್ಲಿ ಹಾಜರಿದ್ದರು.

ಚಿರತೆ ಸೆರೆಗೆ ಮೂರು ಕಡೆ ಬೋನ್‌ ಅಳವಡಿಕೆ
ಕಂಪ್ಲಿ: ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಚಿರತೆ ಮೂರು ವರ್ಷದ ಬಾಲಕನನ್ನು ಬಲಿ ಪಡೆದ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇದೀಗ ಗ್ರಾಮದ ಮೂರು ಕಡೆಗಳಲ್ಲಿ ಚಿರತೆ ಸೆರೆಗೆ ಬೋನ್‌ಗಳನ್ನು ಅಳವಡಿಸಿದೆ. ಜನವಸತಿಯಲ್ಲಿದ್ದ ಗಿಡಗಂಟೆ ತೆರವುಗೊಳಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರತರಾಗಿದ್ದಾರೆ.

ಸ್ಥಳೀಯರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಈಗಾಗಲೇ ಚಿರತೆ ಸೆರೆಗಾಗಿ ಒಂದು ಬೋನ್‌ ಅಳವಡಿಸಿದ್ದರು. ಇದೀಗ ಇನ್ನೆರಡು ಬೋನ್‌ ಗ್ರಾಮಕ್ಕೆ ತಂದಿದ್ದು, ಚಿರತೆ ಸೆರೆಗೆ ಸೂಕ್ತ ಸ್ಥಳದಲ್ಲಿ ಅಳವಡಿಸಿದ್ದಾರೆ. ಜೊತೆಗೆ ಸ್ಥಳೀಯರು ಸಂಚರಿಸಲು ಖಾಸಗಿ ಜಮೀನಿನಲ್ಲಿನ ಮುಳ್ಳಿನ ಗಿಡ ಗಂಟೆಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುವಲ್ಲಿ ನಿರತರಾಗಿದ್ದು, ಸಾರ್ವಜನಿಕರು ಸಂಚರಿಸಲು ತಾತ್ಕಾಲಿಕ ರಸ್ತೆ ನಿರ್ಮಿಸಿದ್ದಾರೆ.
 
ಜನವಸತಿಯ ಅಕ್ಕಪಕ್ಕ ಇರುವ ಗಿಡಗಂಟೆ ತೆರವುಗೊಳಿಸಿದರೆ ಚಿರತೆ ಈ ಮಾರ್ಗದಲ್ಲಿ ಸುಳಿಯುವುದಿಲ್ಲ. ಒಂದೆರಡು ದಿನಗಳಲ್ಲಿ ಚಿರತೆ ಸೆರೆ ಹಿಡಿದು ನಂತರ ಅರಣ್ಯ ಇಲಾಖೆ ಮತ್ತು ನರೇಗಾ ಯೋಜನೆಯಡಿ ಖಾಸಗಿ ಜಮೀನಿನಲ್ಲಿರುವ ಗಿಡಗಂಟೆ ತೆರವುಗೊಳಿಸಲಾಗುವುದು.

ಗುಡ್ಡದಂಚಿನಲ್ಲಿ ಸೋಲಾರ ದೀಪ ಅಳವಡಿಸುವ ಜೊತೆಗೆ ಜಿಪಂ ಸಿಇಒ ಅವರೊಂದಿಗೆ ಚರ್ಚಿಸಿ ಸೋಲಾರ ತಂತಿ ಬೇಲಿ ಅಳವಡಿಸಲಾಗುವುದು ಎಂದು ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಪಿ.ರಮೇಶ್‌ ಕುಮಾರ್‌ ತಿಳಿಸಿದರು. ಈ ವೇಳೆ ಅರಣ್ಯ ಇಲಾಖೆಯ ದೇವರಾಜ್‌, ಸಿಬ್ಬಂದಿ ಸಾಮೀದ್‌, ಸಿದ್ದಪ್ಪ, ಕುಮಾರ್‌ ಇನ್ನಿತರರಿದ್ದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.