ಜ.5ಕ್ಕೆಸುಕೋ ಬ್ಯಾಂಕ್‌ ರಜತ ಮಹೋತ್ಸವ


Team Udayavani, Dec 16, 2018, 11:32 AM IST

gul-5.jpg

ಬಳ್ಳಾರಿ: ನೆರೆಯ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಆರಂಭವಾಗಿದ್ದ ಸುಕೋ ಬ್ಯಾಂಕ್‌ 25 ವರ್ಷ ಪೂರ್ಣಗೊಳಿಸಿದ್ದ ಹಿನ್ನೆಲೆಯಲ್ಲಿ 2019, ಜ.1ರಿಂದ ವರ್ಷವಿಡೀ ಎಲ್ಲ ಶಾಖೆಗಳಲ್ಲಿ “ರಜತ ಸಂಭ್ರಮ’ ಆಚರಿಸಲಾಗುತ್ತದೆ
ಎಂದು ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನ ಬೆಳ್ಳಿಹಬ್ಬ ಸಂಭ್ರಮದ ಹಿನ್ನೆಲೆಯಲ್ಲಿ ಜ.5ರಂದು ಬೆಳಗ್ಗೆ 6 ಗಂಟೆಗೆ “ರಜತ ಸಂಭ್ರಮ’ಕ್ಕೆ ಚಾಲನೆ ನೀಡಲಾಗುವುದು. ಅಂದು ಬೆಳಗ್ಗೆ 6ಕ್ಕೆ “ಸುಸ್ಥಿರ ಕೃಷಿ’ಗಾಗಿ
ಮ್ಯಾರಥಾನ್‌, ಮಧ್ಯಾಹ್ನ 12 ಗಂಟೆಗೆ ಬರ ಗೆದ್ದ ಕೃಷಿಕರ ಜೊತೆ ಜಿಪಂ “ನಜೀರ್‌ ಸಾಬ್‌’ ಸಭಾಂಗಣದಲ್ಲಿ ಸಂವಾದ.

ಉತ್ತರ ಕರ್ನಾಟಕದಲ್ಲಿ ಮರೆಯಾದ ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆ ಕುರಿತು “ಫುಡ್‌ ಟ್ಯಾಲೆಂಟ್‌ ಹಂಟ್‌
ಫಾರ್‌ ಸ್ಟಾರ್ಟ್‌ಅಪ್‌’ ಕಾರ್ಯಕ್ರಮ ಮತ್ತು ಅಂದು ಸಂಜೆ 6 ಗಂಟೆಗೆ ಸುಕೃತ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ, ಸುಕೋಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದರು.
 
ರಜತ ಸಂಭ್ರಮದ ಅಂಗವಾಗಿ ಜ.5ರಂದು ಬೆಳಗ್ಗೆ ನಗರದಲ್ಲಿ ಮ್ಯಾರಥಾನ್‌ ಓಟ ನಡೆಯಲಿದೆ. ಇಲ್ಲಿನ ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾಗುವ ಓಟವು ಗಡಗಿ ಚನ್ನಪ್ಪ ವೃತ್ತ, ಎಚ್‌.ಆರ್‌.ಗವಿಯಪ್ಪ ವೃತ್ತ, ವಾಲ್ಮೀಕಿ ವೃತ್ತದ ಮೂಲಕ ಪುನಃ ಕನಕದುರ್ಗಮ್ಮ ದೇವಸ್ಥಾನ ಆವರಣಕ್ಕೆ ತಲುಪಲಿದೆ. ಓಟದಲ್ಲಿ ಕೃಷಿ ಸಾಧಕರು, ರೈತರು, ಸುಕೃತ ಕೃಷಿ ಪ್ರಶಸ್ತಿ ಪುರಸ್ಕೃತರು, ಪ್ರಗತಿಪರರು, ಕೃಷಿ ತಜ್ಞರು, ವಿದ್ಯಾರ್ಥಿಗಳು ಮತ್ತು ನಗರವಾಸಿಗಳು ಸೇರಿ ಓಟದಲ್ಲಿ
1000ಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ. 

ವಿಜೇತರಿಗೆ ಪ್ರಥಮ ಬಹುಮಾನ 25,000 ರೂ., ದ್ವಿತೀಯ 15,000 ರೂ., ಮತ್ತು ತೃತೀಯ ಬಹುಮಾನ 10000 ರೂ. ನೀಡಲಾಗುತ್ತದೆ. 14 ವರ್ಷ ಮೇಲ್ಪಟ್ಟವರಿಗೆ ಓಟದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ ಕಲ್ಪಿಸಿದ್ದು, ಬ್ಯಾಂಕ್‌ನ ಯಾವುದಾದರೂ ಶಾಖೆಯಲ್ಲಿ ಹೆಸರು ನೋಂದಾಯಿಸಬಹುದು ಎಂದರು.

ಬರ ಗೆದ್ದ ಕೃಷಿಕರೊಂದಿಗೆ ಸಂವಾದ: ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಪಂ ನಜೀರ್‌ ಸಭಾಂಗಣದಲ್ಲಿ
ಬರ ಗೆದ್ದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಛಲದಿಂದ ಕೃಷಿಯಲ್ಲಿ ಯಶಸ್ಸನ್ನು ಸಾಧಿಸಿ, ನಾಡಿನ ಕೃಷಿಕರಿಗೆ ಮಾದರಿಯಾಗಿ, ಅನೇಕರಿಗೆ ಮಾರ್ಗದರ್ಶನ ನೀಡುತ್ತಿರುವ ಬರ ಗೆದ್ದ ಅನೇಕ ರೈತರನ್ನು ಭೇಟಿ ಮಾಡಿ, 45 ಸಾಧಕರನ್ನು ಗುರುತಿಸಿ, ಸಂವಾದಕ್ಕೆ ಆಯ್ಕೆ ಮಾಡಲಾಗಿದೆ. ಈ ಸಾಧಕರು ಕೃಷಿಯನ್ನು ಆಯ್ಕೆ ಮಾಡಿಕೊಂಡ ಹಿನ್ನೆಲೆ, ಶ್ರಮ, ಗುರಿ ತಲುಪಿದ ಯೋಜನೆ (ಪ್ಲಾನಿಂಗ್‌), ಯಶಸ್ಸು, ಎದುರಿಸಿದ ಸವಾಲುಗಳು, ಗುರಿ ತಲುಪಿದಾಗ ಸಿಕ್ಕ ಸಮಾಧಾನ ಬಗ್ಗೆ ಮನದಾಳದ ಮಾತುಗಳ ಮೂಲಕ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ ಎಂದರು.

ಸಿರಿಧಾನ್ಯ ಖಾದ್ಯ ಸ್ಪರ್ಧೆ: ನಗರದ ಬಸವ ಭವನದಲ್ಲಿ ಉತ್ತರ ಕರ್ನಾಟಕದ ಮರೆತು ಹೋದ ತಿನಿಸು, ಸಿರಿಧಾನ್ಯ
ಖಾದ್ಯಗಳ ತಯಾರಿಕೆ ಸ್ಪರ್ಧೆ ಮತ್ತು ಕಡ್ಡಾಯ ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯು ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆದು, ಕೊನೆಯ ಸುತ್ತಿನಲ್ಲಿ ಮೆಗಾ ಫೈನಲ್‌ (ಬಳ್ಳಾರಿಯಲ್ಲಿ) ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದವರು, ಮೆಗಾ ಫೈನಲ್‌ಗೆ ಆಯ್ಕೆಯಾಗಲಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ 10,000 ರೂ., ದ್ವಿತೀಯ 7500 ರೂ., ಮತ್ತು ತೃತೀಯ ಬಹುಮಾನವಾಗಿ 5000 ರೂ. ನೀಡಲಾಗುತ್ತದೆ. ಮೆಗಾ ಫೈನಲ್‌ ನಲ್ಲಿ ಪ್ರಥಮ ಸ್ಥಾನಕ್ಕೆ 25,000 ರೂ., ದ್ವಿತೀಯ 15,000 ರೂ., ತೃತೀಯ
ಸ್ಥಾನಕ್ಕೆ 10,000 ರೂ. ನೀಡಲಾಗುತ್ತದೆ ಎಂದರು.

ಜಿಲ್ಲಾವಾರು ಮತ್ತು ಮೆಗಾ ಫೈನಲ್‌ನ ಎಲ್ಲಾ ಸ್ಪರ್ಧೆಗಳಲ್ಲೂ ಜನಪ್ರಿಯ ನಟ, ಸಿಹಿ ಕಹಿ ಚಂದ್ರು ಪ್ರಮುಖ ತೀರ್ಪುಗಾರರು. ಸಮನ್ವಯ ತೀರ್ಪುಗಾರರಾಗಿ ಮರ್ಚೇಡು ಮಲ್ಲಿಕಾರ್ಜುನಗೌಡ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಸುಕೃತ ಕೃಷಿ ಪ್ರಶಸ್ತಿಗೆ ಆಯ್ಕೆ ಮಾಡಿರುವ ಸಾಧಕರಿಗೆ ಸನ್ಮಾನ ಮಾಡಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. 1 ಲಕ್ಷ ರೂ. ಪಾರಿತೋಷಕ ನೀಡಲಾಗುತ್ತದೆ ಎಂದರು. ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಪರಿಮಳಾಚಾರ್ಯ ಅಗ್ನಿಹೋತ್ರಿ, ಕಾರ್ಯದರ್ಶಿ ವೆಂಕಟೇಶ್‌ ರಾವ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.