ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾ ವಿಸರ್ಜನೆ


Team Udayavani, Dec 22, 2018, 4:41 PM IST

ray-1.jpg

ಹೊಸಪೇಟೆ: ಕಳೆದ 45 ದಿನಗಳಿಂದ ಆರಂಭಗೊಂಡ ಶ್ರೀ ಹನುಮ ಮಾಲಾ ವ್ರತಾಚರಣೆ ಅತ್ಯಂತ ಶಾಂತಿ ಹಾಗೂ ಸಂಭ್ರಮದಿಂದ ಸಮೀಪದ ವಿಶ್ವಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ ಹನುಮ ಮಾಲೆ ವಿರ್ಸಜನೆ ಕಾರ್ಯಕ್ರಮ ನಡೆಯಿತು.

ರಾಜ್ಯದ ನಾನಾ ಕಡೆಯಿಂದ ಕೊರೆಯುವ ಚಳಿಯನ್ನು ಲೆಕ್ಕಿಸದೇ ಅಂಜನಾದ್ರಿ ಬೆಟ್ಟದಲ್ಲಿ ಸಹಸ್ರಾರು ಸಂಖ್ಯೆಯಲ್ಲಿಮಾಲಾಧಾರಿಗಳು ವಾಸ್ತವ್ಯ ಹೂಡಿದ್ದರು. ಬೆಳಗ್ಗೆ 4 ಗಂಟೆಗೆ ವಿನಾಯಕ ಅಗ್ನಿಹೋತ್ರಿ ನೇತೃತ್ವದ ತಂಡದ ಸದಸ್ಯರು ಪವಮಾನ ಹೋಮ ಮತ್ತು ಮನ್ಯೂ ಸೂಕ್ತ ಹೋಮ ನೆರವೇರಿಸಲಾಯಿತು.

ಹನುಮ ಮಾಲಾ ಸಮಿತಿ ಜಿಲ್ಲಾಧ್ಯಕ್ಷ ಗುದ್ಲಿ ಪರುಶರಾಮ, ವಿಶ್ವ ಹಿಂದೂ ಪರಿಷತ್‌ನ ಹಿರಿಯ ಮುಖಂಡ ನರಸಿಂಹ ಮೂರ್ತಿ, ಕಾರ್ಯದರ್ಶಿ ದಿನೇಶ್‌ ಪಟೇಲ್‌, ಆನಂದ್‌ ಕೃಷ್ಣ, ಆನೆಗುಂದಿ ಸಂಸ್ಥಾನದ ಕೃಷ್ಣದೇವರಾಯ ಸಮ್ಮುಖದಲ್ಲಿ ಸಾಮೂಹಿಕ ಪೂರ್ಣಾಹುತಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಮಾಲೆ ವಿಸರ್ಜನೆ: ಕ್ಷೇತ್ರದಲ್ಲಿ ಪವಮಾನ ಹೋಮ ಸೇರಿದಂತೆ ನಾನಾ ಪೂಜೆಗಳ ಬಳಿಕ ಮಾಲಾಧಾರಿಗಳು ಮಾಲೆಯನ್ನು
ವಿಸರ್ಜನೆ ಮಾಡಿ, ಹನುಮಂತ ದೇವರಲ್ಲಿ ಪ್ರಾರ್ಥಿಸಿದರು. ಬೆಳಗ್ಗೆಯಿಂದ ಪ್ರಾರಂಭಗೊಂಡ ಮಾಲೆ ವಿಸರ್ಜನೆ ಕಾರ್ಯ
ಸಂಜೆಯವರೆಗೆ ನಡೆಯಿತು. ಸುಮಾರು 27 ಸಾವಿರ ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಿದರು.

ಸಂಜೆಯಾದರೂ ರಾಜ್ಯದ ನಾನಾ ಕಡೆಯಿಂದ ಮಾಲಾಧಾರಿಗಳು ಬೆಟ್ಟಕ್ಕೆ ಆಗಮಿಸುತ್ತಿರುವುದು ಕಂಡು ಬಂತು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ ರಾಜ್ಯ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಹಿರೇಮಠ್…, ವರ್ಷದಿಂದ
ವರ್ಷಕ್ಕೆ ಮಾಲಾಧಾರಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಪ್ರಸಕ್ತ ವರ್ಷ 25 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಬೆಟ್ಟಕ್ಕೆ
ಆಗಮಿಸಿ, ಭಕ್ತಿ ಸಮರ್ಪಿಸಿದ್ದಾರೆ. ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕಾರಿಗಳು ಅತ್ಯಂತ ಕಾಳಜಿ ವಹಿಸಿ, ಮಾಲಾಧಾರಿಗಳಿಗೆ
ಭೋಜನ ವ್ಯವಸ್ಥೆ, ಭಕ್ತರಿಗೆ ದರ್ಶನದ ವ್ಯವಸ್ಥೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಅಧಿಕಾರಿಗಳು
ಸ್ಥಳದಲ್ಲಿ ಸೂಕ್ತ ಭದ್ರತೆ ಒದಗಿಸಿ ಮಾಲಾ ವಿಸರ್ಜನೆಗೆ ಅವಕಾಶ ಕಲ್ಪಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಈ ವೇಳೆ ವಿಶ್ವ
ಹಿಂದೂ ಪರಿಷತ್‌ ರಾಷ್ಟ್ರೀಯ ಕಾರ್ಯದರ್ಶಿ ಕೇಶವ ಹೆಗಡೆ, ಅಖೀಲ ಭಾರತ ಸಂಘಟನಾ ಕಾರ್ಯದರ್ಶಿ ಮಿಲೀಂದ
ಪರಾಂಡೆ, ಭಜರಂಗ ದಳದ ರಾಷ್ಟ್ರೀಯ ಕಾರ್ಯದರ್ಶಿ ಸೂರ್ಯನಾರಾಯಣ, ವಿಎಚ್‌ಪಿಯ ಆನಂದ್‌ ಕೃಷ್ಣ, ಅನಿಲ್‌ ಜೋಶಿ, ರೇವಣಸಿದ್ದಪ್ಪ, ಸುನೀಲ್‌, ರಮೇಶ್‌, ಗುದ್ಲಿ ಪರುಶರಾಮ್‌, ಬಸವರಾಜ್‌ ನಾಲತ್ವಾಡ್‌, ರಮೇಶ್‌ ಗುಜ್ಜಲ್‌ ಇನ್ನಿತರರಿದ್ದರು.

ಪವಮಾನ ಹೋಮ: ಹಂಪಿಯ ಆನೆಗುಂದಿಯ ಆಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ ಪವಮಾನ ಹೋಮ ನಡೆಯಿತು.
ನಗರದ ಹನುಮ ಮಾಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪವಮಾನ ಹೋಮದಲ್ಲಿ ಸಹಸ್ರಾರು ಹನುಮ ಮಾಲಾಧಾರಿಗಳು
ಪೂಜೆ ಸಲ್ಲಿಸಿದರು. ಅಪ್ಪರಾವ್‌ ಸಾನಬಾಳ್‌, ಸಂದೀಪ್‌ಸಿಂಗ್‌ , ಗೋವಿಂದ್‌ ಕುಲಕರ್ಣಿ ನೇತೃತ್ವದಲ್ಲಿ ಮಾಲಾಧಾರಿಗಳ
ಮಾಲಾ ವಿಸರ್ಜನಾ ಕಾರ್ಯಕ್ರಮ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿದ ಬಳಿಕ ಸಂಪನ್ನವಾಯಿತು.
 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.